Homeಮುಖಪುಟಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭೆಯಿಂದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದ ಆರು ಜನ ಕಾಂಗ್ರೆಸ್ ಸದಸ್ಯರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಪಕ್ಷದ ವಿಪ್ ಅನ್ನು ಧಿಕ್ಕರಿಸಿ ಬಿಜೆಪಿ ಸೇರಿದ ಆರು ಬಂಡಾಯ ಶಾಸಕರ ಅನರ್ಹತೆಯ ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ, ಬಿಜೆಪಿ 2 ಸ್ಥಾನಗಳನ್ನು ಗೆದ್ದಿದೆ; ಕಾಂಗ್ರೆಸ್ ಶಾಸಕರ ಸಂಖ್ಯೆ ಈಗ 38ಕ್ಕೆ ತಲುಪಿದೆ.

ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ರಂಜಿತ್ ಸಿಂಗ್ ಅವರು ಸುಜಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಮತ್ತು ಅನುರಾಧ ರಾಣಾ ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿತಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಗಾರ್ಗೆಟ್‌ನಿಂದ ಕಾಂಗ್ರೆಸ್‌ನ ರಾಕೇಶ್ ಕಾಲಿಯಾ ಗೆದ್ದಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆಯ ಕುಟ್ಲೆಹಾರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಶರ್ಮಾ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಸುಧೀರ್ ಶರ್ಮಾ ಮತ್ತು ಇಂದರ್ ದತ್ ಲಖನ್‌ಪಾಲ್ ಕ್ರಮವಾಗಿ ಧರ್ಮಶಾಲಾ ಮತ್ತು ಬಸ್ಸರ್‌ನಲ್ಲಿ ಗೆಲುವು ಸಾಧಿಸಿದ್ದಾರೆ.

ಪಕ್ಷದ ವಿಪ್ ಪಾಲಿಸದ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ನಂತರ ಲೋಕಸಭೆ ಚುನಾವಣೆಯ ಜೊತೆಗೆ ಧರ್ಮಶಾಲಾ, ಲಾಹೌಲ್-ಸ್ಪಿತಿ, ಸುಜಾನ್‌ಪುರ್, ಬರ್ಸರ್, ಗ್ಯಾಗ್ರೆಟ್ ಮತ್ತು ಕುಟ್ಲೆಹಾರ್ ಸೇರಿದಂತೆ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗಳು ಅನಿವಾರ್ಯವಾಗಿತ್ತು.

ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೈತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಅವರು ಸದನದಲ್ಲಿ ಹಾಜರಾಗಲು ಮತ್ತು ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ನಡೆದ ಹೈವೋಲ್ಟೇಜ್ ಮಾಧ್ಯಮಗಳ ನಾಟಕದ ಮಧ್ಯೆ ಕಾಂಗ್ರೆಸ್‌ನ ಆರು ಶಾಸಕರನ್ನು ಅನರ್ಹಗೊಳಿಸಿದ ನಂತರ ಉಪಚುನಾವಣೆ ನಡೆಸಲಾಯಿತು. ಈ ಆರು ಬಂಡಾಯ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಫೆಬ್ರವರಿ 27 ರಂದು, ಆರು ಬಂಡಾಯ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಹರ್ಷ್ ಮಹಾಜನ್ ಪರ ಮತ ಚಲಾಯಿಸಿದರು. 68 ಸದಸ್ಯ ಬಲದ ಹಿಮಾಚಲದಲ್ಲಿ ಹಳೆಯ ಪಕ್ಷ ಪೂರ್ಣ ಬಹುಮತ ಹೊಂದಿದ್ದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರಾಭವಗೊಂಡಿದ್ದಾರೆ. 6 ಕಾಂಗ್ರೆಸ್ ಶಾಸಕರ ಬಂಡಾಯದ ನಂತರ, ಪ್ರತಿಪಕ್ಷ ಬಿಜೆಪಿಯು ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ರಾಜೀನಾಮೆಗೆ ಕರೆ ನೀಡಿದ್ದರಿಂದ ಕಾಂಗ್ರೆಸ್ ಸರ್ಕಾರವು ಬೆದರಿಕೆಯನ್ನು ಎದುರಿಸಿತು.

ಎಲ್ಲ ಆರು ಬಂಡಾಯ ಕಾಂಗ್ರೆಸ್ ಶಾಸಕರು ಬಿಜೆಪಿ ಟಿಕೆಟ್‌ನಲ್ಲಿ ಮತ್ತೆ ಸ್ಪರ್ಧಿಸಿದ್ದಾರೆ. ರಾಜಿಂದರ್ ರಾಣಾ, ಸುಧೀರ್ ಶರ್ಮಾ, ದೇವಿಂದರ್ ಕುಮಾರ್ ಭುಟ್ಟೊ, ಚೈತನ್ಯ ಶರ್ಮಾ, ಇಂದರ್ ದತ್ ಲಖನ್‌ಪಾಲ್ ಮತ್ತು ರವಿ ಠಾಕೂರ್ ಅವರು ಕಣದಲ್ಲಿದ್ದ ಆರು ಬಂಡಾಯ ನಾಯಕರು. ತಮ್ಮ ಪ್ರಾಮಾಣಿಕತೆಯನ್ನು ಬಿಜೆಪಿಗೆ ಮಾರಾಟ ಮಾಡಲು ಕೋಟಿಗಟ್ಟಲೆ ಸ್ವೀಕರಿಸಿದ್ದಾರೆ ಎಂದು ಸಿಎಂ ಸುಖು ಆರೋಪಿಸಿದ್ದಾರೆ.

ಶಾಸಕರ ಬಲಾಬಲ:

ಒಟ್ಟು ಕ್ಷೇತ್ರಗಳು: 68

ಕಾಂಗ್ರೆಸ್: 38

ಬಿಜೆಪಿ: 27

ಖಾಲಿ ಉಳಿದಿರುವ ಸ್ಥಾನ: 3

ಇದನ್ನೂ ಓದಿ; “ನಿಮ್ಮ ಸಹೋದರಿಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ..”; ರಾಹುಲ್‌ ಕುರಿತು ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...