Homeಮುಖಪುಟಹಿಮಾಚಲ ರಾಜಕೀಯ ಬಿಕ್ಕಟ್ಟು: 15 ಬಿಜೆಪಿ ಶಾಸಕರನ್ನು ಉಚ್ಚಾಟಿಸಿದ ವಿಧಾನಸಭೆ ಸ್ಪೀಕರ್

ಹಿಮಾಚಲ ರಾಜಕೀಯ ಬಿಕ್ಕಟ್ಟು: 15 ಬಿಜೆಪಿ ಶಾಸಕರನ್ನು ಉಚ್ಚಾಟಿಸಿದ ವಿಧಾನಸಭೆ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದ ವಿಧಾನಸಭೆಯು 15 ಬಿಜೆಪಿ ಶಾಸಕರನ್ನು ಘೋಷಣೆಗಳನ್ನು ಕೂಗಿದ ಮತ್ತು ದುರ್ವರ್ತನೆ ಆರೋಪದ ಮೇಲೆ ಉಚ್ಚಾಟಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ ಒಂದು ದಿನದ ನಂತರ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಉದ್ವಿಗ್ನತೆಯ ನಡುವೆ ಈ ಬೆಳವಣಿಗೆ ನಡೆದಿದೆ.

ಇಂದು ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ 15 ಬಿಜೆಪಿ ಶಾಸಕರನ್ನು ಉಚ್ಚಾಟಿಸುವ ನಿರ್ಧಾರವನ್ನು ಸ್ಪೀಕರ್ ತೆಗೆದುಕೊಂಡಿದ್ದಾರೆ. ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರ ಕೊಠಡಿಯೊಳಗೆ ಅವರು ಘೋಷಣೆಗಳನ್ನು ಕೂಗಿದ್ದರು.

ಉಚ್ಛಾಟಿತ ಬಿಜೆಪಿ ಶಾಸಕರೆಂದರೆ ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಾನ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್, ಮತ್ತು ಇಂದರ್ ಸಿಂಗ್ ಗಾಂಧಿ.

ಜೈರಾಮ್ ಠಾಕೂರ್ ಅವರು ಇಂದು ಮುಂಜಾನೆ ತಮ್ಮನ್ನು ಹೊರಹಾಕುವ ಆತಂಕವನ್ನು ವ್ಯಕ್ತಪಡಿಸಿದರು. “ವಿಧಾನಸಭೆಯಲ್ಲಿ ಬಜೆಟ್ ಅನ್ನು ಅಂಗೀಕರಿಸಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂದು ನಾವು ಭಯಪಡುತ್ತೇವೆ” ಎಂದು ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದರು.

ಹಿಮಾಚಲ ಪ್ರದೇಶ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ಶಾಸಕರ ನಿಯೋಗ

ಬಿಜೆಪಿ ನಿನ್ನೆ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನವನ್ನು ಗೆದ್ದುಕೊಂಡಿದೆ, ಅದರ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಅಡ್ಡ ಮತದಾನ ಮಾಡಿದ ಕಾರಣ ಸೋಲಿಸಿದರು.

ರಾಜ್ಯಸಭಾ ಚುನಾವಣೆಯಿಂದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪಷ್ಟಪಡಿಸಿದೆ ಎಂದು  ಠಾಕೂರ್ ಹೇಳಿದರು. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಾಜೀನಾಮೆಗೆ ಒತ್ತಾಯಿಸಿದರು.

ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಬಿರುಕುಗಳನ್ನು ಉಂಡು ಮಾಡಿದೆ. ಅದು ಈಗ ತನ್ನ ಸರ್ಕಾರದ ಪತನವನ್ನು ತಡೆಯಲು ತನ್ನ ಶಾಸಕರನ್ನು ಹಾಗೇ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ವಿಕ್ರಮಾದಿತ್ಯ ಸಿಂಗ್ ಅವರು ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ಮತ್ತು ಶಿಮ್ಲಾ ಗ್ರಾಮಾಂತರದ ಶಾಸಕರಾಗಿದ್ದಾರೆ.

ಇದನ್ನೂ ಓದಿ; ಹಿಮಾಚಲ ವಿಧಾನಸಭೆಯಿಂದ ಶಾಸಕರ ‘ಅನರ್ಹತೆ’ ಆತಂಕ; ರಾಜ್ಯಪಾಲರನ್ನು ಸಂಪರ್ಕಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...