Homeಮುಖಪುಟಹಿಮಾಚಲ ರಾಜಕೀಯ ಬಿಕ್ಕಟ್ಟು: 15 ಬಿಜೆಪಿ ಶಾಸಕರನ್ನು ಉಚ್ಚಾಟಿಸಿದ ವಿಧಾನಸಭೆ ಸ್ಪೀಕರ್

ಹಿಮಾಚಲ ರಾಜಕೀಯ ಬಿಕ್ಕಟ್ಟು: 15 ಬಿಜೆಪಿ ಶಾಸಕರನ್ನು ಉಚ್ಚಾಟಿಸಿದ ವಿಧಾನಸಭೆ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದ ವಿಧಾನಸಭೆಯು 15 ಬಿಜೆಪಿ ಶಾಸಕರನ್ನು ಘೋಷಣೆಗಳನ್ನು ಕೂಗಿದ ಮತ್ತು ದುರ್ವರ್ತನೆ ಆರೋಪದ ಮೇಲೆ ಉಚ್ಚಾಟಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ ಒಂದು ದಿನದ ನಂತರ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಉದ್ವಿಗ್ನತೆಯ ನಡುವೆ ಈ ಬೆಳವಣಿಗೆ ನಡೆದಿದೆ.

ಇಂದು ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ 15 ಬಿಜೆಪಿ ಶಾಸಕರನ್ನು ಉಚ್ಚಾಟಿಸುವ ನಿರ್ಧಾರವನ್ನು ಸ್ಪೀಕರ್ ತೆಗೆದುಕೊಂಡಿದ್ದಾರೆ. ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರ ಕೊಠಡಿಯೊಳಗೆ ಅವರು ಘೋಷಣೆಗಳನ್ನು ಕೂಗಿದ್ದರು.

ಉಚ್ಛಾಟಿತ ಬಿಜೆಪಿ ಶಾಸಕರೆಂದರೆ ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಾನ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್, ಮತ್ತು ಇಂದರ್ ಸಿಂಗ್ ಗಾಂಧಿ.

ಜೈರಾಮ್ ಠಾಕೂರ್ ಅವರು ಇಂದು ಮುಂಜಾನೆ ತಮ್ಮನ್ನು ಹೊರಹಾಕುವ ಆತಂಕವನ್ನು ವ್ಯಕ್ತಪಡಿಸಿದರು. “ವಿಧಾನಸಭೆಯಲ್ಲಿ ಬಜೆಟ್ ಅನ್ನು ಅಂಗೀಕರಿಸಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂದು ನಾವು ಭಯಪಡುತ್ತೇವೆ” ಎಂದು ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದರು.

ಹಿಮಾಚಲ ಪ್ರದೇಶ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ಶಾಸಕರ ನಿಯೋಗ

ಬಿಜೆಪಿ ನಿನ್ನೆ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನವನ್ನು ಗೆದ್ದುಕೊಂಡಿದೆ, ಅದರ ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಅಡ್ಡ ಮತದಾನ ಮಾಡಿದ ಕಾರಣ ಸೋಲಿಸಿದರು.

ರಾಜ್ಯಸಭಾ ಚುನಾವಣೆಯಿಂದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪಷ್ಟಪಡಿಸಿದೆ ಎಂದು  ಠಾಕೂರ್ ಹೇಳಿದರು. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಾಜೀನಾಮೆಗೆ ಒತ್ತಾಯಿಸಿದರು.

ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಬಿರುಕುಗಳನ್ನು ಉಂಡು ಮಾಡಿದೆ. ಅದು ಈಗ ತನ್ನ ಸರ್ಕಾರದ ಪತನವನ್ನು ತಡೆಯಲು ತನ್ನ ಶಾಸಕರನ್ನು ಹಾಗೇ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ವಿಕ್ರಮಾದಿತ್ಯ ಸಿಂಗ್ ಅವರು ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ಮತ್ತು ಶಿಮ್ಲಾ ಗ್ರಾಮಾಂತರದ ಶಾಸಕರಾಗಿದ್ದಾರೆ.

ಇದನ್ನೂ ಓದಿ; ಹಿಮಾಚಲ ವಿಧಾನಸಭೆಯಿಂದ ಶಾಸಕರ ‘ಅನರ್ಹತೆ’ ಆತಂಕ; ರಾಜ್ಯಪಾಲರನ್ನು ಸಂಪರ್ಕಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...