Homeಮುಖಪುಟಹಿಮಾಚಲಪ್ರದೇಶ: ಪೂರ್ವ ಸೂಚನೆ ನೀಡದೆ 2 ಸಿಮೆಂಟ್‌ ಸ್ಥಾವರ ಸ್ಥಗಿತಗೊಳಿಸಿದ ಅದಾನಿ ಗ್ರೂಪ್‌; ಸೇಡಿನ ಕ್ರಮವೇ?

ಹಿಮಾಚಲಪ್ರದೇಶ: ಪೂರ್ವ ಸೂಚನೆ ನೀಡದೆ 2 ಸಿಮೆಂಟ್‌ ಸ್ಥಾವರ ಸ್ಥಗಿತಗೊಳಿಸಿದ ಅದಾನಿ ಗ್ರೂಪ್‌; ಸೇಡಿನ ಕ್ರಮವೇ?

ಈ ಘಟಕಗಳನ್ನು ಅವಲಂಬಿಸಿರುವ ಜನರು ಆತಂಕಕ್ಕೆ ಒಳಗಾಗಿದ್ದು ಅದಾನಿ ಗ್ರೂಪ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ, ಕಾಂಗ್ರೆಸ್ ಸರ್ಕಾರ ಶೋಕಾಸ್ ನೊಟೀಸ್‌ ನೀಡಿದೆ

- Advertisement -
- Advertisement -

“ಸಾರಿಗೆ ವೆಚ್ಚದ ನಷ್ಟವನ್ನು ಅನುಭವಿಸುತ್ತಿರುವ ಕಾರಣ ಹಿಮಾಚಲ ಪ್ರದೇಶದ ಎರಡು ಸಿಮೆಂಟ್ ಸ್ಥಾವರಗಳಲ್ಲಿ ಕೆಲಸಗಳನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ” ಎಂದು ಅದಾನಿ ಗ್ರೂಪ್ ಗುರುವಾರ ತಿಳಿಸಿದೆ.

ಬಿಲಾಸ್‌ಪುರ ಜಿಲ್ಲೆಯ ಗಾಗಲ್‌ನಲ್ಲಿರುವ ಎಸಿಸಿ ಸಿಮೆಂಟ್ ಪ್ಲಾಂಟ್ ಮತ್ತು ಸೋಲನ್ ಜಿಲ್ಲೆಯ ದರ್ಲಾಘಾಟ್‌ನ ಅಂಬುಜಾ ಸಿಮೆಂಟ್ ಪ್ಲಾಂಟ್ ಅನ್ನು ಸೆಪ್ಟೆಂಬರ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವಾಧೀನಪಡಿಸಿಕೊಂಡಿದ್ದ ಅದಾನಿ ಗ್ರೂಪ್‌, ಈಗ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಸರ್ಕಾರಕ್ಕೆ ಯಾವುದೇ ಸೂಚನೆ ನೀಡದೆ ಸ್ಥಾವರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ತನ್ನ ನಿರ್ಧಾರಕ್ಕೆ ಹೆಚ್ಚಿನ ಸರಕು ಸಾಗಣೆ ದರವೇ ಕಾರಣ ಎಂದು ಅದಾನಿ ಗ್ರೂಪ್‌ ದೂರಿದೆ. ರಾಜ್ಯದಲ್ಲಿ ಸಿಮೆಂಟ್ ದರ ಇಳಿಸಲು ಹೊಸದಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸರ್ಕಾರದ ವಿರುದ್ಧದ ಸೇಡಿನ ಕ್ರಮವಾಗಿ ಈ ಬೆಳವಣಿಗೆಯಾಗಿದೆ ಎಂಬ ಚರ್ಚೆ ರಾಜ್ಯದಲ್ಲಿ ನಡೆಯುತ್ತಿದೆ.

ವೆಚ್ಚವನ್ನು ತಗ್ಗಿಸಲು ಕಂಪನಿಯು ಸಾರಿಗೆ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸುತ್ತಿದೆ. ದರ್ಲಘಟ್ಟದಲ್ಲಿ ಅಂಬುಜಾ ಸಿಮೆಂಟ್ ಸ್ಥಾವರವನ್ನು ನಡೆಸುತ್ತಿರುವ ಅಧಿಕಾರಿಗಳು ಸಾರಿಗೆ ಒಕ್ಕೂಟಗಳಿಗೆ ಪತ್ರ ಬರೆದಿದ್ದಾರೆ. “ವೆಚ್ಚವನ್ನು ಕಡಿಮೆ ಮಾಡಲು ತೀವ್ರ ಒತ್ತಡದಲ್ಲಿವೆ. ಪ್ರಸ್ತುತ ಮಾರುಕಟ್ಟೆ ಸನ್ನಿವೇಶದಲ್ಲಿ, ಹೆಚ್ಚಿನ ಸಾರಿಗೆ ವೆಚ್ಚದಿಂದಾಗಿ ನಾವು ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಕಷ್ಟಪಡುತ್ತಿದ್ದೇವೆ. ಪರಿಸ್ಥಿತಿ ಮುಂದುವರಿದರೆ ನಮ್ಮ ಘಟಕಗಳು ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿರಿ: ಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

“ನಿಮ್ಮ ಕಟು ವರ್ತನೆಯಿಂದಾಗಿ ನಾವು ಅತಿಯಾದ ಸರಕುಗಳನ್ನು ಖರೀದಿಸಬೇಕಾಗಿದೆ. ಇದು ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಾಗಿದೆ” ಎಂದು ಆಕ್ಷೇಪ ಎತ್ತಿದ್ದಾರೆ.

ಕಂಪನಿಯು ಸೋಲನ್ ಡೆಪ್ಯುಟಿ ಕಮಿಷನರ್‌ಗೆ ಪತ್ರ ಬರೆದು, ‘ಸಾರಿಗೆ, ಕೈಗಾರಿಕೆಗಳು, ಆಹಾರ, ನಾಗರಿಕ ಸರಬರಾಜು ಮತ್ತು ಹಣಕಾಸು ಕಾರ್ಯದರ್ಶಿಗಳನ್ನು ಒಳಗೊಂಡಿರುವ ಶಾಶ್ವತ ಸಮಿತಿ’ಯು ಸಿದ್ಧಪಡಿಸಿದ ವರದಿಯತ್ತ ಗಮನ ಸೆಳೆದಿದೆ. ‘ಹಿಮಾಚಲ ಪ್ರದೇಶದಲ್ಲಿ ಸರಕು ಸಾಗಣೆಯ ದರಗಳ ನಿಗದಿ’ ವರದಿಯನ್ನು ಸಮಿತಿ ನೀಡಿದೆ.

ಸದ್ಯ ಪ್ರತಿ ಕ್ವಿಂಟಲ್ ಸಿಮೆಂಟ್ ಸಾಗಣೆ ದರ ಗುಡ್ಡಗಾಡು ಪ್ರದೇಶಗಳಲ್ಲಿ ಕಿಲೋಮೀಟರ್‌ಗೆ ₹10.58 ಹಾಗೂ ಬಯಲು ಸೀಮೆಯಲ್ಲಿ ₹5.38 ಇದೆ.

ಸೋಲನ್ ಡಿಸ್ಟ್ರಿಕ್ಟ್ ಟ್ರಕ್ ಆಪರೇಟರ್ಸ್ ದರ್ಲಘಾಟ್ ಅಧ್ಯಕ್ಷ ಜೈ ದೇವ ಕೌಂದಲ್ ಮಾತನಾಡಿ, “ಬೆಟ್ಟ ಪ್ರದೇಶದಲ್ಲಿ ಪ್ರತಿ ಕ್ವಿಂಟಲ್‌ಗೆ ಪ್ರತಿ ಕಿಲೋಮೀಟರ್‌ಗೆ ₹ 6 ದರವನ್ನು ಕಡಿಮೆ ಮಾಡಲು ಕಂಪನಿಗಳು ನಮ್ಮನ್ನು ಕೇಳುತ್ತಿವೆ. ಬೆಟ್ಟ ಪ್ರದೇಶದಲ್ಲಿ ಇಂಧನ ಬಳಕೆ ಹೆಚ್ಚಿರುವುದರಿಂದ ಈ ದರಗಳಿಗೆ ಒಪ್ಪಿದರೆ ಟ್ರಕ್ ಮಾಲೀಕರು ಏನನ್ನು ಸಂಪಾದಿಸಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್‌’ ವರದಿ ಮಾಡಿದೆ.

ಮುಖ್ಯ ಕಾರ್ಯದರ್ಶಿ ಆರ್‌.ಡಿ.ಧೀಮನ್, “ಇದು ಕಂಪನಿಯ ಆಡಳಿತ ಮತ್ತು ಸಾರಿಗೆ ಒಕ್ಕೂಟಗಳ ನಡುವಿನ ವಿಷಯವಾಗಿದೆ. ಬಿಲಾಸ್‌ಪುರ ಮತ್ತು ಸೋಲನ್‌ನ ಉಪ ಆಯುಕ್ತರನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದೇನೆ. ಪೂರ್ವ ಸೂಚನೆ ಇಲ್ಲದೆ ಸ್ಥಾವರಗಳನ್ನು ಮುಚ್ಚುವುದು ಕಾನೂನುಬಾಹಿರವಾಗಿದೆ. ಹಲವು ಬಾರಿ ಪ್ರಯತ್ನಿಸಿದರೂ ಕಂಪನಿಯ ಅಧಿಕಾರಿಗಳು ಕರೆಗಳಿಗೆ ಅಥವಾ ಸಂದೇಶಗಳಿಗೆ ಸ್ಪಂದಿಸುತ್ತಿಲ್ಲ” ಎಂದು ದೂರಿದ್ದಾರೆ.

ಪೂರ್ವ ಸೂಚನೆ ಇಲ್ಲದೆ ರಾಜ್ಯದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಹಿಮಾಚಲ ಪ್ರದೇಶ ಸರ್ಕಾರವು ಎರಡು ಸಿಮೆಂಟ್ ಕಂಪನಿಗಳಿಗೂ  ಶೋಕಾಸ್ ನೋಟಿಸ್ ನೀಡಿದೆ.

ಸಾರಿಗೆ ಮತ್ತು ಕೈಗಾರಿಕಾ ಇಲಾಖೆಗಳ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿರುವ ಧೀಮನ್‌, ಸ್ಥಳೀಯರಲ್ಲಿ ಉಂಟಾಗಿರುವ ಆತಂಕವನ್ನು ಹೋಗಲಾಡಿಸಲು ಯತ್ನಿಸಿದ್ದಾರೆ.

ನಿರುದ್ಯೋಗ ಬಿಕ್ಕಟ್ಟು

ಸುಮಾರು 25,000 ಕುಟುಂಬಗಳು ನೇರವಾಗಿ ಮತ್ತು ಪರೋಕ್ಷವಾಗಿ ತಮ್ಮ ಜೀವನೋಪಾಯಕ್ಕಾಗಿ ಸಿಮೆಂಟ್ ಘಟಕವನ್ನು ಅವಲಂಬಿಸಿವೆ. ಕಂಪನಿಯು 530 ಸಾಮಾನ್ಯ ಉದ್ಯೋಗಿಗಳನ್ನು ಮತ್ತು 450 ಗುತ್ತಿಗೆ ನೌಕರರನ್ನು ಹೊಂದಿದೆ. ಬರ್ಮಾನಾದ ಸಿಮೆಂಟ್ ಕಾರ್ಖಾನೆಯಲ್ಲಿ ಸುಮಾರು 3,800 ಟ್ರಕ್ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 2,300 ಚಾಲಕರು ಬಿಲಾಸ್‌ಪುರ ಜಿಲ್ಲಾ ಟ್ರಕ್ ಆಪರೇಟರ್ ಟ್ರಾನ್ಸ್‌ಪೋರ್ಟ್ ಕೋ-ಆಪರೇಟಿವ್ ಸೊಸೈಟಿಯೊಂದಿಗೆ ಮತ್ತು 1,500 ಮಾಜಿ ಸೈನಿಕರ ಸಂಘದೊಂದಿಗೆ ಗುರುತಿಸಿಕೊಂಡಿದ್ದಾರೆ. ಅದೇ ರೀತಿ ದರ್ಲಘಟ್ಟದಲ್ಲಿರುವ ಸಿಮೆಂಟ್ ಕಾರ್ಖಾನೆಯಲ್ಲಿ ಸುಮಾರು 2,000 ಟ್ರಕ್ಕರ್‌ಗಳು ಕೆಲಸ ಮಾಡುತ್ತಿದ್ದಾರೆ.

ಸ್ಥಾವರಗಳು ಸ್ಥಗಿತಗೊಂಡರೆ ಅವರೆಲ್ಲ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಬಿಲಾಸ್‌ಪುರದಿಂದ ಸ್ವರಘಾಟ್ ನಡುವೆ 600 ಮೆಕ್ಯಾನಿಕ್‌ಗಳು, ಟೈರ್ ಪಂಕ್ಚರ್ ರಿಪೇರಿ ಅಂಗಡಿಗಳು ಇರುವುದು ಗಮನಾರ್ಗ. ಈ ಭಾಗದಲ್ಲಿ ಟ್ರಕ್ಕರ್‌ಗಳನ್ನು ಅವಲಂಬಿಸಿರುವ ಸಣ್ಣ ಡಾಬಾಗಳು ಸಾಕಷ್ಟಿಸಿವೆ. ಇವುಗಳನ್ನು ಅವಲಂಬಿಸಿರುವವರ ಎಲ್ಲರ ಬದುಕು ಈಗ ಡೋಲಾಯಮಾನವಾಗಿದೆ.

ಸಿಮೆಂಟ್ ಕೊರತೆ ಸಾಧ್ಯತೆ

ಸ್ಥಾವರಗಳನ್ನು ಮುಚ್ಚುವುದರಿಂದಾಗಿ ಸಿಮೆಂಟ್ ಕೊರತೆ ಉಂಟಾಗಬಹುದು. ದಾರ್ಲಾಘಾಟ್‌ನಲ್ಲಿರುವ ಅಂಬುಜಾ ಸಿಮೆಂಟ್ ಸ್ಥಾವರವು ವರ್ಷಕ್ಕೆ 2 ಮಿಲಿಯನ್ ಟನ್‌ಗಳನ್ನು ಉತ್ಪಾದಿಸುತ್ತದೆ. ಪ್ರತಿದಿನ ಸುಮಾರು 5-6 ಮೆಟ್ರಿಕ್ ಟನ್‌ಗಳನ್ನು ಉತ್ಪಾದಿಸುತ್ತದೆ. ಬರ್ಮಾನಾ ಸ್ಥಾವರವು ದಿನಕ್ಕೆ 3,000 ಮೆಟ್ರಿಕ್ ಟನ್ ಸಿಮೆಂಟ್ ಅನ್ನು ಉತ್ಪಾದಿಸುತ್ತದೆ. ಎರಡು ಸ್ಥಾವರಗಳು ಉತ್ಪಾದಿಸುವ ಸಿಮೆಂಟ್ ಅನ್ನು ಹಿಮಾಚಲದ ಹೊರತಾಗಿ ಗುಜರಾತ್, ಬಂಗಾಳ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢಕ್ಕೆ ಸರಬರಾಜು ಮಾಡಲಾಗುತ್ತದೆ. 15,000 ಮೆಟ್ರಿಕ್ ಟನ್ ಸಿಮೆಂಟ್ ಮತ್ತು ಕ್ಲಿಂಕರ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವ ಬರ್ಮಾನಾ ಎಸಿಸಿ ಸ್ಥಾವರದಿಂದ ಸಿಮೆಂಟ್ ಅನ್ನು ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಟ್ರಕ್‌ಗಳ ಮೂಲಕ ಸರಬರಾಜು ಮಾಡಲಾಗುತ್ತದೆ.

ಅದಾನಿ ಗ್ರೂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಸಿಪಿಐ (ಎಂ) ಆಗ್ರಹ

ಅಂಬುಜಾ ಮತ್ತು ಎಸಿಸಿ ಸಿಮೆಂಟ್ ಸ್ಥಾವರಗಳಲ್ಲಿ ಕಾರ್ಯಾಚರಣೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ್ದಕ್ಕಾಗಿ ಅದಾನಿ ಗ್ರೂಪ್ ಅನ್ನು ಟೀಕಿಸಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಹಿಮಾಚಲ ಪ್ರದೇಶ ರಾಜ್ಯ ಸಮಿತಿಯು ಗ್ರೂಪ್‌ನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸರ್ಕಾರವನ್ನು ಒತ್ತಾಯಿಸಿದೆ.

ಇದನ್ನೂ ಓದಿರಿ: ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಓಂಕಾರ್ ಶಾದ್ ಮಾತನಾಡಿ, “ಸಿಮೆಂಟ್ ಸ್ಥಾವರಗಳನ್ನು ಸ್ಥಾಪಿಸುವುದಕ್ಕಾಗಿ ಜನರ ಬೆಲೆಬಾಳುವ ಭೂಮಿಯನ್ನು ಪಡೆಯಲಾಗಿದೆ. ಆದರೆ, ಇತ್ತೀಚೆಗಷ್ಟೇ ಎರಡು ಸ್ಥಾವರಗಳನ್ನು ಸ್ವಾಧೀನಪಡಿಸಿಕೊಂಡಿರುವ ಅದಾನಿ ಗ್ರೂಪ್ ಯಾವುದೇ ಕಾರಣವಿಲ್ಲದೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು, ಸಾವಿರಾರು ಕಾರ್ಮಿಕರು ಮತ್ತು ಟ್ರಕ್ ಆಪರೇಟರ್‌ಗಳನ್ನು ಕಂಗಾಲಾಗಲಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಮಾಚಲ ಪ್ರದೇಶದ ಸಿಮೆಂಟ್ ಕಂಪನಿಗಳು ಕಳೆದ ಎರಡು ವರ್ಷಗಳಿಂದ ಸಿಮೆಂಟ್ ಬೆಲೆಯನ್ನು ಅನಿಯಂತ್ರಿತವಾಗಿ ಏರಿಸುವ ಮೂಲಕ ಭಾರಿ ಲಾಭ ಗಳಿಸಿವೆ. ಹಿಮಾಚಲದಲ್ಲಿ ಉತ್ಪಾದಿಸುವ ಸಿಮೆಂಟ್ ಅನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತದೆ, ಇದು ರಾಜ್ಯದ ಜನರಿಗೆ ಮಾಡಿರುವ ಅನ್ಯಾಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...