Homeಮುಖಪುಟಹಿಮಾಚಲಪ್ರದೇಶ: ಪೂರ್ವ ಸೂಚನೆ ನೀಡದೆ 2 ಸಿಮೆಂಟ್‌ ಸ್ಥಾವರ ಸ್ಥಗಿತಗೊಳಿಸಿದ ಅದಾನಿ ಗ್ರೂಪ್‌; ಸೇಡಿನ ಕ್ರಮವೇ?

ಹಿಮಾಚಲಪ್ರದೇಶ: ಪೂರ್ವ ಸೂಚನೆ ನೀಡದೆ 2 ಸಿಮೆಂಟ್‌ ಸ್ಥಾವರ ಸ್ಥಗಿತಗೊಳಿಸಿದ ಅದಾನಿ ಗ್ರೂಪ್‌; ಸೇಡಿನ ಕ್ರಮವೇ?

ಈ ಘಟಕಗಳನ್ನು ಅವಲಂಬಿಸಿರುವ ಜನರು ಆತಂಕಕ್ಕೆ ಒಳಗಾಗಿದ್ದು ಅದಾನಿ ಗ್ರೂಪ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ, ಕಾಂಗ್ರೆಸ್ ಸರ್ಕಾರ ಶೋಕಾಸ್ ನೊಟೀಸ್‌ ನೀಡಿದೆ

- Advertisement -
- Advertisement -

“ಸಾರಿಗೆ ವೆಚ್ಚದ ನಷ್ಟವನ್ನು ಅನುಭವಿಸುತ್ತಿರುವ ಕಾರಣ ಹಿಮಾಚಲ ಪ್ರದೇಶದ ಎರಡು ಸಿಮೆಂಟ್ ಸ್ಥಾವರಗಳಲ್ಲಿ ಕೆಲಸಗಳನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ” ಎಂದು ಅದಾನಿ ಗ್ರೂಪ್ ಗುರುವಾರ ತಿಳಿಸಿದೆ.

ಬಿಲಾಸ್‌ಪುರ ಜಿಲ್ಲೆಯ ಗಾಗಲ್‌ನಲ್ಲಿರುವ ಎಸಿಸಿ ಸಿಮೆಂಟ್ ಪ್ಲಾಂಟ್ ಮತ್ತು ಸೋಲನ್ ಜಿಲ್ಲೆಯ ದರ್ಲಾಘಾಟ್‌ನ ಅಂಬುಜಾ ಸಿಮೆಂಟ್ ಪ್ಲಾಂಟ್ ಅನ್ನು ಸೆಪ್ಟೆಂಬರ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವಾಧೀನಪಡಿಸಿಕೊಂಡಿದ್ದ ಅದಾನಿ ಗ್ರೂಪ್‌, ಈಗ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಸರ್ಕಾರಕ್ಕೆ ಯಾವುದೇ ಸೂಚನೆ ನೀಡದೆ ಸ್ಥಾವರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ತನ್ನ ನಿರ್ಧಾರಕ್ಕೆ ಹೆಚ್ಚಿನ ಸರಕು ಸಾಗಣೆ ದರವೇ ಕಾರಣ ಎಂದು ಅದಾನಿ ಗ್ರೂಪ್‌ ದೂರಿದೆ. ರಾಜ್ಯದಲ್ಲಿ ಸಿಮೆಂಟ್ ದರ ಇಳಿಸಲು ಹೊಸದಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸರ್ಕಾರದ ವಿರುದ್ಧದ ಸೇಡಿನ ಕ್ರಮವಾಗಿ ಈ ಬೆಳವಣಿಗೆಯಾಗಿದೆ ಎಂಬ ಚರ್ಚೆ ರಾಜ್ಯದಲ್ಲಿ ನಡೆಯುತ್ತಿದೆ.

ವೆಚ್ಚವನ್ನು ತಗ್ಗಿಸಲು ಕಂಪನಿಯು ಸಾರಿಗೆ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸುತ್ತಿದೆ. ದರ್ಲಘಟ್ಟದಲ್ಲಿ ಅಂಬುಜಾ ಸಿಮೆಂಟ್ ಸ್ಥಾವರವನ್ನು ನಡೆಸುತ್ತಿರುವ ಅಧಿಕಾರಿಗಳು ಸಾರಿಗೆ ಒಕ್ಕೂಟಗಳಿಗೆ ಪತ್ರ ಬರೆದಿದ್ದಾರೆ. “ವೆಚ್ಚವನ್ನು ಕಡಿಮೆ ಮಾಡಲು ತೀವ್ರ ಒತ್ತಡದಲ್ಲಿವೆ. ಪ್ರಸ್ತುತ ಮಾರುಕಟ್ಟೆ ಸನ್ನಿವೇಶದಲ್ಲಿ, ಹೆಚ್ಚಿನ ಸಾರಿಗೆ ವೆಚ್ಚದಿಂದಾಗಿ ನಾವು ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಕಷ್ಟಪಡುತ್ತಿದ್ದೇವೆ. ಪರಿಸ್ಥಿತಿ ಮುಂದುವರಿದರೆ ನಮ್ಮ ಘಟಕಗಳು ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿರಿ: ಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

“ನಿಮ್ಮ ಕಟು ವರ್ತನೆಯಿಂದಾಗಿ ನಾವು ಅತಿಯಾದ ಸರಕುಗಳನ್ನು ಖರೀದಿಸಬೇಕಾಗಿದೆ. ಇದು ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಾಗಿದೆ” ಎಂದು ಆಕ್ಷೇಪ ಎತ್ತಿದ್ದಾರೆ.

ಕಂಪನಿಯು ಸೋಲನ್ ಡೆಪ್ಯುಟಿ ಕಮಿಷನರ್‌ಗೆ ಪತ್ರ ಬರೆದು, ‘ಸಾರಿಗೆ, ಕೈಗಾರಿಕೆಗಳು, ಆಹಾರ, ನಾಗರಿಕ ಸರಬರಾಜು ಮತ್ತು ಹಣಕಾಸು ಕಾರ್ಯದರ್ಶಿಗಳನ್ನು ಒಳಗೊಂಡಿರುವ ಶಾಶ್ವತ ಸಮಿತಿ’ಯು ಸಿದ್ಧಪಡಿಸಿದ ವರದಿಯತ್ತ ಗಮನ ಸೆಳೆದಿದೆ. ‘ಹಿಮಾಚಲ ಪ್ರದೇಶದಲ್ಲಿ ಸರಕು ಸಾಗಣೆಯ ದರಗಳ ನಿಗದಿ’ ವರದಿಯನ್ನು ಸಮಿತಿ ನೀಡಿದೆ.

ಸದ್ಯ ಪ್ರತಿ ಕ್ವಿಂಟಲ್ ಸಿಮೆಂಟ್ ಸಾಗಣೆ ದರ ಗುಡ್ಡಗಾಡು ಪ್ರದೇಶಗಳಲ್ಲಿ ಕಿಲೋಮೀಟರ್‌ಗೆ ₹10.58 ಹಾಗೂ ಬಯಲು ಸೀಮೆಯಲ್ಲಿ ₹5.38 ಇದೆ.

ಸೋಲನ್ ಡಿಸ್ಟ್ರಿಕ್ಟ್ ಟ್ರಕ್ ಆಪರೇಟರ್ಸ್ ದರ್ಲಘಾಟ್ ಅಧ್ಯಕ್ಷ ಜೈ ದೇವ ಕೌಂದಲ್ ಮಾತನಾಡಿ, “ಬೆಟ್ಟ ಪ್ರದೇಶದಲ್ಲಿ ಪ್ರತಿ ಕ್ವಿಂಟಲ್‌ಗೆ ಪ್ರತಿ ಕಿಲೋಮೀಟರ್‌ಗೆ ₹ 6 ದರವನ್ನು ಕಡಿಮೆ ಮಾಡಲು ಕಂಪನಿಗಳು ನಮ್ಮನ್ನು ಕೇಳುತ್ತಿವೆ. ಬೆಟ್ಟ ಪ್ರದೇಶದಲ್ಲಿ ಇಂಧನ ಬಳಕೆ ಹೆಚ್ಚಿರುವುದರಿಂದ ಈ ದರಗಳಿಗೆ ಒಪ್ಪಿದರೆ ಟ್ರಕ್ ಮಾಲೀಕರು ಏನನ್ನು ಸಂಪಾದಿಸಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್‌’ ವರದಿ ಮಾಡಿದೆ.

ಮುಖ್ಯ ಕಾರ್ಯದರ್ಶಿ ಆರ್‌.ಡಿ.ಧೀಮನ್, “ಇದು ಕಂಪನಿಯ ಆಡಳಿತ ಮತ್ತು ಸಾರಿಗೆ ಒಕ್ಕೂಟಗಳ ನಡುವಿನ ವಿಷಯವಾಗಿದೆ. ಬಿಲಾಸ್‌ಪುರ ಮತ್ತು ಸೋಲನ್‌ನ ಉಪ ಆಯುಕ್ತರನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದೇನೆ. ಪೂರ್ವ ಸೂಚನೆ ಇಲ್ಲದೆ ಸ್ಥಾವರಗಳನ್ನು ಮುಚ್ಚುವುದು ಕಾನೂನುಬಾಹಿರವಾಗಿದೆ. ಹಲವು ಬಾರಿ ಪ್ರಯತ್ನಿಸಿದರೂ ಕಂಪನಿಯ ಅಧಿಕಾರಿಗಳು ಕರೆಗಳಿಗೆ ಅಥವಾ ಸಂದೇಶಗಳಿಗೆ ಸ್ಪಂದಿಸುತ್ತಿಲ್ಲ” ಎಂದು ದೂರಿದ್ದಾರೆ.

ಪೂರ್ವ ಸೂಚನೆ ಇಲ್ಲದೆ ರಾಜ್ಯದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಹಿಮಾಚಲ ಪ್ರದೇಶ ಸರ್ಕಾರವು ಎರಡು ಸಿಮೆಂಟ್ ಕಂಪನಿಗಳಿಗೂ  ಶೋಕಾಸ್ ನೋಟಿಸ್ ನೀಡಿದೆ.

ಸಾರಿಗೆ ಮತ್ತು ಕೈಗಾರಿಕಾ ಇಲಾಖೆಗಳ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿರುವ ಧೀಮನ್‌, ಸ್ಥಳೀಯರಲ್ಲಿ ಉಂಟಾಗಿರುವ ಆತಂಕವನ್ನು ಹೋಗಲಾಡಿಸಲು ಯತ್ನಿಸಿದ್ದಾರೆ.

ನಿರುದ್ಯೋಗ ಬಿಕ್ಕಟ್ಟು

ಸುಮಾರು 25,000 ಕುಟುಂಬಗಳು ನೇರವಾಗಿ ಮತ್ತು ಪರೋಕ್ಷವಾಗಿ ತಮ್ಮ ಜೀವನೋಪಾಯಕ್ಕಾಗಿ ಸಿಮೆಂಟ್ ಘಟಕವನ್ನು ಅವಲಂಬಿಸಿವೆ. ಕಂಪನಿಯು 530 ಸಾಮಾನ್ಯ ಉದ್ಯೋಗಿಗಳನ್ನು ಮತ್ತು 450 ಗುತ್ತಿಗೆ ನೌಕರರನ್ನು ಹೊಂದಿದೆ. ಬರ್ಮಾನಾದ ಸಿಮೆಂಟ್ ಕಾರ್ಖಾನೆಯಲ್ಲಿ ಸುಮಾರು 3,800 ಟ್ರಕ್ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 2,300 ಚಾಲಕರು ಬಿಲಾಸ್‌ಪುರ ಜಿಲ್ಲಾ ಟ್ರಕ್ ಆಪರೇಟರ್ ಟ್ರಾನ್ಸ್‌ಪೋರ್ಟ್ ಕೋ-ಆಪರೇಟಿವ್ ಸೊಸೈಟಿಯೊಂದಿಗೆ ಮತ್ತು 1,500 ಮಾಜಿ ಸೈನಿಕರ ಸಂಘದೊಂದಿಗೆ ಗುರುತಿಸಿಕೊಂಡಿದ್ದಾರೆ. ಅದೇ ರೀತಿ ದರ್ಲಘಟ್ಟದಲ್ಲಿರುವ ಸಿಮೆಂಟ್ ಕಾರ್ಖಾನೆಯಲ್ಲಿ ಸುಮಾರು 2,000 ಟ್ರಕ್ಕರ್‌ಗಳು ಕೆಲಸ ಮಾಡುತ್ತಿದ್ದಾರೆ.

ಸ್ಥಾವರಗಳು ಸ್ಥಗಿತಗೊಂಡರೆ ಅವರೆಲ್ಲ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಬಿಲಾಸ್‌ಪುರದಿಂದ ಸ್ವರಘಾಟ್ ನಡುವೆ 600 ಮೆಕ್ಯಾನಿಕ್‌ಗಳು, ಟೈರ್ ಪಂಕ್ಚರ್ ರಿಪೇರಿ ಅಂಗಡಿಗಳು ಇರುವುದು ಗಮನಾರ್ಗ. ಈ ಭಾಗದಲ್ಲಿ ಟ್ರಕ್ಕರ್‌ಗಳನ್ನು ಅವಲಂಬಿಸಿರುವ ಸಣ್ಣ ಡಾಬಾಗಳು ಸಾಕಷ್ಟಿಸಿವೆ. ಇವುಗಳನ್ನು ಅವಲಂಬಿಸಿರುವವರ ಎಲ್ಲರ ಬದುಕು ಈಗ ಡೋಲಾಯಮಾನವಾಗಿದೆ.

ಸಿಮೆಂಟ್ ಕೊರತೆ ಸಾಧ್ಯತೆ

ಸ್ಥಾವರಗಳನ್ನು ಮುಚ್ಚುವುದರಿಂದಾಗಿ ಸಿಮೆಂಟ್ ಕೊರತೆ ಉಂಟಾಗಬಹುದು. ದಾರ್ಲಾಘಾಟ್‌ನಲ್ಲಿರುವ ಅಂಬುಜಾ ಸಿಮೆಂಟ್ ಸ್ಥಾವರವು ವರ್ಷಕ್ಕೆ 2 ಮಿಲಿಯನ್ ಟನ್‌ಗಳನ್ನು ಉತ್ಪಾದಿಸುತ್ತದೆ. ಪ್ರತಿದಿನ ಸುಮಾರು 5-6 ಮೆಟ್ರಿಕ್ ಟನ್‌ಗಳನ್ನು ಉತ್ಪಾದಿಸುತ್ತದೆ. ಬರ್ಮಾನಾ ಸ್ಥಾವರವು ದಿನಕ್ಕೆ 3,000 ಮೆಟ್ರಿಕ್ ಟನ್ ಸಿಮೆಂಟ್ ಅನ್ನು ಉತ್ಪಾದಿಸುತ್ತದೆ. ಎರಡು ಸ್ಥಾವರಗಳು ಉತ್ಪಾದಿಸುವ ಸಿಮೆಂಟ್ ಅನ್ನು ಹಿಮಾಚಲದ ಹೊರತಾಗಿ ಗುಜರಾತ್, ಬಂಗಾಳ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢಕ್ಕೆ ಸರಬರಾಜು ಮಾಡಲಾಗುತ್ತದೆ. 15,000 ಮೆಟ್ರಿಕ್ ಟನ್ ಸಿಮೆಂಟ್ ಮತ್ತು ಕ್ಲಿಂಕರ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವ ಬರ್ಮಾನಾ ಎಸಿಸಿ ಸ್ಥಾವರದಿಂದ ಸಿಮೆಂಟ್ ಅನ್ನು ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಟ್ರಕ್‌ಗಳ ಮೂಲಕ ಸರಬರಾಜು ಮಾಡಲಾಗುತ್ತದೆ.

ಅದಾನಿ ಗ್ರೂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಸಿಪಿಐ (ಎಂ) ಆಗ್ರಹ

ಅಂಬುಜಾ ಮತ್ತು ಎಸಿಸಿ ಸಿಮೆಂಟ್ ಸ್ಥಾವರಗಳಲ್ಲಿ ಕಾರ್ಯಾಚರಣೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ್ದಕ್ಕಾಗಿ ಅದಾನಿ ಗ್ರೂಪ್ ಅನ್ನು ಟೀಕಿಸಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಹಿಮಾಚಲ ಪ್ರದೇಶ ರಾಜ್ಯ ಸಮಿತಿಯು ಗ್ರೂಪ್‌ನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸರ್ಕಾರವನ್ನು ಒತ್ತಾಯಿಸಿದೆ.

ಇದನ್ನೂ ಓದಿರಿ: ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಓಂಕಾರ್ ಶಾದ್ ಮಾತನಾಡಿ, “ಸಿಮೆಂಟ್ ಸ್ಥಾವರಗಳನ್ನು ಸ್ಥಾಪಿಸುವುದಕ್ಕಾಗಿ ಜನರ ಬೆಲೆಬಾಳುವ ಭೂಮಿಯನ್ನು ಪಡೆಯಲಾಗಿದೆ. ಆದರೆ, ಇತ್ತೀಚೆಗಷ್ಟೇ ಎರಡು ಸ್ಥಾವರಗಳನ್ನು ಸ್ವಾಧೀನಪಡಿಸಿಕೊಂಡಿರುವ ಅದಾನಿ ಗ್ರೂಪ್ ಯಾವುದೇ ಕಾರಣವಿಲ್ಲದೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು, ಸಾವಿರಾರು ಕಾರ್ಮಿಕರು ಮತ್ತು ಟ್ರಕ್ ಆಪರೇಟರ್‌ಗಳನ್ನು ಕಂಗಾಲಾಗಲಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಮಾಚಲ ಪ್ರದೇಶದ ಸಿಮೆಂಟ್ ಕಂಪನಿಗಳು ಕಳೆದ ಎರಡು ವರ್ಷಗಳಿಂದ ಸಿಮೆಂಟ್ ಬೆಲೆಯನ್ನು ಅನಿಯಂತ್ರಿತವಾಗಿ ಏರಿಸುವ ಮೂಲಕ ಭಾರಿ ಲಾಭ ಗಳಿಸಿವೆ. ಹಿಮಾಚಲದಲ್ಲಿ ಉತ್ಪಾದಿಸುವ ಸಿಮೆಂಟ್ ಅನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತದೆ, ಇದು ರಾಜ್ಯದ ಜನರಿಗೆ ಮಾಡಿರುವ ಅನ್ಯಾಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...