Homeಮುಖಪುಟಹಿಮಾಚಲಪ್ರದೇಶ: ಪೂರ್ವ ಸೂಚನೆ ನೀಡದೆ 2 ಸಿಮೆಂಟ್‌ ಸ್ಥಾವರ ಸ್ಥಗಿತಗೊಳಿಸಿದ ಅದಾನಿ ಗ್ರೂಪ್‌; ಸೇಡಿನ ಕ್ರಮವೇ?

ಹಿಮಾಚಲಪ್ರದೇಶ: ಪೂರ್ವ ಸೂಚನೆ ನೀಡದೆ 2 ಸಿಮೆಂಟ್‌ ಸ್ಥಾವರ ಸ್ಥಗಿತಗೊಳಿಸಿದ ಅದಾನಿ ಗ್ರೂಪ್‌; ಸೇಡಿನ ಕ್ರಮವೇ?

ಈ ಘಟಕಗಳನ್ನು ಅವಲಂಬಿಸಿರುವ ಜನರು ಆತಂಕಕ್ಕೆ ಒಳಗಾಗಿದ್ದು ಅದಾನಿ ಗ್ರೂಪ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ, ಕಾಂಗ್ರೆಸ್ ಸರ್ಕಾರ ಶೋಕಾಸ್ ನೊಟೀಸ್‌ ನೀಡಿದೆ

- Advertisement -
- Advertisement -

“ಸಾರಿಗೆ ವೆಚ್ಚದ ನಷ್ಟವನ್ನು ಅನುಭವಿಸುತ್ತಿರುವ ಕಾರಣ ಹಿಮಾಚಲ ಪ್ರದೇಶದ ಎರಡು ಸಿಮೆಂಟ್ ಸ್ಥಾವರಗಳಲ್ಲಿ ಕೆಲಸಗಳನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ” ಎಂದು ಅದಾನಿ ಗ್ರೂಪ್ ಗುರುವಾರ ತಿಳಿಸಿದೆ.

ಬಿಲಾಸ್‌ಪುರ ಜಿಲ್ಲೆಯ ಗಾಗಲ್‌ನಲ್ಲಿರುವ ಎಸಿಸಿ ಸಿಮೆಂಟ್ ಪ್ಲಾಂಟ್ ಮತ್ತು ಸೋಲನ್ ಜಿಲ್ಲೆಯ ದರ್ಲಾಘಾಟ್‌ನ ಅಂಬುಜಾ ಸಿಮೆಂಟ್ ಪ್ಲಾಂಟ್ ಅನ್ನು ಸೆಪ್ಟೆಂಬರ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವಾಧೀನಪಡಿಸಿಕೊಂಡಿದ್ದ ಅದಾನಿ ಗ್ರೂಪ್‌, ಈಗ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಸರ್ಕಾರಕ್ಕೆ ಯಾವುದೇ ಸೂಚನೆ ನೀಡದೆ ಸ್ಥಾವರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ತನ್ನ ನಿರ್ಧಾರಕ್ಕೆ ಹೆಚ್ಚಿನ ಸರಕು ಸಾಗಣೆ ದರವೇ ಕಾರಣ ಎಂದು ಅದಾನಿ ಗ್ರೂಪ್‌ ದೂರಿದೆ. ರಾಜ್ಯದಲ್ಲಿ ಸಿಮೆಂಟ್ ದರ ಇಳಿಸಲು ಹೊಸದಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸರ್ಕಾರದ ವಿರುದ್ಧದ ಸೇಡಿನ ಕ್ರಮವಾಗಿ ಈ ಬೆಳವಣಿಗೆಯಾಗಿದೆ ಎಂಬ ಚರ್ಚೆ ರಾಜ್ಯದಲ್ಲಿ ನಡೆಯುತ್ತಿದೆ.

ವೆಚ್ಚವನ್ನು ತಗ್ಗಿಸಲು ಕಂಪನಿಯು ಸಾರಿಗೆ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸುತ್ತಿದೆ. ದರ್ಲಘಟ್ಟದಲ್ಲಿ ಅಂಬುಜಾ ಸಿಮೆಂಟ್ ಸ್ಥಾವರವನ್ನು ನಡೆಸುತ್ತಿರುವ ಅಧಿಕಾರಿಗಳು ಸಾರಿಗೆ ಒಕ್ಕೂಟಗಳಿಗೆ ಪತ್ರ ಬರೆದಿದ್ದಾರೆ. “ವೆಚ್ಚವನ್ನು ಕಡಿಮೆ ಮಾಡಲು ತೀವ್ರ ಒತ್ತಡದಲ್ಲಿವೆ. ಪ್ರಸ್ತುತ ಮಾರುಕಟ್ಟೆ ಸನ್ನಿವೇಶದಲ್ಲಿ, ಹೆಚ್ಚಿನ ಸಾರಿಗೆ ವೆಚ್ಚದಿಂದಾಗಿ ನಾವು ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಕಷ್ಟಪಡುತ್ತಿದ್ದೇವೆ. ಪರಿಸ್ಥಿತಿ ಮುಂದುವರಿದರೆ ನಮ್ಮ ಘಟಕಗಳು ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿರಿ: ಅದಾನಿ ಸಂಸ್ಥೆಗೆ ಅಕ್ರಮ ಭೂ ಮಂಜೂರಾತಿ: ಗುಜರಾತ್ ಸರ್ಕಾರಕ್ಕೆ 58 ಕೋಟಿ ರೂ ನಷ್ಟ

“ನಿಮ್ಮ ಕಟು ವರ್ತನೆಯಿಂದಾಗಿ ನಾವು ಅತಿಯಾದ ಸರಕುಗಳನ್ನು ಖರೀದಿಸಬೇಕಾಗಿದೆ. ಇದು ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಾಗಿದೆ” ಎಂದು ಆಕ್ಷೇಪ ಎತ್ತಿದ್ದಾರೆ.

ಕಂಪನಿಯು ಸೋಲನ್ ಡೆಪ್ಯುಟಿ ಕಮಿಷನರ್‌ಗೆ ಪತ್ರ ಬರೆದು, ‘ಸಾರಿಗೆ, ಕೈಗಾರಿಕೆಗಳು, ಆಹಾರ, ನಾಗರಿಕ ಸರಬರಾಜು ಮತ್ತು ಹಣಕಾಸು ಕಾರ್ಯದರ್ಶಿಗಳನ್ನು ಒಳಗೊಂಡಿರುವ ಶಾಶ್ವತ ಸಮಿತಿ’ಯು ಸಿದ್ಧಪಡಿಸಿದ ವರದಿಯತ್ತ ಗಮನ ಸೆಳೆದಿದೆ. ‘ಹಿಮಾಚಲ ಪ್ರದೇಶದಲ್ಲಿ ಸರಕು ಸಾಗಣೆಯ ದರಗಳ ನಿಗದಿ’ ವರದಿಯನ್ನು ಸಮಿತಿ ನೀಡಿದೆ.

ಸದ್ಯ ಪ್ರತಿ ಕ್ವಿಂಟಲ್ ಸಿಮೆಂಟ್ ಸಾಗಣೆ ದರ ಗುಡ್ಡಗಾಡು ಪ್ರದೇಶಗಳಲ್ಲಿ ಕಿಲೋಮೀಟರ್‌ಗೆ ₹10.58 ಹಾಗೂ ಬಯಲು ಸೀಮೆಯಲ್ಲಿ ₹5.38 ಇದೆ.

ಸೋಲನ್ ಡಿಸ್ಟ್ರಿಕ್ಟ್ ಟ್ರಕ್ ಆಪರೇಟರ್ಸ್ ದರ್ಲಘಾಟ್ ಅಧ್ಯಕ್ಷ ಜೈ ದೇವ ಕೌಂದಲ್ ಮಾತನಾಡಿ, “ಬೆಟ್ಟ ಪ್ರದೇಶದಲ್ಲಿ ಪ್ರತಿ ಕ್ವಿಂಟಲ್‌ಗೆ ಪ್ರತಿ ಕಿಲೋಮೀಟರ್‌ಗೆ ₹ 6 ದರವನ್ನು ಕಡಿಮೆ ಮಾಡಲು ಕಂಪನಿಗಳು ನಮ್ಮನ್ನು ಕೇಳುತ್ತಿವೆ. ಬೆಟ್ಟ ಪ್ರದೇಶದಲ್ಲಿ ಇಂಧನ ಬಳಕೆ ಹೆಚ್ಚಿರುವುದರಿಂದ ಈ ದರಗಳಿಗೆ ಒಪ್ಪಿದರೆ ಟ್ರಕ್ ಮಾಲೀಕರು ಏನನ್ನು ಸಂಪಾದಿಸಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್‌’ ವರದಿ ಮಾಡಿದೆ.

ಮುಖ್ಯ ಕಾರ್ಯದರ್ಶಿ ಆರ್‌.ಡಿ.ಧೀಮನ್, “ಇದು ಕಂಪನಿಯ ಆಡಳಿತ ಮತ್ತು ಸಾರಿಗೆ ಒಕ್ಕೂಟಗಳ ನಡುವಿನ ವಿಷಯವಾಗಿದೆ. ಬಿಲಾಸ್‌ಪುರ ಮತ್ತು ಸೋಲನ್‌ನ ಉಪ ಆಯುಕ್ತರನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದೇನೆ. ಪೂರ್ವ ಸೂಚನೆ ಇಲ್ಲದೆ ಸ್ಥಾವರಗಳನ್ನು ಮುಚ್ಚುವುದು ಕಾನೂನುಬಾಹಿರವಾಗಿದೆ. ಹಲವು ಬಾರಿ ಪ್ರಯತ್ನಿಸಿದರೂ ಕಂಪನಿಯ ಅಧಿಕಾರಿಗಳು ಕರೆಗಳಿಗೆ ಅಥವಾ ಸಂದೇಶಗಳಿಗೆ ಸ್ಪಂದಿಸುತ್ತಿಲ್ಲ” ಎಂದು ದೂರಿದ್ದಾರೆ.

ಪೂರ್ವ ಸೂಚನೆ ಇಲ್ಲದೆ ರಾಜ್ಯದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಹಿಮಾಚಲ ಪ್ರದೇಶ ಸರ್ಕಾರವು ಎರಡು ಸಿಮೆಂಟ್ ಕಂಪನಿಗಳಿಗೂ  ಶೋಕಾಸ್ ನೋಟಿಸ್ ನೀಡಿದೆ.

ಸಾರಿಗೆ ಮತ್ತು ಕೈಗಾರಿಕಾ ಇಲಾಖೆಗಳ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿರುವ ಧೀಮನ್‌, ಸ್ಥಳೀಯರಲ್ಲಿ ಉಂಟಾಗಿರುವ ಆತಂಕವನ್ನು ಹೋಗಲಾಡಿಸಲು ಯತ್ನಿಸಿದ್ದಾರೆ.

ನಿರುದ್ಯೋಗ ಬಿಕ್ಕಟ್ಟು

ಸುಮಾರು 25,000 ಕುಟುಂಬಗಳು ನೇರವಾಗಿ ಮತ್ತು ಪರೋಕ್ಷವಾಗಿ ತಮ್ಮ ಜೀವನೋಪಾಯಕ್ಕಾಗಿ ಸಿಮೆಂಟ್ ಘಟಕವನ್ನು ಅವಲಂಬಿಸಿವೆ. ಕಂಪನಿಯು 530 ಸಾಮಾನ್ಯ ಉದ್ಯೋಗಿಗಳನ್ನು ಮತ್ತು 450 ಗುತ್ತಿಗೆ ನೌಕರರನ್ನು ಹೊಂದಿದೆ. ಬರ್ಮಾನಾದ ಸಿಮೆಂಟ್ ಕಾರ್ಖಾನೆಯಲ್ಲಿ ಸುಮಾರು 3,800 ಟ್ರಕ್ ನಿರ್ವಾಹಕರು ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 2,300 ಚಾಲಕರು ಬಿಲಾಸ್‌ಪುರ ಜಿಲ್ಲಾ ಟ್ರಕ್ ಆಪರೇಟರ್ ಟ್ರಾನ್ಸ್‌ಪೋರ್ಟ್ ಕೋ-ಆಪರೇಟಿವ್ ಸೊಸೈಟಿಯೊಂದಿಗೆ ಮತ್ತು 1,500 ಮಾಜಿ ಸೈನಿಕರ ಸಂಘದೊಂದಿಗೆ ಗುರುತಿಸಿಕೊಂಡಿದ್ದಾರೆ. ಅದೇ ರೀತಿ ದರ್ಲಘಟ್ಟದಲ್ಲಿರುವ ಸಿಮೆಂಟ್ ಕಾರ್ಖಾನೆಯಲ್ಲಿ ಸುಮಾರು 2,000 ಟ್ರಕ್ಕರ್‌ಗಳು ಕೆಲಸ ಮಾಡುತ್ತಿದ್ದಾರೆ.

ಸ್ಥಾವರಗಳು ಸ್ಥಗಿತಗೊಂಡರೆ ಅವರೆಲ್ಲ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಬಿಲಾಸ್‌ಪುರದಿಂದ ಸ್ವರಘಾಟ್ ನಡುವೆ 600 ಮೆಕ್ಯಾನಿಕ್‌ಗಳು, ಟೈರ್ ಪಂಕ್ಚರ್ ರಿಪೇರಿ ಅಂಗಡಿಗಳು ಇರುವುದು ಗಮನಾರ್ಗ. ಈ ಭಾಗದಲ್ಲಿ ಟ್ರಕ್ಕರ್‌ಗಳನ್ನು ಅವಲಂಬಿಸಿರುವ ಸಣ್ಣ ಡಾಬಾಗಳು ಸಾಕಷ್ಟಿಸಿವೆ. ಇವುಗಳನ್ನು ಅವಲಂಬಿಸಿರುವವರ ಎಲ್ಲರ ಬದುಕು ಈಗ ಡೋಲಾಯಮಾನವಾಗಿದೆ.

ಸಿಮೆಂಟ್ ಕೊರತೆ ಸಾಧ್ಯತೆ

ಸ್ಥಾವರಗಳನ್ನು ಮುಚ್ಚುವುದರಿಂದಾಗಿ ಸಿಮೆಂಟ್ ಕೊರತೆ ಉಂಟಾಗಬಹುದು. ದಾರ್ಲಾಘಾಟ್‌ನಲ್ಲಿರುವ ಅಂಬುಜಾ ಸಿಮೆಂಟ್ ಸ್ಥಾವರವು ವರ್ಷಕ್ಕೆ 2 ಮಿಲಿಯನ್ ಟನ್‌ಗಳನ್ನು ಉತ್ಪಾದಿಸುತ್ತದೆ. ಪ್ರತಿದಿನ ಸುಮಾರು 5-6 ಮೆಟ್ರಿಕ್ ಟನ್‌ಗಳನ್ನು ಉತ್ಪಾದಿಸುತ್ತದೆ. ಬರ್ಮಾನಾ ಸ್ಥಾವರವು ದಿನಕ್ಕೆ 3,000 ಮೆಟ್ರಿಕ್ ಟನ್ ಸಿಮೆಂಟ್ ಅನ್ನು ಉತ್ಪಾದಿಸುತ್ತದೆ. ಎರಡು ಸ್ಥಾವರಗಳು ಉತ್ಪಾದಿಸುವ ಸಿಮೆಂಟ್ ಅನ್ನು ಹಿಮಾಚಲದ ಹೊರತಾಗಿ ಗುಜರಾತ್, ಬಂಗಾಳ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢಕ್ಕೆ ಸರಬರಾಜು ಮಾಡಲಾಗುತ್ತದೆ. 15,000 ಮೆಟ್ರಿಕ್ ಟನ್ ಸಿಮೆಂಟ್ ಮತ್ತು ಕ್ಲಿಂಕರ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವ ಬರ್ಮಾನಾ ಎಸಿಸಿ ಸ್ಥಾವರದಿಂದ ಸಿಮೆಂಟ್ ಅನ್ನು ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಟ್ರಕ್‌ಗಳ ಮೂಲಕ ಸರಬರಾಜು ಮಾಡಲಾಗುತ್ತದೆ.

ಅದಾನಿ ಗ್ರೂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಸಿಪಿಐ (ಎಂ) ಆಗ್ರಹ

ಅಂಬುಜಾ ಮತ್ತು ಎಸಿಸಿ ಸಿಮೆಂಟ್ ಸ್ಥಾವರಗಳಲ್ಲಿ ಕಾರ್ಯಾಚರಣೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ್ದಕ್ಕಾಗಿ ಅದಾನಿ ಗ್ರೂಪ್ ಅನ್ನು ಟೀಕಿಸಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಹಿಮಾಚಲ ಪ್ರದೇಶ ರಾಜ್ಯ ಸಮಿತಿಯು ಗ್ರೂಪ್‌ನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸರ್ಕಾರವನ್ನು ಒತ್ತಾಯಿಸಿದೆ.

ಇದನ್ನೂ ಓದಿರಿ: ಇಸ್ರೇಲ್‌ನ ಅತೀ ದೊಡ್ಡ ಬಂದರು ‘ಅದಾನಿ ಗ್ರೂಪ್’ ವಶಕ್ಕೆ

ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಓಂಕಾರ್ ಶಾದ್ ಮಾತನಾಡಿ, “ಸಿಮೆಂಟ್ ಸ್ಥಾವರಗಳನ್ನು ಸ್ಥಾಪಿಸುವುದಕ್ಕಾಗಿ ಜನರ ಬೆಲೆಬಾಳುವ ಭೂಮಿಯನ್ನು ಪಡೆಯಲಾಗಿದೆ. ಆದರೆ, ಇತ್ತೀಚೆಗಷ್ಟೇ ಎರಡು ಸ್ಥಾವರಗಳನ್ನು ಸ್ವಾಧೀನಪಡಿಸಿಕೊಂಡಿರುವ ಅದಾನಿ ಗ್ರೂಪ್ ಯಾವುದೇ ಕಾರಣವಿಲ್ಲದೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು, ಸಾವಿರಾರು ಕಾರ್ಮಿಕರು ಮತ್ತು ಟ್ರಕ್ ಆಪರೇಟರ್‌ಗಳನ್ನು ಕಂಗಾಲಾಗಲಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಮಾಚಲ ಪ್ರದೇಶದ ಸಿಮೆಂಟ್ ಕಂಪನಿಗಳು ಕಳೆದ ಎರಡು ವರ್ಷಗಳಿಂದ ಸಿಮೆಂಟ್ ಬೆಲೆಯನ್ನು ಅನಿಯಂತ್ರಿತವಾಗಿ ಏರಿಸುವ ಮೂಲಕ ಭಾರಿ ಲಾಭ ಗಳಿಸಿವೆ. ಹಿಮಾಚಲದಲ್ಲಿ ಉತ್ಪಾದಿಸುವ ಸಿಮೆಂಟ್ ಅನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತದೆ, ಇದು ರಾಜ್ಯದ ಜನರಿಗೆ ಮಾಡಿರುವ ಅನ್ಯಾಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...