Homeಮುಖಪುಟಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾದ ಮೂರು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಜೆಪಿ ಹಿನ್ನಡೆ ಕಾಣುತ್ತಿದೆ. ಕೆಲವೇ ಕ್ಷಣಗಳ ಹಿಂದೆ, ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಹಿಂದಿಕ್ಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ವೇಳೆ ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು ಕಾಂಗ್ರೆಸ್‌ಗಿಂತ ಸ್ವಲ್ಪ ಹೆಚ್ಚಿನ ಹಿಡಿತ ಸಾಧಿಸುವುದಾಗಿ ಎಕ್ಸಿಟ್ ಪೋಲ್‌ಗಳು ಹೇಳಿದ್ದವು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಮೂರು ದಶಕಗಳ ರಾಜಕೀಯ ಸಂಪ್ರದಾಯವೇ ತಲೆಕೆಳಗಾಗುತ್ತದೆ. ಏಕೆಂದರೆ ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್ ಗೆಲ್ಲುತ್ತಿರುವುದು ಇಲ್ಲಿನ ಸಂಪ್ರದಾಯವಾಗಿದೆ. ಆದರೆ ಹಿಮಾಚಲದಲ್ಲಿ ಸರ್ಕಾರ ಬದಲಾಗಲಿದೆಯೇ ಹೊರತು ರಿವಾಜ್ (ಸಂಪ್ರದಾಯ) ಅಲ್ಲ ಎಂದು ಕಾಂಗ್ರೆಸ್ ಪುನರುಚ್ಚರಿಸಿದೆ.

ಸೋಮವಾರ ಹೊರಬಿದ್ದ ಎಕ್ಸಿಟ್ ಪೋಲ್‌ಗಳು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ 24-41 ಸೀಟುಗಳನ್ನು ಮತ್ತು ಕಾಂಗ್ರೆಸ್‌ಗೆ 20-40 ಸೀಟುಗಳನ್ನು ನೀಡಿದ್ದವು. 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷಕ್ಕೆ 35 ಸ್ಥಾನಗಳ ಅಗತ್ಯವಿದೆ. ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಗುಡ್ಡಗಾಡು ರಾಜ್ಯದಲ್ಲಿ ಬಿಜೆಪಿ ಗರಿಷ್ಠ 40 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷವು 30-40 ಸ್ಥಾನಗಳನ್ನು, ಬಿಜೆಪಿ 24-34 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಹಿಮಾಚಲಪ್ರದೇಶದ 68 ಸ್ಥಾನಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12 ರಂದು ಮತದಾನ ನಡೆದಿತ್ತು.

ಹರಿಯಾಣ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಕುಲದೀಪ್ ಸಿಂಗ್ ರಾಥೋಡ್ ಅವರು ಸಿಪಿಎಂನ ರಾಕೇಶ್ ಸಿಂಘಾ ಅವರಿಗಿಂತ ಕಡಿಮೆ (67 ಮತಗಳು) ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲದ ಶಿಮ್ಲಾ ಜಿಲ್ಲೆಯಲ್ಲಿ ಎಂಟು ಕ್ಷೇತ್ರಗಳಿವೆ. ಇದು ಸೇಬುಬೆಳೆಗಾರರ ಪ್ರದೇಶವಾಗಿದೆ. ಈ ಪೈಕಿ ಸದ್ಯ 5ರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಇದರಲ್ಲಿ ರೋಹ್ರು, ಥಿಯೋಗ್ ಮತ್ತು ಶಿಮ್ಲಾ ಸೇರಿವೆ. ಬಿಜೆಪಿ ಮುಖಂಡ ನರೇಂದ್ರ ಬ್ರಗ್ತಾ ಅವರ ನಿಧನದ ನಂತರ ತೆರವಾದ ಜುಬ್ಬಲ್ ಕೊಟ್‌ಖಾಯ್ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ಒಮ್ಮೆ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿರುವ ರಾಂಪುರದಲ್ಲಿ ಬಿಜೆಪಿ ಅಲ್ಪ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. ಆ್ಯಪಲ್ ಬೆಲ್ಟ್ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಅಧಿಕಾರಾವಧಿಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆದಿತ್ತು.

ಡಾಲ್‌ಹೌಸಿಯಲ್ಲಿ ಕಾಂಗ್ರೆಸ್‌ನ ಆರು ಬಾರಿ ಶಾಸಕಿಯಾಗಿರುವ ಆಶಾ ತಿವಾರಿ ಅವರು ಬಿಜೆಪಿಯ ಡಿಎಸ್ ಠಾಕೂರ್ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.

ಪ್ರತಿ ಐದು ವರ್ಷಗಳಿಗೊಮ್ಮೆ ಪರ್ಯಾಯ ಪಕ್ಷಗಳನ್ನು ಆಯ್ಕೆ ಮಾಡುವ ಹಿಮಾಚಲ ಪ್ರದೇಶದ ರಾಜಕೀಯ ಕುತೂಹಲ ಕೆರಳಿಸಿದೆ. ಆಪರೇಷನ್‌ ಕಮಲದ ಭೀತಿಯು ಕಾಂಗ್ರೆಸ್ ಪಕ್ಷಕ್ಕಿದೆ.

ಚುನಾವಣೆಯ ನಂತರದ ಸನ್ನಿವೇಶವನ್ನು ನಿರ್ವಹಿಸಲು ಬಿಜೆಪಿ ಈಗಾಗಲೇ ತನ್ನ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಶಿಮ್ಲಾಕ್ಕೆ ಕಳುಹಿಸಿದೆ. ಬಿಜೆಪಿ ಶಾಸಕರು ಖರೀದಿಯಾಗದಂತೆ ನೋಡಿಕೊಳ್ಳುವುದು ಅಥವಾ ಸಮಯ ಬಿದ್ದರೆ ಇತರ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಅವರ ಜವಾಬ್ದಾರಿಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಐವರು ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಫಲಿತಾಂಶಗಳನ್ನು ಘೋಷಿಸಿದ ನಂತರ ಈ ಸ್ವತಂತ್ರ ಅಭ್ಯರ್ಥಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಪ್ರಮುಖ ಸ್ಥಾನವಾದ ಕಸುಂಪ್ಟಿ ಪ್ರಸ್ತುತ ಕಾಂಗ್ರೆಸ್‌ನ ಅನಿರುದ್ಧ್ ಸಿಂಗ್ ಪರವಾಗಿ ಹೋಗುತ್ತಿದೆ. ಅವರು ಬಿಜೆಪಿಯ ಸುರೇಶ್ ಭಾರದ್ವಾಜ್ ಅವರಿಗಿಂತ ಸುಮಾರು 4,500 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...