Homeಮುಖಪುಟಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾದ ಮೂರು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಜೆಪಿ ಹಿನ್ನಡೆ ಕಾಣುತ್ತಿದೆ. ಕೆಲವೇ ಕ್ಷಣಗಳ ಹಿಂದೆ, ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಹಿಂದಿಕ್ಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ವೇಳೆ ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು ಕಾಂಗ್ರೆಸ್‌ಗಿಂತ ಸ್ವಲ್ಪ ಹೆಚ್ಚಿನ ಹಿಡಿತ ಸಾಧಿಸುವುದಾಗಿ ಎಕ್ಸಿಟ್ ಪೋಲ್‌ಗಳು ಹೇಳಿದ್ದವು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಮೂರು ದಶಕಗಳ ರಾಜಕೀಯ ಸಂಪ್ರದಾಯವೇ ತಲೆಕೆಳಗಾಗುತ್ತದೆ. ಏಕೆಂದರೆ ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್ ಗೆಲ್ಲುತ್ತಿರುವುದು ಇಲ್ಲಿನ ಸಂಪ್ರದಾಯವಾಗಿದೆ. ಆದರೆ ಹಿಮಾಚಲದಲ್ಲಿ ಸರ್ಕಾರ ಬದಲಾಗಲಿದೆಯೇ ಹೊರತು ರಿವಾಜ್ (ಸಂಪ್ರದಾಯ) ಅಲ್ಲ ಎಂದು ಕಾಂಗ್ರೆಸ್ ಪುನರುಚ್ಚರಿಸಿದೆ.

ಸೋಮವಾರ ಹೊರಬಿದ್ದ ಎಕ್ಸಿಟ್ ಪೋಲ್‌ಗಳು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ 24-41 ಸೀಟುಗಳನ್ನು ಮತ್ತು ಕಾಂಗ್ರೆಸ್‌ಗೆ 20-40 ಸೀಟುಗಳನ್ನು ನೀಡಿದ್ದವು. 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷಕ್ಕೆ 35 ಸ್ಥಾನಗಳ ಅಗತ್ಯವಿದೆ. ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಗುಡ್ಡಗಾಡು ರಾಜ್ಯದಲ್ಲಿ ಬಿಜೆಪಿ ಗರಿಷ್ಠ 40 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷವು 30-40 ಸ್ಥಾನಗಳನ್ನು, ಬಿಜೆಪಿ 24-34 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಹಿಮಾಚಲಪ್ರದೇಶದ 68 ಸ್ಥಾನಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12 ರಂದು ಮತದಾನ ನಡೆದಿತ್ತು.

ಹರಿಯಾಣ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಕುಲದೀಪ್ ಸಿಂಗ್ ರಾಥೋಡ್ ಅವರು ಸಿಪಿಎಂನ ರಾಕೇಶ್ ಸಿಂಘಾ ಅವರಿಗಿಂತ ಕಡಿಮೆ (67 ಮತಗಳು) ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲದ ಶಿಮ್ಲಾ ಜಿಲ್ಲೆಯಲ್ಲಿ ಎಂಟು ಕ್ಷೇತ್ರಗಳಿವೆ. ಇದು ಸೇಬುಬೆಳೆಗಾರರ ಪ್ರದೇಶವಾಗಿದೆ. ಈ ಪೈಕಿ ಸದ್ಯ 5ರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಇದರಲ್ಲಿ ರೋಹ್ರು, ಥಿಯೋಗ್ ಮತ್ತು ಶಿಮ್ಲಾ ಸೇರಿವೆ. ಬಿಜೆಪಿ ಮುಖಂಡ ನರೇಂದ್ರ ಬ್ರಗ್ತಾ ಅವರ ನಿಧನದ ನಂತರ ತೆರವಾದ ಜುಬ್ಬಲ್ ಕೊಟ್‌ಖಾಯ್ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ಒಮ್ಮೆ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿರುವ ರಾಂಪುರದಲ್ಲಿ ಬಿಜೆಪಿ ಅಲ್ಪ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. ಆ್ಯಪಲ್ ಬೆಲ್ಟ್ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಅಧಿಕಾರಾವಧಿಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆದಿತ್ತು.

ಡಾಲ್‌ಹೌಸಿಯಲ್ಲಿ ಕಾಂಗ್ರೆಸ್‌ನ ಆರು ಬಾರಿ ಶಾಸಕಿಯಾಗಿರುವ ಆಶಾ ತಿವಾರಿ ಅವರು ಬಿಜೆಪಿಯ ಡಿಎಸ್ ಠಾಕೂರ್ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.

ಪ್ರತಿ ಐದು ವರ್ಷಗಳಿಗೊಮ್ಮೆ ಪರ್ಯಾಯ ಪಕ್ಷಗಳನ್ನು ಆಯ್ಕೆ ಮಾಡುವ ಹಿಮಾಚಲ ಪ್ರದೇಶದ ರಾಜಕೀಯ ಕುತೂಹಲ ಕೆರಳಿಸಿದೆ. ಆಪರೇಷನ್‌ ಕಮಲದ ಭೀತಿಯು ಕಾಂಗ್ರೆಸ್ ಪಕ್ಷಕ್ಕಿದೆ.

ಚುನಾವಣೆಯ ನಂತರದ ಸನ್ನಿವೇಶವನ್ನು ನಿರ್ವಹಿಸಲು ಬಿಜೆಪಿ ಈಗಾಗಲೇ ತನ್ನ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಶಿಮ್ಲಾಕ್ಕೆ ಕಳುಹಿಸಿದೆ. ಬಿಜೆಪಿ ಶಾಸಕರು ಖರೀದಿಯಾಗದಂತೆ ನೋಡಿಕೊಳ್ಳುವುದು ಅಥವಾ ಸಮಯ ಬಿದ್ದರೆ ಇತರ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಅವರ ಜವಾಬ್ದಾರಿಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಐವರು ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಫಲಿತಾಂಶಗಳನ್ನು ಘೋಷಿಸಿದ ನಂತರ ಈ ಸ್ವತಂತ್ರ ಅಭ್ಯರ್ಥಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಪ್ರಮುಖ ಸ್ಥಾನವಾದ ಕಸುಂಪ್ಟಿ ಪ್ರಸ್ತುತ ಕಾಂಗ್ರೆಸ್‌ನ ಅನಿರುದ್ಧ್ ಸಿಂಗ್ ಪರವಾಗಿ ಹೋಗುತ್ತಿದೆ. ಅವರು ಬಿಜೆಪಿಯ ಸುರೇಶ್ ಭಾರದ್ವಾಜ್ ಅವರಿಗಿಂತ ಸುಮಾರು 4,500 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...