Homeಮುಖಪುಟಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಹೆಜ್ಜೆ

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾದ ಮೂರು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಜೆಪಿ ಹಿನ್ನಡೆ ಕಾಣುತ್ತಿದೆ. ಕೆಲವೇ ಕ್ಷಣಗಳ ಹಿಂದೆ, ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಹಿಂದಿಕ್ಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ವೇಳೆ ಬಿಜೆಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು ಕಾಂಗ್ರೆಸ್‌ಗಿಂತ ಸ್ವಲ್ಪ ಹೆಚ್ಚಿನ ಹಿಡಿತ ಸಾಧಿಸುವುದಾಗಿ ಎಕ್ಸಿಟ್ ಪೋಲ್‌ಗಳು ಹೇಳಿದ್ದವು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಮೂರು ದಶಕಗಳ ರಾಜಕೀಯ ಸಂಪ್ರದಾಯವೇ ತಲೆಕೆಳಗಾಗುತ್ತದೆ. ಏಕೆಂದರೆ ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್ ಗೆಲ್ಲುತ್ತಿರುವುದು ಇಲ್ಲಿನ ಸಂಪ್ರದಾಯವಾಗಿದೆ. ಆದರೆ ಹಿಮಾಚಲದಲ್ಲಿ ಸರ್ಕಾರ ಬದಲಾಗಲಿದೆಯೇ ಹೊರತು ರಿವಾಜ್ (ಸಂಪ್ರದಾಯ) ಅಲ್ಲ ಎಂದು ಕಾಂಗ್ರೆಸ್ ಪುನರುಚ್ಚರಿಸಿದೆ.

ಸೋಮವಾರ ಹೊರಬಿದ್ದ ಎಕ್ಸಿಟ್ ಪೋಲ್‌ಗಳು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ 24-41 ಸೀಟುಗಳನ್ನು ಮತ್ತು ಕಾಂಗ್ರೆಸ್‌ಗೆ 20-40 ಸೀಟುಗಳನ್ನು ನೀಡಿದ್ದವು. 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷಕ್ಕೆ 35 ಸ್ಥಾನಗಳ ಅಗತ್ಯವಿದೆ. ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಗುಡ್ಡಗಾಡು ರಾಜ್ಯದಲ್ಲಿ ಬಿಜೆಪಿ ಗರಿಷ್ಠ 40 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷವು 30-40 ಸ್ಥಾನಗಳನ್ನು, ಬಿಜೆಪಿ 24-34 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ.

ಹಿಮಾಚಲಪ್ರದೇಶದ 68 ಸ್ಥಾನಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12 ರಂದು ಮತದಾನ ನಡೆದಿತ್ತು.

ಹರಿಯಾಣ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಕುಲದೀಪ್ ಸಿಂಗ್ ರಾಥೋಡ್ ಅವರು ಸಿಪಿಎಂನ ರಾಕೇಶ್ ಸಿಂಘಾ ಅವರಿಗಿಂತ ಕಡಿಮೆ (67 ಮತಗಳು) ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲದ ಶಿಮ್ಲಾ ಜಿಲ್ಲೆಯಲ್ಲಿ ಎಂಟು ಕ್ಷೇತ್ರಗಳಿವೆ. ಇದು ಸೇಬುಬೆಳೆಗಾರರ ಪ್ರದೇಶವಾಗಿದೆ. ಈ ಪೈಕಿ ಸದ್ಯ 5ರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಇದರಲ್ಲಿ ರೋಹ್ರು, ಥಿಯೋಗ್ ಮತ್ತು ಶಿಮ್ಲಾ ಸೇರಿವೆ. ಬಿಜೆಪಿ ಮುಖಂಡ ನರೇಂದ್ರ ಬ್ರಗ್ತಾ ಅವರ ನಿಧನದ ನಂತರ ತೆರವಾದ ಜುಬ್ಬಲ್ ಕೊಟ್‌ಖಾಯ್ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. ಒಮ್ಮೆ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿರುವ ರಾಂಪುರದಲ್ಲಿ ಬಿಜೆಪಿ ಅಲ್ಪ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. ಆ್ಯಪಲ್ ಬೆಲ್ಟ್ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಅಧಿಕಾರಾವಧಿಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆದಿತ್ತು.

ಡಾಲ್‌ಹೌಸಿಯಲ್ಲಿ ಕಾಂಗ್ರೆಸ್‌ನ ಆರು ಬಾರಿ ಶಾಸಕಿಯಾಗಿರುವ ಆಶಾ ತಿವಾರಿ ಅವರು ಬಿಜೆಪಿಯ ಡಿಎಸ್ ಠಾಕೂರ್ ವಿರುದ್ಧ ಹಿನ್ನಡೆ ಸಾಧಿಸಿದ್ದಾರೆ.

ಪ್ರತಿ ಐದು ವರ್ಷಗಳಿಗೊಮ್ಮೆ ಪರ್ಯಾಯ ಪಕ್ಷಗಳನ್ನು ಆಯ್ಕೆ ಮಾಡುವ ಹಿಮಾಚಲ ಪ್ರದೇಶದ ರಾಜಕೀಯ ಕುತೂಹಲ ಕೆರಳಿಸಿದೆ. ಆಪರೇಷನ್‌ ಕಮಲದ ಭೀತಿಯು ಕಾಂಗ್ರೆಸ್ ಪಕ್ಷಕ್ಕಿದೆ.

ಚುನಾವಣೆಯ ನಂತರದ ಸನ್ನಿವೇಶವನ್ನು ನಿರ್ವಹಿಸಲು ಬಿಜೆಪಿ ಈಗಾಗಲೇ ತನ್ನ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಶಿಮ್ಲಾಕ್ಕೆ ಕಳುಹಿಸಿದೆ. ಬಿಜೆಪಿ ಶಾಸಕರು ಖರೀದಿಯಾಗದಂತೆ ನೋಡಿಕೊಳ್ಳುವುದು ಅಥವಾ ಸಮಯ ಬಿದ್ದರೆ ಇತರ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು ಅವರ ಜವಾಬ್ದಾರಿಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಐವರು ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಫಲಿತಾಂಶಗಳನ್ನು ಘೋಷಿಸಿದ ನಂತರ ಈ ಸ್ವತಂತ್ರ ಅಭ್ಯರ್ಥಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಪ್ರಮುಖ ಸ್ಥಾನವಾದ ಕಸುಂಪ್ಟಿ ಪ್ರಸ್ತುತ ಕಾಂಗ್ರೆಸ್‌ನ ಅನಿರುದ್ಧ್ ಸಿಂಗ್ ಪರವಾಗಿ ಹೋಗುತ್ತಿದೆ. ಅವರು ಬಿಜೆಪಿಯ ಸುರೇಶ್ ಭಾರದ್ವಾಜ್ ಅವರಿಗಿಂತ ಸುಮಾರು 4,500 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...