Homeಮುಖಪುಟಹಿಮಾಚಲ ಪ್ರದೇಶ | ಬಿಜೆಪಿ ಪರ ಹಿಂದುತ್ವ ದುಷ್ಕರ್ಮಿಗಳಿಂದ ಬೆದರಿಕೆ; ಈದ್ ಆಚರಣೆ ರದ್ದು ಮಾಡಿದ...

ಹಿಮಾಚಲ ಪ್ರದೇಶ | ಬಿಜೆಪಿ ಪರ ಹಿಂದುತ್ವ ದುಷ್ಕರ್ಮಿಗಳಿಂದ ಬೆದರಿಕೆ; ಈದ್ ಆಚರಣೆ ರದ್ದು ಮಾಡಿದ ಶಾಲೆ

- Advertisement -
- Advertisement -

ಬಿಜೆಪಿ ಪರ ಹಿಂದುತ್ವ ದುಷ್ಕರ್ಮಿಗಳ ಬೆದರಿಕೆಗಳ ಕಾರಣಕ್ಕೆ ಹಿಮಾಚಲ ಪ್ರದೇಶದ ಶಿಮ್ಲಾದ ಖಾಸಗಿ ಶಾಲೆಯೊಂದು ಸೋಮವಾರ ವಿದ್ಯಾರ್ಥಿಗಳಿಗಾಗಿ ಯೋಜಿಸಿದ್ದ ಈದ್ ಆಚರಣೆಯನ್ನು ರದ್ದುಗೊಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನಮ್ಮ ಮಕ್ಕಳ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಅತ್ಯುನ್ನತ ಆದ್ಯತೆ” ಎಂದು ಹೇಳುವ ಮೂಲಕ ಶಾಲಾ ಅಧಿಕಾರಿಗಳು ಪ್ರಸ್ತಾವಿತ ಆಚರಣೆಗಳನ್ನು ರದ್ದುಗೊಳಿಸಿದ್ದಾರೆ. ಹಿಮಾಚಲ ಪ್ರದೇಶ

ಈದ್ ಆಚರಣೆಗಾಗಿ ಆಕ್ಲೆಂಡ್ ಹೌಸ್ ಸ್ಕೂಲ್ ವಿದ್ಯಾರ್ಥಿಗಳೊಂದಿಗೆ ಕುರ್ತಾ-ಪೈಜಾಮಾ ಮತ್ತು ಕ್ಯಾಪ್‌ಗಳನ್ನು ಧರಿಸುವಂತೆ ಮತ್ತು ಪನೀರ್, ಸೇಮಿಯಾ ಮತ್ತು ಒಣ ಹಣ್ಣುಗಳೊಂದಿಗೆ ರೋಟಿ ರೋಲ್ ಅನ್ನು ತರಲು ಕೇಳಿಕೊಂಡಿತ್ತು ಎಂದು ಪಿಟಿಐ ವರದಿ ಮಾಡಿದೆ.

ಅದಾಗ್ಯೂ, ಹಿಂದೂತ್ವ ದುಷ್ಕರ್ಮಿಗಳ ಗುಂಪಾದ ದೇವ್ ಭೂಮಿ ಸಂಘರ್ಷ ಸಮಿತಿ ಇದನ್ನು ವಿರೋಧಿಸಿದ್ದು, ಒಂದು ವೇಳೆ ಆಚರಣೆ ನಡೆಸಿದರೆ ಶಾಲೆಯನ್ನು “ಘೇರಾವ್” ಮಾಡುವುದಾಗಿ ಹೇಳಿದೆ. ಆಚರಣೆಗಳನ್ನು ರದ್ದುಗೊಳಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿರುವ ದುಷ್ಕರ್ಮಿಗಳು, ಹಿಮಾಚಲ ಪ್ರದೇಶದಲ್ಲಿ ಇಸ್ಲಾಂ ಅನ್ನು ಪ್ರಚಾರ ಮಾಡಲು “ದುರದೃಷ್ಟಕರ” ಪ್ರಯತ್ನ ನಡೆಯುತ್ತಿದೆ ಎಂದು ದುಷ್ಕರ್ಮಿಗಳ ಗುಂಪಿನ ಸದಸ್ಯರು ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶ

“ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಪ್ರಯತ್ನಗಳ ಒಂದು ಭಾಗವಾಗಿ ನಾವು ಹೋಳಿ, ದೀಪಾವಳಿ ಮತ್ತು ಕ್ರಿಸ್‌ಮಸ್ ಅನ್ನು ಆಚರಿಸುವಂತೆಯೇ ನರ್ಸರಿಯಿಂದ 2 ನೇ ತರಗತಿಯವರೆಗೆ ಈದ್-ಉಲ್-ಫಿತರ್ ಆಚರಣೆಗಳನ್ನು ನಡೆಸಲಾಯಿತು” ಎಂದು ಶಾಲೆಯು ಪೋಷಕರಿಗೆ ನೀಡಿದ ಹೇಳಿಕೆಯಲ್ಲಿ ಶಾಲೆ ತಿಳಿಸಿದೆ.

“ಇದು ಸಂಪೂರ್ಣವಾಗಿ ಸಾಂಸ್ಕೃತಿಕ ಕಲಿಕೆಯ ಅನುಭವವಾಗಿ ಉದ್ದೇಶಿಸಲಾಗಿತ್ತು. ಇದರಲ್ಲಿ ಯಾವುದೇ ಧಾರ್ಮಿಕ ಆಚರಣೆಗಳು ಇರಲಿಲ್ಲ. ವಿದ್ಯಾರ್ಥಿಗಳ ಭಾಗವಹಿಸುವಿಕೆ ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿತ್ತು.” ಎಂದು ಅದು ಹೇಳಿದೆ.

“ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಮ್ಮ ಸಂಸ್ಥೆಯ ಬಗ್ಗೆ ಸುಳ್ಳು, ದಾರಿತಪ್ಪಿಸುವ ಮತ್ತು ಕೋಮುವಾದಿಯಾಗಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ” ಎಂಬ ಅಂಶವನ್ನು ಶಾಲೆಯು ಪ್ರತ್ಯೇಕ ಹೇಳಿಕೆಯಲ್ಲಿ ಖಂಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆಚರಣೆಯಲ್ಲಿ ಭಾಗವಹಿಸುವುದು “ಸ್ವಯಂಪ್ರೇರಿತ”ವಾಗಿದ್ದು, ಇದರಲ್ಲಿ “ಯಾವುದೇ ಧಾರ್ಮಿಕ ಆಚರಣೆ ಅಥವಾ ಸೂಚನೆಯನ್ನು ಒಳಗೊಂಡಿಲ್ಲ” ಎಂದು ಶಾಲಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ಪ್ರತಿಕ್ರಿಯಿಸಿರುವ ರಾಜ್ಯದ ಶಿಕ್ಷಣ ಸಚಿವ ರೋಹಿತ್ ಠಾಕೂರ್ ಈ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...