Homeಮುಖಪುಟಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

ಹಿಮಾಚಲ ಪ್ರದೇಶ: ಸರ್ಕಾರ ಅಸ್ಥಿರಗೊಳಿಸಲು ಮುಂದುವರಿದ ಬಿಜೆಪಿ ಪ್ರಯತ್ನ; ಮೂವರು ಸ್ವತಂತ್ರ ಶಾಸಕರಿಂದ ರಾಜೀನಾಮೆ

- Advertisement -
- Advertisement -

ಹಿಮಾಚಲ ಪ್ರದೇಶ ರಾಜಕೀಯ ಬೆಳವಣಿಗೆಗಳ ನಾಟಕೀಯ ತಿರುವಿನಲ್ಲಿ, ಫೆಬ್ರವರಿ 27ರ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಹರ್ಷ್ ಮಹಾಜನ್ ಅವರಿಗೆ ಮತ ಹಾಕಿದ್ದ ಮೂವರು ಸ್ವತಂತ್ರ ಶಾಸಕರು, ಆರು ಜನ ಅನರ್ಹ ಕಾಂಗ್ರೆಸ್ ಶಾಸಕರೊಂದಿಗೆ ಒಂದು ವಾರಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಇದೀಗ ಮೂವರು ಸ್ವತಂತ್ರ ಶಾಸಕರು ಶುಕ್ರವಾರ ವಿಧಾನಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡೆಹ್ರಾದಿಂದ ಹೋಶಿಯಾರ್ ಸಿಂಗ್, ಹಮೀರ್‌ಪುರದಿಂದ ಆಶಿಶ್ ಶರ್ಮಾ ಮತ್ತು ನಲಗಢದಿಂದ ಕೆಎಲ್ ಠಾಕೂರ್ ಎಂಬ ಮೂವರು ಶಾಸಕರು ಶಿಮ್ಲಾದಲ್ಲಿ ವಿಧಾನಸಭಾ ಕಾರ್ಯದರ್ಶಿ ಯಶಪಾಲ್ ಶರ್ಮಾ ಅವರಿಗೆ ರಾಜೀನಾಮೆ ಸಲ್ಲಿಸಿದರು.

ನಾವು ಮೂವರೂ ಬಿಜೆಪಿ ಸೇರುತ್ತಿದ್ದೇವೆ; ನಾವು ಈ ಹಿಂದೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೆವು. ಆದರೆ, ಅವರಿರಿಂದ ನಮಗೆ ಗೌರವ ಸಿಗಲಿಲ್ಲ. ಅಲ್ಲದೆ, ನಮ್ಮ ಕ್ಷೇತ್ರಗಳಲ್ಲಿ ದಿನನಿತ್ಯದ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ. ಹಾಗಾಗಿ, ಬಿಜೆಪಿಗೆ ಸೇರುವುದು ಪ್ರಜ್ಞಾಪೂರ್ವಕ ನಿರ್ಧಾರವಾಗಿದೆ ಎಂದು ಡೆಹ್ರಾದಿಂದ ಎರಡನೇ ಬಾರಿಗೆ ಶಾಸಕರಾಗಿರುವ ಹೋಶಿಯಾರ್ ಸಿಂಗ್ ಹೇಳಿದ್ದಾರೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ರಾಜೇಶ್ ಶರ್ಮಾ ಅವರನ್ನು 4,024 ಮತಗಳಿಂದ ಸೋಲಿಸಿದ್ದರು. ಹೋಶಿಯಾರ್ ಸಿಂಗ್ ಅವರು ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮೊದಲು ಬಿಜೆಪಿ ಸೇರಿದಾಗ ಈಗಾಗಲೇ ಸ್ವತಂತ್ರ ಶಾಸಕರಾಗಿದ್ದರು. ಆದರೆ, ಪಕ್ಷದ ಟಿಕೆಟ್ ನಿರಾಕರಿಸಲಾಯಿತು.

“ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ; ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ ಎಲ್ಲರನ್ನೂ ಗುರಿಯಾಗಿಸಿಕೊಂಡಿದೆ. ನಾವು ನಮ್ಮ ಆತ್ಮಸಾಕ್ಷಿಯನ್ನು ಅನುಸರಿಸಿದ್ದೇವೆ, ಹೊರಗಿನ ಅಭ್ಯರ್ಥಿಗೆ (ಅಭಿಷೇಕ್ ಮನು ಸಿಂಘ್ವಿ) ಮತ ಹಾಕಲು ಅದು ನಮಗೆ ಅವಕಾಶ ನೀಡಲಿಲ್ಲ. ನಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ” ರಾಜೀನಾಮೆ ನೀಡಿದ ಶಾಸಕ ಠಾಕೂರ್ ಹೇಳಿದ್ದಾರೆ.

2012ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ನಲಗಢ ಕ್ಷೇತ್ರವನ್ನು ಗೆದ್ದಿದ್ದ ಠಾಕೂರ್, “ನಾನು ಬಿಜೆಪಿ ಸಿದ್ಧಾಂತದಿಂದ ಬಂದವನು” ಎಂದು ಹೇಳಿದರು. ಎರಡು ಬಾರಿ ಶಾಸಕರಾಗಿದ್ದ ಲಖ್ವಿಂದರ್ ರಾಣಾ ಅವರಿಗೆ ಬಿಜೆಪಿ ಆದ್ಯತೆ ನೀಡಿದ್ದರಿಂದ 2017 ರ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಪಕ್ಷದ ಟಿಕೆಟ್ ನಿರಾಕರಿಸಲಾಯಿತು, ಅವರು ಚುನಾವಣೆಗೆ ಕೆಲವು ದಿನಗಳ ಮೊದಲು ಕೇಸರಿ ಪಕ್ಷಕ್ಕೆ ಬದಲಾಗಿದ್ದರು.

ಆಶಿಶ್ ಶರ್ಮಾ ಅವರನ್ನು ಸಂಪರ್ಕಿಸಿದಾಗ, ಹಮೀರ್‌ಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರನ್ನು ಹಲವಾರು ಸಂದರ್ಭಗಳಲ್ಲಿ ಸಂಪರ್ಕಿಸಿದ್ದು ವ್ಯರ್ಥವಾಯಿತು. ನಾನು ಮುಖ್ಯಮಂತ್ರಿಯನ್ನು ಭೇಟಿಯಾದಾಗಲೆಲ್ಲಾ ಕೇವಲ ಭರವಸೆಯೊಂದಿಗೆ ಹಿಂದಿರುಗಿದೆ. ಅಧಿಕಾರಿಗಳ ಹಸ್ತಕ್ಷೇಪವು ವಿಷಯಗಳನ್ನು ಮತ್ತಷ್ಟು ಕಷ್ಟಕರವಾಗಿಸಿದೆ” ಎಂದು ಅವರು ಹೇಳಿದರು.

ಮೂವರು ಸ್ವತಂತ್ರ ಶಾಸಕರು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರನ್ನು ಭೇಟಿ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರನ್ನು ಭೇಟಿ ಮಾಡಿದರು. ನಂತರ ಮೂವರು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರನ್ನು ಭೇಟಿಯಾದರು.

ಅವರನ್ನು ಸಂಪರ್ಕಿಸಿದಾಗ, ಮುಖ್ಯಮಂತ್ರಿ ಸುಖು ರಾಜೀನಾಮೆಗಳ ಬಗ್ಗೆ ಅಜ್ಞಾನವನ್ನು ತೋರಿಸಿದರು. ಬಹುಶಃ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತಾರೆ ಎಂದು ಅವರು ಹೇಳಿದರು.

ಕಟ್ ಮೋಷನ್ ಮತ್ತು ಬಜೆಟ್ ಸಮಯದಲ್ಲಿ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಧಿಕ್ಕರಿಸಿದ ಆರು ಕಾಂಗ್ರೆಸ್ ಸದಸ್ಯರನ್ನು ಸದನದಿಂದ ಅನರ್ಹಗೊಳಿಸಲಾಗಿದೆ. ಮೂವರು ಸ್ವತಂತ್ರ ಶಾಸಕರು ರಾಜೀನಾಮೆ ನೀಡಿದ್ದರಿಂದ 68 ಸದಸ್ಯರ ಸದನದಲ್ಲಿ ಶಾಸಕರ ಬಲ ಇದೀಗ 59ಕ್ಕೆ ಕುಸಿದಿದೆ. ಈಗ ಸ್ಪೀಕರ್ ಸೇರಿದಂತೆ ಕಾಂಗ್ರೆಸ್ 34 ಸದಸ್ಯರನ್ನು ಹೊಂದಿದ್ದರೆ, ಬಿಜೆಪಿ 25 ಶಾಸಕರನ್ನು ಹೊಂದಿದೆ.

ಇದನ್ನೂ ಓದಿ; ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸುವಂತೆ ಅರ್ಜಿ; ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...