Homeಮುಖಪುಟಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

ಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮತ್ತೊಂದೆಡೆ ಆಪರೇಷನ್ ಕಮಲದ ಭೀತಿಯನ್ನು ಕಾಂಗ್ರೆಸ್ ಎದುರಿಸುತ್ತಿದೆ. ಹೀಗಾಗಿ ಹಿಮಾಚಲ ಪ್ರದೇಶದ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ವದಿಯಾಗಿದೆ.

‘ಆಪರೇಷನ್ ಕಮಲ’ಕ್ಕೆ ಪೂರ್ವಭಾವಿಯಾಗಿ ಶಾಸಕರನ್ನು ಸ್ಥಳಾಂತರಿಸುವ ಜವಾಬ್ದಾರಿಯನ್ನು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಶಾಸಕರನ್ನು ಬಸ್‌ಗಳಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಗಮನಿಸುತ್ತಿದ್ದಾರೆ. ಇಂದು ಅವರು ಶಿಮ್ಲಾ ತಲುಪುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸಾಂಪ್ರದಾಯಿಕವಾಗಿ ಹಿಮಾಚಲಪ್ರದೇಶದಲ್ಲಿ ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲಾಗುತ್ತಿದೆ. ರಾಜ್ಯದಲ್ಲಿನ 55 ಲಕ್ಷ ಮತದಾರರಿದ್ದಾರೆ. 68 ಕ್ಷೇತ್ರಗಳ ಚುನಾವಣೆ ನವೆಂಬರ್ 12ರಂದು ನಡೆದಿದ್ದು, ಶೇಕಡಾ 75 ಕ್ಕಿಂತ ಹೆಚ್ಚು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 412 ಅಭ್ಯರ್ಥಿಗಳು ಕಣದಲ್ಲಿದ್ದರು.

ಬೆಲೆ ಏರಿಕೆ, ನಿರುದ್ಯೋಗ, ಹಳೆಯ ಪಿಂಚಣಿ ಯೋಜನೆ, ರಾಜ್ಯದ ನಿವಾಸಿಗಳು ಎದುರಿಸುತ್ತಿರುವ ಜೀವನ ಮತ್ತು ಜೀವನೋಪಾಯದ ಇತರ ಮೂಲಭೂತ ಸಮಸ್ಯೆಗಳ ಬಗ್ಗೆ ಮತದಾರರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ತನ್ನ ಗೆಲುವಿನ ವಿಶ್ವಾಸದಲ್ಲಿದೆ.

ಕಾಂಗ್ರೆಸ್ ಪಕ್ಷವು ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಾತ್ರ ಅಧಿಕಾರವನ್ನು ಹೊಂದಿದೆ. ಇವೆರಡೂ ರಾಜ್ಯಗಳು 2023 ರಲ್ಲಿ ಚುನಾವಣೆ ಎದುರಿಸಲಿವೆ. ಪಕ್ಷದ ಪುನರುಜ್ಜೀವನದ ಯಾವುದೇ ಭರವಸೆಯು ಹಿಮಾಚಲ ಪ್ರದೇಶದಿಂದ ಪ್ರಾರಂಭವಾಗಬೇಕು ಎಂದು ಕಾಂಗ್ರೆಸ್ ಒಳಗಿನವರು ಹೇಳುತ್ತಿದ್ದಾರೆ.

ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ತಮ್ಮ ಪಕ್ಷ ಆಪರೇಷನ್ ಕಮಲಕ್ಕೆ ಹೆದರುವುದಿಲ್ಲ ಎಂದು ಹಿರಿಯ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.

“ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತೇವೆ. ನಾವು ರಾಜ್ಯದಲ್ಲಿ 10 ಯೋಜನೆಗಳನ್ನು ಜಾರಿಗೊಳಿಸುವುದಾಗಿ ಖಾತರಿ ಪಡಿಸುತ್ತೇವೆ. ನಾವು ‘ಆಪರೇಷನ್ ಕಮಲ’ಕ್ಕೆ ಹೆದರುವುದಿಲ್ಲ, ಈ ಅಂಕಿಅಂಶಗಳು ಮುಂದುವರಿದರೆ ಅಂತಹ ಯಾವುದೇ ಪರಿಸ್ಥಿತಿ ಇರುವುದಿಲ್ಲ” ಎಂದು ಶುಕ್ಲಾ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯ ಪ್ರಕಾರ 39 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 26 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.  ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಹಮೀರ್‌ಪುರದಿಂದ ಸ್ವತಂತ್ರ ಅಭ್ಯರ್ಥಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಂಡಾಯಗಾರ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ. ಶರ್ಮಾ ಅವರು ಕಾಂಗ್ರೆಸ್ ಅಭ್ಯರ್ಥಿ ಪುಷ್ಪಿಂದರ್ ವರ್ಮಾ ಅವರನ್ನು 12,899 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಹಿಮಾಚಲ ಪ್ರದೇಶದ ಹಾಲಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಸೇರಾಜ್‌ನಿಂದ 30,000 ಮತಗಳಿಂದ ಗೆದ್ದಿದ್ದಾರೆ. ಪಕ್ಷವು ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ಪವನ್ ಖೇರಾ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...