Homeಮುಖಪುಟಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

ಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮತ್ತೊಂದೆಡೆ ಆಪರೇಷನ್ ಕಮಲದ ಭೀತಿಯನ್ನು ಕಾಂಗ್ರೆಸ್ ಎದುರಿಸುತ್ತಿದೆ. ಹೀಗಾಗಿ ಹಿಮಾಚಲ ಪ್ರದೇಶದ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ವದಿಯಾಗಿದೆ.

‘ಆಪರೇಷನ್ ಕಮಲ’ಕ್ಕೆ ಪೂರ್ವಭಾವಿಯಾಗಿ ಶಾಸಕರನ್ನು ಸ್ಥಳಾಂತರಿಸುವ ಜವಾಬ್ದಾರಿಯನ್ನು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಶಾಸಕರನ್ನು ಬಸ್‌ಗಳಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಗಮನಿಸುತ್ತಿದ್ದಾರೆ. ಇಂದು ಅವರು ಶಿಮ್ಲಾ ತಲುಪುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸಾಂಪ್ರದಾಯಿಕವಾಗಿ ಹಿಮಾಚಲಪ್ರದೇಶದಲ್ಲಿ ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲಾಗುತ್ತಿದೆ. ರಾಜ್ಯದಲ್ಲಿನ 55 ಲಕ್ಷ ಮತದಾರರಿದ್ದಾರೆ. 68 ಕ್ಷೇತ್ರಗಳ ಚುನಾವಣೆ ನವೆಂಬರ್ 12ರಂದು ನಡೆದಿದ್ದು, ಶೇಕಡಾ 75 ಕ್ಕಿಂತ ಹೆಚ್ಚು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 412 ಅಭ್ಯರ್ಥಿಗಳು ಕಣದಲ್ಲಿದ್ದರು.

ಬೆಲೆ ಏರಿಕೆ, ನಿರುದ್ಯೋಗ, ಹಳೆಯ ಪಿಂಚಣಿ ಯೋಜನೆ, ರಾಜ್ಯದ ನಿವಾಸಿಗಳು ಎದುರಿಸುತ್ತಿರುವ ಜೀವನ ಮತ್ತು ಜೀವನೋಪಾಯದ ಇತರ ಮೂಲಭೂತ ಸಮಸ್ಯೆಗಳ ಬಗ್ಗೆ ಮತದಾರರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ತನ್ನ ಗೆಲುವಿನ ವಿಶ್ವಾಸದಲ್ಲಿದೆ.

ಕಾಂಗ್ರೆಸ್ ಪಕ್ಷವು ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಾತ್ರ ಅಧಿಕಾರವನ್ನು ಹೊಂದಿದೆ. ಇವೆರಡೂ ರಾಜ್ಯಗಳು 2023 ರಲ್ಲಿ ಚುನಾವಣೆ ಎದುರಿಸಲಿವೆ. ಪಕ್ಷದ ಪುನರುಜ್ಜೀವನದ ಯಾವುದೇ ಭರವಸೆಯು ಹಿಮಾಚಲ ಪ್ರದೇಶದಿಂದ ಪ್ರಾರಂಭವಾಗಬೇಕು ಎಂದು ಕಾಂಗ್ರೆಸ್ ಒಳಗಿನವರು ಹೇಳುತ್ತಿದ್ದಾರೆ.

ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ತಮ್ಮ ಪಕ್ಷ ಆಪರೇಷನ್ ಕಮಲಕ್ಕೆ ಹೆದರುವುದಿಲ್ಲ ಎಂದು ಹಿರಿಯ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.

“ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತೇವೆ. ನಾವು ರಾಜ್ಯದಲ್ಲಿ 10 ಯೋಜನೆಗಳನ್ನು ಜಾರಿಗೊಳಿಸುವುದಾಗಿ ಖಾತರಿ ಪಡಿಸುತ್ತೇವೆ. ನಾವು ‘ಆಪರೇಷನ್ ಕಮಲ’ಕ್ಕೆ ಹೆದರುವುದಿಲ್ಲ, ಈ ಅಂಕಿಅಂಶಗಳು ಮುಂದುವರಿದರೆ ಅಂತಹ ಯಾವುದೇ ಪರಿಸ್ಥಿತಿ ಇರುವುದಿಲ್ಲ” ಎಂದು ಶುಕ್ಲಾ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯ ಪ್ರಕಾರ 39 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 26 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.  ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಹಮೀರ್‌ಪುರದಿಂದ ಸ್ವತಂತ್ರ ಅಭ್ಯರ್ಥಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಂಡಾಯಗಾರ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ. ಶರ್ಮಾ ಅವರು ಕಾಂಗ್ರೆಸ್ ಅಭ್ಯರ್ಥಿ ಪುಷ್ಪಿಂದರ್ ವರ್ಮಾ ಅವರನ್ನು 12,899 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಹಿಮಾಚಲ ಪ್ರದೇಶದ ಹಾಲಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಸೇರಾಜ್‌ನಿಂದ 30,000 ಮತಗಳಿಂದ ಗೆದ್ದಿದ್ದಾರೆ. ಪಕ್ಷವು ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತದ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ಪವನ್ ಖೇರಾ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...