Homeಕರೋನಾ ತಲ್ಲಣಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

ಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

- Advertisement -
- Advertisement -

ಹಿಮಾಲಯದ ಹಳ್ಳಿಗಳ ಜನರಿಗೆ ಲಸಿಕೆ ನೀಡುವುದು ಒಂದು ಸಾಹಸದ ಕೆಲಸವಾಗಿ ಮಾರ್ಪಟ್ಟಿದೆ. ಹಿಮಾಚಲ ಪ್ರದೇಶದ ಮಲಾನಾ ಗ್ರಾಮಕ್ಕೆ ಭೇಟಿ ನೀಡಿ, ಲಸಿಕೆ ನೀಡಲು ಹೊರಟಿದ್ದ ಆರೋಗ್ಯ ಕಾರ್ಯಕರ್ತರ ತಂಡ ಸುಮಾರು ಮೂರು ಗಂಟೆಗಳ ಕಾಲ ಬೆಟ್ಟ ಗುಡ್ಡಗಳನ್ನು ಹತ್ತಿ ಇಳಿದು ಸಾಹಸ ಮಾಡಿದೆ.

ಮಲಾನಾ ಗ್ರಾಮಕ್ಕೆ ಇದ್ದ ರಸ್ತೆ ಭೂಕುಸಿತದಿಂದ ನಾಶವಾಗಿರುವ ಕಾರಣ ಇಂತಹ ಸಾಹಸಕ್ಕೆ ಅಧಿಕಾರಿಗಳು ಮುಂದಾಗಬೇಕಾಗಿತ್ತು. ಮೂರು ಗಂಟೆಗಳ ಸಾಹಸದ ಬಳಿಕ ಹಳ್ಳಿಗೆ ತೆರಳಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಡಿದಾದ ಭೂಪ್ರದೇಶದ ಹೊರತಾಗಿಯೂ, ಹಿಮಾಚಲ ಪ್ರದೇಶದ ಮಲಾನಾ ಗ್ರಾಮವೂ, ಎಲ್ಲಾ ವಯಸ್ಕರು ಒಂದು ಡೋಸ್ ಲಸಿಕೆ ಪಡೆದ ಭಾರತದ ಮೊದಲ ಗ್ರಾಮವಾಗಿದೆ.

ಹಿಮಾಚಲ ಪ್ರದೇಶದ ಕಡಿದಾದ ಭೌಗೋಳಿಕತೆಯಿಂದಾಗ ದೂರವಿರುವ ಹಳ್ಳಿಗಳನ್ನು ತಲುಪಲು ಗಂಟೆಗಟ್ಟಲೆ ಅಥವಾ ಇಡೀ ದಿನ ನಡೆದು ಹೋಗುವುದು ಆರೋಗ್ಯ ಕಾರ್ಯಕರ್ತರಿಗೆ ಒಂದು ಸವಾಲಾಗಿದೆ. ಇದರ ಜೊತೆಗೆ ಧಾರ್ಮಿಕ ನಂಬಿಕೆಗಳು ಕೂಡ ಲಸಿಕೆ ನೀಡುವಲ್ಲಿ ಸವಾಲಾಗಿದೆ ಎನ್ನಲಾಗಿದೆ.

 ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಸೆಪ್ಟೆಂಬರ್ 14 ರಂದು, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅತುಲ್ ಗುಪ್ತಾ ನೇತೃತ್ವದ ಐವರ ತಂಡವು ಎರಡನೇ ಲಸಿಕೆ ಡೋಸ್‌ಗಳನ್ನು ನೀಡಲು ಮಲಾನಾಗೆ ಹೊರಟಿತ್ತು. ಭೂಕುಸಿತದಿಂದ ರಸ್ತೆ ಹಾಳಾಗದ್ದ ಕಾರಣ ವಾಹನಗಳನ್ನು ಬಿಟ್ಟು, ಲಸಿಕೆ ಪೆಟ್ಟಿಗೆಗಳನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಬೆಟ್ಟ ಗುಡ್ಡಗಳನ್ನು ಹತ್ತಿ, ಇಳಿದು, ನದಿಯನ್ನು ದಾಟಿ ಹಳ್ಳಿಗೆ ಸೇರಿದೆ.

ಇತ್ತ, ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿದೆ. ಆದರೆ, ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.


ಇದನ್ನೂ ಓದಿ: ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....