Homeಕರೋನಾ ತಲ್ಲಣಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

ಹಿ. ಪ್ರದೇಶ: ಲಸಿಕೆ ನೀಡಲು 3 ಗಂಟೆ ಬೆಟ್ಟ ಗುಡ್ಡದಲ್ಲಿ ಪಾದಯಾತ್ರೆ ಮಾಡಿದ ಆರೋಗ್ಯ ಕಾರ್ಯಕರ್ತರು

- Advertisement -
- Advertisement -

ಹಿಮಾಲಯದ ಹಳ್ಳಿಗಳ ಜನರಿಗೆ ಲಸಿಕೆ ನೀಡುವುದು ಒಂದು ಸಾಹಸದ ಕೆಲಸವಾಗಿ ಮಾರ್ಪಟ್ಟಿದೆ. ಹಿಮಾಚಲ ಪ್ರದೇಶದ ಮಲಾನಾ ಗ್ರಾಮಕ್ಕೆ ಭೇಟಿ ನೀಡಿ, ಲಸಿಕೆ ನೀಡಲು ಹೊರಟಿದ್ದ ಆರೋಗ್ಯ ಕಾರ್ಯಕರ್ತರ ತಂಡ ಸುಮಾರು ಮೂರು ಗಂಟೆಗಳ ಕಾಲ ಬೆಟ್ಟ ಗುಡ್ಡಗಳನ್ನು ಹತ್ತಿ ಇಳಿದು ಸಾಹಸ ಮಾಡಿದೆ.

ಮಲಾನಾ ಗ್ರಾಮಕ್ಕೆ ಇದ್ದ ರಸ್ತೆ ಭೂಕುಸಿತದಿಂದ ನಾಶವಾಗಿರುವ ಕಾರಣ ಇಂತಹ ಸಾಹಸಕ್ಕೆ ಅಧಿಕಾರಿಗಳು ಮುಂದಾಗಬೇಕಾಗಿತ್ತು. ಮೂರು ಗಂಟೆಗಳ ಸಾಹಸದ ಬಳಿಕ ಹಳ್ಳಿಗೆ ತೆರಳಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಡಿದಾದ ಭೂಪ್ರದೇಶದ ಹೊರತಾಗಿಯೂ, ಹಿಮಾಚಲ ಪ್ರದೇಶದ ಮಲಾನಾ ಗ್ರಾಮವೂ, ಎಲ್ಲಾ ವಯಸ್ಕರು ಒಂದು ಡೋಸ್ ಲಸಿಕೆ ಪಡೆದ ಭಾರತದ ಮೊದಲ ಗ್ರಾಮವಾಗಿದೆ.

ಹಿಮಾಚಲ ಪ್ರದೇಶದ ಕಡಿದಾದ ಭೌಗೋಳಿಕತೆಯಿಂದಾಗ ದೂರವಿರುವ ಹಳ್ಳಿಗಳನ್ನು ತಲುಪಲು ಗಂಟೆಗಟ್ಟಲೆ ಅಥವಾ ಇಡೀ ದಿನ ನಡೆದು ಹೋಗುವುದು ಆರೋಗ್ಯ ಕಾರ್ಯಕರ್ತರಿಗೆ ಒಂದು ಸವಾಲಾಗಿದೆ. ಇದರ ಜೊತೆಗೆ ಧಾರ್ಮಿಕ ನಂಬಿಕೆಗಳು ಕೂಡ ಲಸಿಕೆ ನೀಡುವಲ್ಲಿ ಸವಾಲಾಗಿದೆ ಎನ್ನಲಾಗಿದೆ.

 ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಸೆಪ್ಟೆಂಬರ್ 14 ರಂದು, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅತುಲ್ ಗುಪ್ತಾ ನೇತೃತ್ವದ ಐವರ ತಂಡವು ಎರಡನೇ ಲಸಿಕೆ ಡೋಸ್‌ಗಳನ್ನು ನೀಡಲು ಮಲಾನಾಗೆ ಹೊರಟಿತ್ತು. ಭೂಕುಸಿತದಿಂದ ರಸ್ತೆ ಹಾಳಾಗದ್ದ ಕಾರಣ ವಾಹನಗಳನ್ನು ಬಿಟ್ಟು, ಲಸಿಕೆ ಪೆಟ್ಟಿಗೆಗಳನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಬೆಟ್ಟ ಗುಡ್ಡಗಳನ್ನು ಹತ್ತಿ, ಇಳಿದು, ನದಿಯನ್ನು ದಾಟಿ ಹಳ್ಳಿಗೆ ಸೇರಿದೆ.

ಇತ್ತ, ಒಕ್ಕೂಟ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತವಾಗಿ ಲಸಿಕೆಯನ್ನು ನೀಡುವುದಾಗಿ ಘೋಷಿಸಿದೆ. ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಗ್ರಾಮ ಗ್ರಾಮಗಳಿಗೆ ತೆರಳಿ ಲಸಿಕೆ ನೀಡುವ ಪ್ರಯತ್ನವನ್ನೂ ಮಾಡುತ್ತಿದೆ. ಆದರೆ, ಖಾಸಗಿ ಆಸ್ಪತ್ರೆಗಳಿಂದ ಕಟ್ಟಡ ಕಾರ್ಮಿಕರಿಗಾಗಿ ಲಸಿಕೆಯನ್ನು ಖರೀದಿಸಲು ಕಾರ್ಮಿಕ ನಿಧಿಯನ್ನು ಸರ್ಕಾರ ಬಳಸುತ್ತಿದೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಆ.27ರಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಯಾದೇಶ ಹೊರಡಿಸಿದ್ದು, “ಪ್ರತಿ ಡೋಸ್‌ಗೆ 780 ರೂ. ಪಡೆದು, ಕೋವಿಶೀಲ್ಡ್ ಲಸಿಕೆಯ 2 ಲಕ್ಷ ಡೋಸ್ ಗಳನ್ನು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಅದಕ್ಕಾಗಿ 15.60 ಕೋಟಿ ರೂ. ವಿನಿಯೋಗಿಸಲು ಯೋಜಿಸಲಾಗಿದೆ” ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.


ಇದನ್ನೂ ಓದಿ: ಲಸಿಕೆ ನೀಡಲು ಕಾರ್ಮಿಕ ನಿಧಿ ದುರ್ಬಳಕೆ; ‘ದಿ ಪ್ರಿಂಟ್‌’ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...