Homeಮುಖಪುಟಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

1990ರಲ್ಲಿ ಬಿಜೆಪಿ ಸರ್ಕಾರ ಸೇಬು ಬೆಳೆಗಾರರ ಮೇಲೆ ಗುಂಡು ಹಾರಿಸಿ ಮೂವರನ್ನು ಕೊಂದಿತ್ತು. ಆನಂತರದ ಚುನಾವಣೆಯಲ್ಲಿ ಅದು ಹೀನಾಯ ಸೋಲು ಕಂಡಿತ್ತು. ಈಗ ಮತ್ತೆ ಸೇಬು ಬೆಳೆಗಾರರು ಹೋರಾಟಕ್ಕಿಳಿದಿದ್ದಾರೆ...

- Advertisement -
- Advertisement -

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. 1985 ರಿಂದ 2017ರವರೆಗೆ ಹಿಮಾಚಲ ಪ್ರದೇಶದಲ್ಲಿ ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಧಿಕ್ಕಾರಕ್ಕೇರುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿವೆ. ಕಳೆದ 8 ಚುನಾವಣೆಗಳಲ್ಲಿ ನಾಲ್ಕು ಬಾರಿ ಕಾಂಗ್ರೆಸ್ ಗೆದ್ದರೆ, ನಾಲ್ಕು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಅಂದರೆ 1977ರಿಂದ ಈ ರಾಜ್ಯದಲ್ಲಿ ಯಾವುದೇ ಪಕ್ಷ ಸತತ ಎರಡು ಬಾರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಆ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆ, ಬಿಜೆಪಿ ಎರಡನೇ ಅವಧಿಗೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ 41 ಸ್ಥಾನಗಳಲ್ಲಿ, ಕಾಂಗ್ರೆಸ್ 25 ಸ್ಥಾನಗಳಲ್ಲಿ ಗೆದ್ದರೆ ಆಪ್ ಖಾತೆ ತೆರೆಯವುದು ಕಷ್ಟ ಎಂದಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿತ್ತು. 21 ಸ್ಥಾನ ಪಡೆದ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು. ಈ ಬಾರಿ ಸರಳ ಬಹುಮತಕ್ಕೆ ಬೇಕಾದ 35 ಸ್ಥಾನಗಳನ್ನು ಯಾವ ಪಕ್ಷ ತಲುಪಲಿದೆ ಎಂಬುದು ಸುಲಭಕ್ಕೆ ನಿರ್ಣಯಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹಲವು ಕಾಂಗ್ರೆಸ್ ಮುಖಂಡರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದರೆ, ಕಾಂಗ್ರೆಸ್ ಸೇಬು ಬೆಳೆಗಾರರನ್ನು ನಂಬಿ ಕುಳಿತಿದೆ.

ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶದ ಮುಖ್ಯ ವಾಣಿಜ್ಯ ಬೆಳೆ ಸೇಬು. ಭಾರತದ ಒಟ್ಟು ಸೇಬು ಬೆಳೆಯ ಶೇ.26ರಷ್ಟು ಹಿಮಾಚಲ ಪ್ರದೇಶವೊಂದರಿಂದಲೇ ಬರುತ್ತದೆ. ರಾಜ್ಯ ಸರ್ಕಾರಕ್ಕೆ ವಾರ್ಷಿಕ 5000 ಕೋಟಿ ರೂಗಳಿಗಿಂತ ಅತಿ ಹೆಚ್ಚು ಆದಾಯ ತಂದುಕೊಡುವ ಸೇಬು ಬೆಳೆಗಾರರು ಸದ್ಯಕ್ಕೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಸೇಬಿಗೆ ಎಂಎಸ್‌ಪಿ ನಿಗದಿಗೊಳಿಸಿಲ್ಲ, ಖಾಸಗಿ ಮಧ್ಯವರ್ತಿಗಳನ್ನು ತಡೆಯುತ್ತಿಲ್ಲ ಎಂಬುದು ರೈತರ ಹಳೆಯ ಕೂಗು. ಅದರೊಟ್ಟಿಗೆ ರಸಗೊಬ್ಬರ ಮತ್ತು ಸೇಬು ಪ್ಯಾಕ್ ಮಾಡುವ ರಟ್ಟಿನ ಬೆಲೆ ಹೆಚ್ಚು ಮಾಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಪ್ಯಾಕ್ ಮಾಡಿದ ಬೆಳೆಗಳ ಮೇಲಿನ ಜಿಎಸ್‌ಟಿಯನ್ನು 12%ಇಂದ 18%ಗೆ ಹೆಚ್ಚಿಸಿರುವುದು ಅವರನ್ನು ಕೆರಳಿಸಿದೆ. ಇದೆಲ್ಲವೂ ಈ ಸರ್ಕಾರವನ್ನು ಆಹುತಿ ತೆಗೆದುಕೊಳ್ಳುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮರುಕಳಿಸುವುದೇ 1990ರ ಸೇಬು ಬೆಳೆಗಾರರ ಹೋರಾಟ?

1990ರಲ್ಲಿ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಶಾಂತಕುಮಾರ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಸೇಬು ಬೆಳೆಗಾರರು ಎಂಎಸ್‌ಪಿ ನಿಗದಿ ಮಾಡಬೇಕೆಂದು ಒತ್ತಾಯಿಸಿ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ಕೋಟ್‌ಘರ್‌ನಲ್ಲಿ ತಾರಕಕ್ಕೇರಿದ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಗೋಲಿಬಾರ್ ನಡೆಸಲು ಆದೇಶವಿತ್ತಿತ್ತು. ಇದರಿಂದಾಗಿ ಗೋವಿಂದ್ ಸಿಂಗ್, ತಾರ ಚಂದ್ ಮತ್ತು ಹಿರಾ ಸಿಂಗ್ ಎಂಬ ಸೇಬು ಬೆಳೆಗಾರರು ಗುಂಡಿಗೆ ಬಲಿಯಾದರೆ ನೂರಾರು ಜನರು ಗಾಯಗೊಂಡರು.

ಇದು 1993ರಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಗೆ ಕಾರಣವಾಯಿತು. 1990ರ ಚುನಾವಣೆಯಲ್ಲಿ 46 ಸ್ಥಾನ ಗೆದ್ದಿದ್ದ ಬಿಜೆಪಿ ಮೂರೇ ವರ್ಷದಲ್ಲಿ ಕೇವಲ 8 ಸ್ಥಾನಗಳಿಗೆ ಕುಸಿಯಿತು. ಸಿಎಂ ಆಗಿದ್ದ ಶಾಂತಕುಮಾರ್ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದು ಎರಡರಲ್ಲಿಯೂ ಸೋಲು ಕಂಡರು. ಸೇಬು ಬೆಳೆಗಾರರ ಸಂಪೂರ್ಣ ಲಾಭ ಕಾಂಗ್ರೆಸ್ ಪಡೆಯಿತು. 1990ರಲ್ಲಿ ಕೇವಲ 9 ಸ್ಥಾನ ಗೆದ್ದಿದ್ದ ಕಾಂಗ್ರೆಸ್ 1993ರಲ್ಲಿ 52 ಸ್ಥಾನ ಗಳಿಸಿ ಅಧಿಕಾರಕ್ಕೇರಿತು. ಮುಖ್ಯಮಂತ್ರಿಯಾದ ವೀರಭದ್ರ ಸಿಂಗ್ ಸೇಬು ಬೆಳೆಗಾರರಿಗಾಗಿ ಮಂಡಿ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಜಾರಿಗೊಳಿಸಿದರು.

ಈಗ ಮತ್ತೆ ಒಂದು ವರ್ಷದಿಂದ ಸೇಬು ಬೆಳೆಗಾರರ ಹೋರಾಟ ಆರಂಭವಾಗಿದೆ. ಕಳೆದ ಒಂದು ತಿಂಗಳಿನಿಂದ ಸೇಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ. ಎಂಐಎಸ್ ಯೋಜನೆಯಡಿ ಸೇಬು ಖರೀದಿಸಿರುವ ಬಾಕಿ ಹಣ ಪಾವತಿಸಬೇಕು. ರಸಗೊಬ್ಬರ ಮೇಲಿನ ಸಬ್ಸಿಡಿ ಹಿಂತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಿಸಿ ಸಬ್ಸಿಡಿ ನೀಡಬೇಕು. ಜಿಎಸ್‌ಟಿ ಕಡಿತಗೊಳಿಸಬೇಕು ಮತ್ತು ಅದಾನಿ ಗ್ರೂಪ್ ನಿಗದಿಪಡಿಸಿದ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂಬುದು ರೈತರ ಒತ್ತಾಯವಾಗಿದೆ. ಈ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ; ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. 1990ರಲ್ಲಿ ನಡೆದ ರಾಜಕೀಯ ಮತ್ತೆ ಮರುಕಳಿಸುವುದೇ ಎಂದು ಕಾಂಗ್ರೆಸ್ ಆಶಿಸುತ್ತಿದೆ.

ಬಿಜೆಪಿಯ ಸಿಎಂ ಜೈ ರಾಂ ಠಾಕೂರ್ ಸೇಬು ಬೆಳೆಗಾರರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸೇಬಿಗೆ ಬೆಲೆ ಹೆಚ್ಚಿಸಿರುವುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಪೈಕಿ ಸುಮಾರು 20 ಕ್ಷೇತ್ರಗಳಲ್ಲಿ ಸೇಬು ಬೆಳೆಗಾರರು ನಿರ್ಣಾಯಕವಾಗಿದ್ದಾರೆ. ಅವರು ಸರ್ಕಾರದ ಭರವಸೆಗಳನ್ನು ಒಪ್ಪುತ್ತಾರಾ? ಅಥವಾ ಸರ್ಕಾರವನ್ನೇ ಬದಲಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದರೆ ಫಲಿತಾಂಶವೇನಾಗಬಹದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...