Homeಮುಖಪುಟಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

1990ರಲ್ಲಿ ಬಿಜೆಪಿ ಸರ್ಕಾರ ಸೇಬು ಬೆಳೆಗಾರರ ಮೇಲೆ ಗುಂಡು ಹಾರಿಸಿ ಮೂವರನ್ನು ಕೊಂದಿತ್ತು. ಆನಂತರದ ಚುನಾವಣೆಯಲ್ಲಿ ಅದು ಹೀನಾಯ ಸೋಲು ಕಂಡಿತ್ತು. ಈಗ ಮತ್ತೆ ಸೇಬು ಬೆಳೆಗಾರರು ಹೋರಾಟಕ್ಕಿಳಿದಿದ್ದಾರೆ...

- Advertisement -
- Advertisement -

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. 1985 ರಿಂದ 2017ರವರೆಗೆ ಹಿಮಾಚಲ ಪ್ರದೇಶದಲ್ಲಿ ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಧಿಕ್ಕಾರಕ್ಕೇರುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿವೆ. ಕಳೆದ 8 ಚುನಾವಣೆಗಳಲ್ಲಿ ನಾಲ್ಕು ಬಾರಿ ಕಾಂಗ್ರೆಸ್ ಗೆದ್ದರೆ, ನಾಲ್ಕು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಅಂದರೆ 1977ರಿಂದ ಈ ರಾಜ್ಯದಲ್ಲಿ ಯಾವುದೇ ಪಕ್ಷ ಸತತ ಎರಡು ಬಾರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಆ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಬೀಳಲಿದೆ, ಬಿಜೆಪಿ ಎರಡನೇ ಅವಧಿಗೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ 41 ಸ್ಥಾನಗಳಲ್ಲಿ, ಕಾಂಗ್ರೆಸ್ 25 ಸ್ಥಾನಗಳಲ್ಲಿ ಗೆದ್ದರೆ ಆಪ್ ಖಾತೆ ತೆರೆಯವುದು ಕಷ್ಟ ಎಂದಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿತ್ತು. 21 ಸ್ಥಾನ ಪಡೆದ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು. ಈ ಬಾರಿ ಸರಳ ಬಹುಮತಕ್ಕೆ ಬೇಕಾದ 35 ಸ್ಥಾನಗಳನ್ನು ಯಾವ ಪಕ್ಷ ತಲುಪಲಿದೆ ಎಂಬುದು ಸುಲಭಕ್ಕೆ ನಿರ್ಣಯಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹಲವು ಕಾಂಗ್ರೆಸ್ ಮುಖಂಡರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದರೆ, ಕಾಂಗ್ರೆಸ್ ಸೇಬು ಬೆಳೆಗಾರರನ್ನು ನಂಬಿ ಕುಳಿತಿದೆ.

ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ಹಿಮಾಚಲ ಪ್ರದೇಶದ ಮುಖ್ಯ ವಾಣಿಜ್ಯ ಬೆಳೆ ಸೇಬು. ಭಾರತದ ಒಟ್ಟು ಸೇಬು ಬೆಳೆಯ ಶೇ.26ರಷ್ಟು ಹಿಮಾಚಲ ಪ್ರದೇಶವೊಂದರಿಂದಲೇ ಬರುತ್ತದೆ. ರಾಜ್ಯ ಸರ್ಕಾರಕ್ಕೆ ವಾರ್ಷಿಕ 5000 ಕೋಟಿ ರೂಗಳಿಗಿಂತ ಅತಿ ಹೆಚ್ಚು ಆದಾಯ ತಂದುಕೊಡುವ ಸೇಬು ಬೆಳೆಗಾರರು ಸದ್ಯಕ್ಕೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಸೇಬಿಗೆ ಎಂಎಸ್‌ಪಿ ನಿಗದಿಗೊಳಿಸಿಲ್ಲ, ಖಾಸಗಿ ಮಧ್ಯವರ್ತಿಗಳನ್ನು ತಡೆಯುತ್ತಿಲ್ಲ ಎಂಬುದು ರೈತರ ಹಳೆಯ ಕೂಗು. ಅದರೊಟ್ಟಿಗೆ ರಸಗೊಬ್ಬರ ಮತ್ತು ಸೇಬು ಪ್ಯಾಕ್ ಮಾಡುವ ರಟ್ಟಿನ ಬೆಲೆ ಹೆಚ್ಚು ಮಾಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಪ್ಯಾಕ್ ಮಾಡಿದ ಬೆಳೆಗಳ ಮೇಲಿನ ಜಿಎಸ್‌ಟಿಯನ್ನು 12%ಇಂದ 18%ಗೆ ಹೆಚ್ಚಿಸಿರುವುದು ಅವರನ್ನು ಕೆರಳಿಸಿದೆ. ಇದೆಲ್ಲವೂ ಈ ಸರ್ಕಾರವನ್ನು ಆಹುತಿ ತೆಗೆದುಕೊಳ್ಳುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮರುಕಳಿಸುವುದೇ 1990ರ ಸೇಬು ಬೆಳೆಗಾರರ ಹೋರಾಟ?

1990ರಲ್ಲಿ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಶಾಂತಕುಮಾರ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಸೇಬು ಬೆಳೆಗಾರರು ಎಂಎಸ್‌ಪಿ ನಿಗದಿ ಮಾಡಬೇಕೆಂದು ಒತ್ತಾಯಿಸಿ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ಕೋಟ್‌ಘರ್‌ನಲ್ಲಿ ತಾರಕಕ್ಕೇರಿದ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಗೋಲಿಬಾರ್ ನಡೆಸಲು ಆದೇಶವಿತ್ತಿತ್ತು. ಇದರಿಂದಾಗಿ ಗೋವಿಂದ್ ಸಿಂಗ್, ತಾರ ಚಂದ್ ಮತ್ತು ಹಿರಾ ಸಿಂಗ್ ಎಂಬ ಸೇಬು ಬೆಳೆಗಾರರು ಗುಂಡಿಗೆ ಬಲಿಯಾದರೆ ನೂರಾರು ಜನರು ಗಾಯಗೊಂಡರು.

ಇದು 1993ರಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಗೆ ಕಾರಣವಾಯಿತು. 1990ರ ಚುನಾವಣೆಯಲ್ಲಿ 46 ಸ್ಥಾನ ಗೆದ್ದಿದ್ದ ಬಿಜೆಪಿ ಮೂರೇ ವರ್ಷದಲ್ಲಿ ಕೇವಲ 8 ಸ್ಥಾನಗಳಿಗೆ ಕುಸಿಯಿತು. ಸಿಎಂ ಆಗಿದ್ದ ಶಾಂತಕುಮಾರ್ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದು ಎರಡರಲ್ಲಿಯೂ ಸೋಲು ಕಂಡರು. ಸೇಬು ಬೆಳೆಗಾರರ ಸಂಪೂರ್ಣ ಲಾಭ ಕಾಂಗ್ರೆಸ್ ಪಡೆಯಿತು. 1990ರಲ್ಲಿ ಕೇವಲ 9 ಸ್ಥಾನ ಗೆದ್ದಿದ್ದ ಕಾಂಗ್ರೆಸ್ 1993ರಲ್ಲಿ 52 ಸ್ಥಾನ ಗಳಿಸಿ ಅಧಿಕಾರಕ್ಕೇರಿತು. ಮುಖ್ಯಮಂತ್ರಿಯಾದ ವೀರಭದ್ರ ಸಿಂಗ್ ಸೇಬು ಬೆಳೆಗಾರರಿಗಾಗಿ ಮಂಡಿ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಜಾರಿಗೊಳಿಸಿದರು.

ಈಗ ಮತ್ತೆ ಒಂದು ವರ್ಷದಿಂದ ಸೇಬು ಬೆಳೆಗಾರರ ಹೋರಾಟ ಆರಂಭವಾಗಿದೆ. ಕಳೆದ ಒಂದು ತಿಂಗಳಿನಿಂದ ಸೇಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ. ಎಂಐಎಸ್ ಯೋಜನೆಯಡಿ ಸೇಬು ಖರೀದಿಸಿರುವ ಬಾಕಿ ಹಣ ಪಾವತಿಸಬೇಕು. ರಸಗೊಬ್ಬರ ಮೇಲಿನ ಸಬ್ಸಿಡಿ ಹಿಂತೆಗೆದುಕೊಳ್ಳಲಾಗಿದ್ದು, ಅದನ್ನು ಬದಲಿಸಿ ಸಬ್ಸಿಡಿ ನೀಡಬೇಕು. ಜಿಎಸ್‌ಟಿ ಕಡಿತಗೊಳಿಸಬೇಕು ಮತ್ತು ಅದಾನಿ ಗ್ರೂಪ್ ನಿಗದಿಪಡಿಸಿದ ಷರತ್ತುಗಳನ್ನು ಸಡಿಲಗೊಳಿಸಬೇಕು ಎಂಬುದು ರೈತರ ಒತ್ತಾಯವಾಗಿದೆ. ಈ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ; ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಹಕ್ಕೊತ್ತಾಯಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. 1990ರಲ್ಲಿ ನಡೆದ ರಾಜಕೀಯ ಮತ್ತೆ ಮರುಕಳಿಸುವುದೇ ಎಂದು ಕಾಂಗ್ರೆಸ್ ಆಶಿಸುತ್ತಿದೆ.

ಬಿಜೆಪಿಯ ಸಿಎಂ ಜೈ ರಾಂ ಠಾಕೂರ್ ಸೇಬು ಬೆಳೆಗಾರರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸೇಬಿಗೆ ಬೆಲೆ ಹೆಚ್ಚಿಸಿರುವುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಪೈಕಿ ಸುಮಾರು 20 ಕ್ಷೇತ್ರಗಳಲ್ಲಿ ಸೇಬು ಬೆಳೆಗಾರರು ನಿರ್ಣಾಯಕವಾಗಿದ್ದಾರೆ. ಅವರು ಸರ್ಕಾರದ ಭರವಸೆಗಳನ್ನು ಒಪ್ಪುತ್ತಾರಾ? ಅಥವಾ ಸರ್ಕಾರವನ್ನೇ ಬದಲಿಸುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದರೆ ಫಲಿತಾಂಶವೇನಾಗಬಹದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...