Homeಮುಖಪುಟಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

- Advertisement -
- Advertisement -

ಹೊಸದಿಲ್ಲಿ:  ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ  ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ.

ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಕಾಶ್ಮೀರದ ಶಾಲು ಮಾರಾಟಗಾರರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಕಾಶ್ಮೀರಿ ಮಾರಾಟಗಾರರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಸುಖ್ವಿಂದರ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನವನ್ನು ಸೆಳೆಯಲು ಮುಫ್ತಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ. ಈ ವ್ಯಾಪಾರಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವಂತೆ ಸುಖ್ವಿಂದರ್ ಸಿಂಗ್ ಅವರನ್ನು ಕೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಶ್ಮೀರಿ ಶಾಲು ಮಾರಾಟಗಾರರು ಹಿಂದುತ್ವ ಗುಂಪುಗಳಿಂದ ಕಿರುಕುಳ, ಹಲ್ಲೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಈ ವ್ಯಾಪಾರಿಗಳು ಸರಿಯಾದ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ, ಅವರನ್ನು ವ್ಯಾಪಾರ ಮಾಡದಂತೆ ನಿರ್ಬಂಧಿಸಲಾಗಿದೆ ಮತ್ತು ಹೊರಹಾಕಲಾಗುತ್ತಿದೆ. ಇದು ಈ ರಾಜ್ಯದಲ್ಲಿ ನಡೆದ ಮೂರನೇ ಘಟನೆಯಾಗಿದ್ದು, ಉದ್ದೇಶಪೂರ್ವಕ ಕಿರುಕುಳವು ಆತಂಕಕಾರಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಾಶ್ಮೀರಿ ಮಾರಾಟಗಾರರೊಬ್ಬರು, ನಾವು 3-4 ದಿನಗಳ ಕಾಲ ಇಲ್ಲಿ ಒಂದೇ ಕಡೆ ಕುಳಿತಿದ್ದೇವೆ. ನಮಗೆ ಕಿರುಕುಳ ನೀಡಲಾಗುತ್ತಿದೆ. ನಾವು ನಮ್ಮ ಸರಕುಗಳನ್ನು ಮಾರಾಟ ಮಾಡಲು ಬಸ್ ನಿಲ್ದಾಣಕ್ಕೆ ಹೋದಾಗ, ಅವಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ನಮಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ. ನಾವು ಆ ಪ್ರದೇಶದಿಂದ ದೂರ ಹೋಗಲು ಮತ್ತು ಕಾಶ್ಮೀರಕ್ಕೆ ಹಿಂತಿರುಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಳಲು ತೊಡಿಕೊಂಡಿದ್ದಾನೆ.

ನಾವು ಹಿಮಾಚಲ ಪ್ರದೇಶದ  ಸ್ಥಳೀಯ ಜನರಿಗೆ ತಾವೂ ಸಹ ಭಾರತೀಯರು ಮತ್ತು ನಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡಬಹುದು ಎಂದು ಹೇಳಿದರೆ ಪ್ರಯೋಜನವಿಲ್ಲವಾಗಿದೆ.  ಸ್ಥಳೀಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮತ್ತು ಇತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ನಮಗೆ ವ್ಯಾಪಾರಕ್ಕೆ ಅನುಮತಿಸಲು ಸ್ಥಳೀಯರು ಸಿದ್ಧರಿಲ್ಲ ಎಂದು ಕಾಶ್ಮೀರಿ ವ್ಯಾಪಾರಿ ಹೇಳಿದ್ದಾನೆ.

ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಮಾಲಿಕರಿಗೆ ಅಲ್ಲಿಂದ ಹೊರಹಾಕುವಂತೆ ಈ ಹಿಂದುತ್ವ ಗುಂಪುಗಳು ಕರೆ ನೀಡುತ್ತಿದ್ದಾರೆ. ನಾವು ಕಳೆದ 25 ,30 ಮತ್ತು 40 ವರ್ಷಗಳಿಂದ ತಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಕಾಶ್ಮೀರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಅಂಗಡಿಯವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಕೆಲವರು ಮಾತ್ರ ನಮ್ಮನ್ನು ಹೊರಹಾಕಲು ಒತ್ತಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಕಾಶ್ಮೀರಿ ಮಾರಾಟಗಾರ ಹೇಳುತ್ತಾನೆ.

ಘಟನೆಯು ಹಿಮಾಚಲ ಪ್ರದೇಶದ ಬಿಲಾಸ್ಪುರದ ಘುಮರ್ವಿನ್ ಪಟ್ಟಣದಲ್ಲಿ ಸಂಭವಿಸಿದೆ. ಈ ನತದೃಷ್ಟ ಕಾಶ್ಮೀರಿ ಮಾರಾಟಗಾರರು ಘುಮರ್ವಿನ್‌ನ ಎಸ್‌ಡಿಎಂಗೆ ದೂರು ನೀಡಲು ಹೋಗಿದ್ದರು. ಎಸ್ ಡಿಎಂ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರನ್ನು ಕಳುಹಿಸಿದ್ದರು ಎಂದು ವರದಿಗಳು ಹೇಳಿವೆ.

ಸ್ಥಳೀಯ ವ್ಯಾಪಾರಿಗಳು ಮತ್ತು ಕಾಶ್ಮೀರಿ ಮಾರಾಟಗಾರರ ನಡುವಿನ ಈ ವಿವಾದವಾಗಿದೆ ಮತ್ತು ಈ ಬಗ್ಗೆ ದೂರು ಸ್ವೀಕರಿಸಲಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ವರದಿಯಾಗಿದ್ದವು. ಕೆಲ ವ್ಯಾಪಾರಿಗಳು ಮಾರಾಟಗಾರರಿಂದ ನಷ್ಟ ಅನುಭವಿಸುತ್ತಿದ್ದಾರೆ. ಇದುವರೆಗೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಲಾಸ್ಪುರ್ ಎಸ್ಪಿ ಸಂದೀಪ್ ಧವಾಲ್ ತಿಳಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಜಗಳಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಎಸ್ಪಿಯವರು ಡಿಸಿ ಕಚೇರಿಗೆ ಸೂಚಿಸಿದ್ದಾರೆ. ಮುಂದಿನ 2 ಅಥವಾ 3 ದಿನಗಳಲ್ಲಿ ಎರಡೂ ಗುಂಪುಗಳ ನಡುವೆ ಸಭೆ ನಡೆಯುವ ನಿರೀಕ್ಷೆಯಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕಾಶ್ಮೀರಿಗಳ ವಿರುದ್ಧ ಇಂತಹ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರಿಗೆ ಕಾಶ್ಮೀರ ಬೇಕು, ಆದರೆ ಕಾಶ್ಮೀರಿಗಳು ಬೇಕಾಗಿಲ್ಲ. ಭಾರತದ ಕಲ್ಪನೆಗೆ ಇಂತಹ ಘಟನೆಗಳಿಂದ ಕಾಶ್ಮೀರದಲ್ಲಿ ಹೆಚ್ಚು ಹಾನಿಯಾಗುವುದಿಲ್ಲ. ಕಾಶ್ಮೀರಿಗಳಿಗೆ ಪ್ರತಿದಿನವೂ ಕಿರುಕುಳ ನೀಡುವುದು ಮತ್ತು ಬೆದರಿಕೆ ಹಾಕುವುದು ಸರಿಯಲ್ಲ. ಎರಡು ರಾಜ್ಯಗಳ ನಡುವೆ ನಿಜವಾದ ಏಕೀಕರಣವು ಗೌರವ, ಘನತೆ ಮತ್ತು ಸಹಾನುಭೂತಿಯಿಂದ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಳೀಯ ಆರ್ಥಿಕತೆಗೆ ಕಾಶ್ಮೀರವು ಅಪಾರ ಕೊಡುಗೆ ನೀಡಿದೆ ಮತ್ತು ಅಲ್ಲಿನ ಸಾಮಾಜಿಕ ರಚನೆಯ ಭಾಗವಾಗಿರುವ ಈ ಶಾಲು ಮಾರಾಟಗಾರರು ಈಗ ಬೆದರಿಕೆ ಮತ್ತು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಕಾಶ್ಮೀರಿ ಶಾಲು ಮಾರಾಟಗಾರರನ್ನು ಪ್ರತಿದಿನವೂ ಗುರಿಯಾಗಿಸುವ ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ಇದು ಆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆಯಾಗಿದೆ. ಕಾಶ್ಮೀರಿಗಳ ವಿರುದ್ಧದ ಉದ್ದೇಶಿತ ಹಿಂಸಾಚಾರ ಕೊನೆಗೊಳ್ಳುವ ಲಕ್ಷಣಗಳಿಲ್ಲ ಕಾಣುತ್ತಿಲ್ಲ ಎಂದು ಖುಹಮಿ ಗಮನಸೆಳೆದಿದ್ದಾರೆ.

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...