Homeಮುಖಪುಟಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

- Advertisement -
- Advertisement -

ಹೊಸದಿಲ್ಲಿ:  ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ  ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ.

ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಕಾಶ್ಮೀರದ ಶಾಲು ಮಾರಾಟಗಾರರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಕಾಶ್ಮೀರಿ ಮಾರಾಟಗಾರರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಸುಖ್ವಿಂದರ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನವನ್ನು ಸೆಳೆಯಲು ಮುಫ್ತಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ. ಈ ವ್ಯಾಪಾರಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವಂತೆ ಸುಖ್ವಿಂದರ್ ಸಿಂಗ್ ಅವರನ್ನು ಕೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಶ್ಮೀರಿ ಶಾಲು ಮಾರಾಟಗಾರರು ಹಿಂದುತ್ವ ಗುಂಪುಗಳಿಂದ ಕಿರುಕುಳ, ಹಲ್ಲೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಈ ವ್ಯಾಪಾರಿಗಳು ಸರಿಯಾದ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ, ಅವರನ್ನು ವ್ಯಾಪಾರ ಮಾಡದಂತೆ ನಿರ್ಬಂಧಿಸಲಾಗಿದೆ ಮತ್ತು ಹೊರಹಾಕಲಾಗುತ್ತಿದೆ. ಇದು ಈ ರಾಜ್ಯದಲ್ಲಿ ನಡೆದ ಮೂರನೇ ಘಟನೆಯಾಗಿದ್ದು, ಉದ್ದೇಶಪೂರ್ವಕ ಕಿರುಕುಳವು ಆತಂಕಕಾರಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಾಶ್ಮೀರಿ ಮಾರಾಟಗಾರರೊಬ್ಬರು, ನಾವು 3-4 ದಿನಗಳ ಕಾಲ ಇಲ್ಲಿ ಒಂದೇ ಕಡೆ ಕುಳಿತಿದ್ದೇವೆ. ನಮಗೆ ಕಿರುಕುಳ ನೀಡಲಾಗುತ್ತಿದೆ. ನಾವು ನಮ್ಮ ಸರಕುಗಳನ್ನು ಮಾರಾಟ ಮಾಡಲು ಬಸ್ ನಿಲ್ದಾಣಕ್ಕೆ ಹೋದಾಗ, ಅವಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ನಮಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ. ನಾವು ಆ ಪ್ರದೇಶದಿಂದ ದೂರ ಹೋಗಲು ಮತ್ತು ಕಾಶ್ಮೀರಕ್ಕೆ ಹಿಂತಿರುಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಳಲು ತೊಡಿಕೊಂಡಿದ್ದಾನೆ.

ನಾವು ಹಿಮಾಚಲ ಪ್ರದೇಶದ  ಸ್ಥಳೀಯ ಜನರಿಗೆ ತಾವೂ ಸಹ ಭಾರತೀಯರು ಮತ್ತು ನಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡಬಹುದು ಎಂದು ಹೇಳಿದರೆ ಪ್ರಯೋಜನವಿಲ್ಲವಾಗಿದೆ.  ಸ್ಥಳೀಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮತ್ತು ಇತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ನಮಗೆ ವ್ಯಾಪಾರಕ್ಕೆ ಅನುಮತಿಸಲು ಸ್ಥಳೀಯರು ಸಿದ್ಧರಿಲ್ಲ ಎಂದು ಕಾಶ್ಮೀರಿ ವ್ಯಾಪಾರಿ ಹೇಳಿದ್ದಾನೆ.

ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಮಾಲಿಕರಿಗೆ ಅಲ್ಲಿಂದ ಹೊರಹಾಕುವಂತೆ ಈ ಹಿಂದುತ್ವ ಗುಂಪುಗಳು ಕರೆ ನೀಡುತ್ತಿದ್ದಾರೆ. ನಾವು ಕಳೆದ 25 ,30 ಮತ್ತು 40 ವರ್ಷಗಳಿಂದ ತಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಕಾಶ್ಮೀರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಅಂಗಡಿಯವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಕೆಲವರು ಮಾತ್ರ ನಮ್ಮನ್ನು ಹೊರಹಾಕಲು ಒತ್ತಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಕಾಶ್ಮೀರಿ ಮಾರಾಟಗಾರ ಹೇಳುತ್ತಾನೆ.

ಘಟನೆಯು ಹಿಮಾಚಲ ಪ್ರದೇಶದ ಬಿಲಾಸ್ಪುರದ ಘುಮರ್ವಿನ್ ಪಟ್ಟಣದಲ್ಲಿ ಸಂಭವಿಸಿದೆ. ಈ ನತದೃಷ್ಟ ಕಾಶ್ಮೀರಿ ಮಾರಾಟಗಾರರು ಘುಮರ್ವಿನ್‌ನ ಎಸ್‌ಡಿಎಂಗೆ ದೂರು ನೀಡಲು ಹೋಗಿದ್ದರು. ಎಸ್ ಡಿಎಂ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರನ್ನು ಕಳುಹಿಸಿದ್ದರು ಎಂದು ವರದಿಗಳು ಹೇಳಿವೆ.

ಸ್ಥಳೀಯ ವ್ಯಾಪಾರಿಗಳು ಮತ್ತು ಕಾಶ್ಮೀರಿ ಮಾರಾಟಗಾರರ ನಡುವಿನ ಈ ವಿವಾದವಾಗಿದೆ ಮತ್ತು ಈ ಬಗ್ಗೆ ದೂರು ಸ್ವೀಕರಿಸಲಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ವರದಿಯಾಗಿದ್ದವು. ಕೆಲ ವ್ಯಾಪಾರಿಗಳು ಮಾರಾಟಗಾರರಿಂದ ನಷ್ಟ ಅನುಭವಿಸುತ್ತಿದ್ದಾರೆ. ಇದುವರೆಗೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಲಾಸ್ಪುರ್ ಎಸ್ಪಿ ಸಂದೀಪ್ ಧವಾಲ್ ತಿಳಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಜಗಳಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಎಸ್ಪಿಯವರು ಡಿಸಿ ಕಚೇರಿಗೆ ಸೂಚಿಸಿದ್ದಾರೆ. ಮುಂದಿನ 2 ಅಥವಾ 3 ದಿನಗಳಲ್ಲಿ ಎರಡೂ ಗುಂಪುಗಳ ನಡುವೆ ಸಭೆ ನಡೆಯುವ ನಿರೀಕ್ಷೆಯಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕಾಶ್ಮೀರಿಗಳ ವಿರುದ್ಧ ಇಂತಹ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರಿಗೆ ಕಾಶ್ಮೀರ ಬೇಕು, ಆದರೆ ಕಾಶ್ಮೀರಿಗಳು ಬೇಕಾಗಿಲ್ಲ. ಭಾರತದ ಕಲ್ಪನೆಗೆ ಇಂತಹ ಘಟನೆಗಳಿಂದ ಕಾಶ್ಮೀರದಲ್ಲಿ ಹೆಚ್ಚು ಹಾನಿಯಾಗುವುದಿಲ್ಲ. ಕಾಶ್ಮೀರಿಗಳಿಗೆ ಪ್ರತಿದಿನವೂ ಕಿರುಕುಳ ನೀಡುವುದು ಮತ್ತು ಬೆದರಿಕೆ ಹಾಕುವುದು ಸರಿಯಲ್ಲ. ಎರಡು ರಾಜ್ಯಗಳ ನಡುವೆ ನಿಜವಾದ ಏಕೀಕರಣವು ಗೌರವ, ಘನತೆ ಮತ್ತು ಸಹಾನುಭೂತಿಯಿಂದ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಳೀಯ ಆರ್ಥಿಕತೆಗೆ ಕಾಶ್ಮೀರವು ಅಪಾರ ಕೊಡುಗೆ ನೀಡಿದೆ ಮತ್ತು ಅಲ್ಲಿನ ಸಾಮಾಜಿಕ ರಚನೆಯ ಭಾಗವಾಗಿರುವ ಈ ಶಾಲು ಮಾರಾಟಗಾರರು ಈಗ ಬೆದರಿಕೆ ಮತ್ತು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಕಾಶ್ಮೀರಿ ಶಾಲು ಮಾರಾಟಗಾರರನ್ನು ಪ್ರತಿದಿನವೂ ಗುರಿಯಾಗಿಸುವ ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ಇದು ಆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆಯಾಗಿದೆ. ಕಾಶ್ಮೀರಿಗಳ ವಿರುದ್ಧದ ಉದ್ದೇಶಿತ ಹಿಂಸಾಚಾರ ಕೊನೆಗೊಳ್ಳುವ ಲಕ್ಷಣಗಳಿಲ್ಲ ಕಾಣುತ್ತಿಲ್ಲ ಎಂದು ಖುಹಮಿ ಗಮನಸೆಳೆದಿದ್ದಾರೆ.

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...