Homeಮುಖಪುಟಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

- Advertisement -
- Advertisement -

ಹೊಸದಿಲ್ಲಿ:  ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ  ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ.

ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಕಾಶ್ಮೀರದ ಶಾಲು ಮಾರಾಟಗಾರರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಕಾಶ್ಮೀರಿ ಮಾರಾಟಗಾರರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಸುಖ್ವಿಂದರ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನವನ್ನು ಸೆಳೆಯಲು ಮುಫ್ತಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ. ಈ ವ್ಯಾಪಾರಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವಂತೆ ಸುಖ್ವಿಂದರ್ ಸಿಂಗ್ ಅವರನ್ನು ಕೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಶ್ಮೀರಿ ಶಾಲು ಮಾರಾಟಗಾರರು ಹಿಂದುತ್ವ ಗುಂಪುಗಳಿಂದ ಕಿರುಕುಳ, ಹಲ್ಲೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಈ ವ್ಯಾಪಾರಿಗಳು ಸರಿಯಾದ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ, ಅವರನ್ನು ವ್ಯಾಪಾರ ಮಾಡದಂತೆ ನಿರ್ಬಂಧಿಸಲಾಗಿದೆ ಮತ್ತು ಹೊರಹಾಕಲಾಗುತ್ತಿದೆ. ಇದು ಈ ರಾಜ್ಯದಲ್ಲಿ ನಡೆದ ಮೂರನೇ ಘಟನೆಯಾಗಿದ್ದು, ಉದ್ದೇಶಪೂರ್ವಕ ಕಿರುಕುಳವು ಆತಂಕಕಾರಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಾಶ್ಮೀರಿ ಮಾರಾಟಗಾರರೊಬ್ಬರು, ನಾವು 3-4 ದಿನಗಳ ಕಾಲ ಇಲ್ಲಿ ಒಂದೇ ಕಡೆ ಕುಳಿತಿದ್ದೇವೆ. ನಮಗೆ ಕಿರುಕುಳ ನೀಡಲಾಗುತ್ತಿದೆ. ನಾವು ನಮ್ಮ ಸರಕುಗಳನ್ನು ಮಾರಾಟ ಮಾಡಲು ಬಸ್ ನಿಲ್ದಾಣಕ್ಕೆ ಹೋದಾಗ, ಅವಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ನಮಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ. ನಾವು ಆ ಪ್ರದೇಶದಿಂದ ದೂರ ಹೋಗಲು ಮತ್ತು ಕಾಶ್ಮೀರಕ್ಕೆ ಹಿಂತಿರುಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಳಲು ತೊಡಿಕೊಂಡಿದ್ದಾನೆ.

ನಾವು ಹಿಮಾಚಲ ಪ್ರದೇಶದ  ಸ್ಥಳೀಯ ಜನರಿಗೆ ತಾವೂ ಸಹ ಭಾರತೀಯರು ಮತ್ತು ನಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡಬಹುದು ಎಂದು ಹೇಳಿದರೆ ಪ್ರಯೋಜನವಿಲ್ಲವಾಗಿದೆ.  ಸ್ಥಳೀಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮತ್ತು ಇತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ನಮಗೆ ವ್ಯಾಪಾರಕ್ಕೆ ಅನುಮತಿಸಲು ಸ್ಥಳೀಯರು ಸಿದ್ಧರಿಲ್ಲ ಎಂದು ಕಾಶ್ಮೀರಿ ವ್ಯಾಪಾರಿ ಹೇಳಿದ್ದಾನೆ.

ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಮಾಲಿಕರಿಗೆ ಅಲ್ಲಿಂದ ಹೊರಹಾಕುವಂತೆ ಈ ಹಿಂದುತ್ವ ಗುಂಪುಗಳು ಕರೆ ನೀಡುತ್ತಿದ್ದಾರೆ. ನಾವು ಕಳೆದ 25 ,30 ಮತ್ತು 40 ವರ್ಷಗಳಿಂದ ತಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಕಾಶ್ಮೀರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಅಂಗಡಿಯವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಕೆಲವರು ಮಾತ್ರ ನಮ್ಮನ್ನು ಹೊರಹಾಕಲು ಒತ್ತಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಕಾಶ್ಮೀರಿ ಮಾರಾಟಗಾರ ಹೇಳುತ್ತಾನೆ.

ಘಟನೆಯು ಹಿಮಾಚಲ ಪ್ರದೇಶದ ಬಿಲಾಸ್ಪುರದ ಘುಮರ್ವಿನ್ ಪಟ್ಟಣದಲ್ಲಿ ಸಂಭವಿಸಿದೆ. ಈ ನತದೃಷ್ಟ ಕಾಶ್ಮೀರಿ ಮಾರಾಟಗಾರರು ಘುಮರ್ವಿನ್‌ನ ಎಸ್‌ಡಿಎಂಗೆ ದೂರು ನೀಡಲು ಹೋಗಿದ್ದರು. ಎಸ್ ಡಿಎಂ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರನ್ನು ಕಳುಹಿಸಿದ್ದರು ಎಂದು ವರದಿಗಳು ಹೇಳಿವೆ.

ಸ್ಥಳೀಯ ವ್ಯಾಪಾರಿಗಳು ಮತ್ತು ಕಾಶ್ಮೀರಿ ಮಾರಾಟಗಾರರ ನಡುವಿನ ಈ ವಿವಾದವಾಗಿದೆ ಮತ್ತು ಈ ಬಗ್ಗೆ ದೂರು ಸ್ವೀಕರಿಸಲಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ವರದಿಯಾಗಿದ್ದವು. ಕೆಲ ವ್ಯಾಪಾರಿಗಳು ಮಾರಾಟಗಾರರಿಂದ ನಷ್ಟ ಅನುಭವಿಸುತ್ತಿದ್ದಾರೆ. ಇದುವರೆಗೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಲಾಸ್ಪುರ್ ಎಸ್ಪಿ ಸಂದೀಪ್ ಧವಾಲ್ ತಿಳಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಜಗಳಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಎಸ್ಪಿಯವರು ಡಿಸಿ ಕಚೇರಿಗೆ ಸೂಚಿಸಿದ್ದಾರೆ. ಮುಂದಿನ 2 ಅಥವಾ 3 ದಿನಗಳಲ್ಲಿ ಎರಡೂ ಗುಂಪುಗಳ ನಡುವೆ ಸಭೆ ನಡೆಯುವ ನಿರೀಕ್ಷೆಯಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕಾಶ್ಮೀರಿಗಳ ವಿರುದ್ಧ ಇಂತಹ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರಿಗೆ ಕಾಶ್ಮೀರ ಬೇಕು, ಆದರೆ ಕಾಶ್ಮೀರಿಗಳು ಬೇಕಾಗಿಲ್ಲ. ಭಾರತದ ಕಲ್ಪನೆಗೆ ಇಂತಹ ಘಟನೆಗಳಿಂದ ಕಾಶ್ಮೀರದಲ್ಲಿ ಹೆಚ್ಚು ಹಾನಿಯಾಗುವುದಿಲ್ಲ. ಕಾಶ್ಮೀರಿಗಳಿಗೆ ಪ್ರತಿದಿನವೂ ಕಿರುಕುಳ ನೀಡುವುದು ಮತ್ತು ಬೆದರಿಕೆ ಹಾಕುವುದು ಸರಿಯಲ್ಲ. ಎರಡು ರಾಜ್ಯಗಳ ನಡುವೆ ನಿಜವಾದ ಏಕೀಕರಣವು ಗೌರವ, ಘನತೆ ಮತ್ತು ಸಹಾನುಭೂತಿಯಿಂದ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಳೀಯ ಆರ್ಥಿಕತೆಗೆ ಕಾಶ್ಮೀರವು ಅಪಾರ ಕೊಡುಗೆ ನೀಡಿದೆ ಮತ್ತು ಅಲ್ಲಿನ ಸಾಮಾಜಿಕ ರಚನೆಯ ಭಾಗವಾಗಿರುವ ಈ ಶಾಲು ಮಾರಾಟಗಾರರು ಈಗ ಬೆದರಿಕೆ ಮತ್ತು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಕಾಶ್ಮೀರಿ ಶಾಲು ಮಾರಾಟಗಾರರನ್ನು ಪ್ರತಿದಿನವೂ ಗುರಿಯಾಗಿಸುವ ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ಇದು ಆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆಯಾಗಿದೆ. ಕಾಶ್ಮೀರಿಗಳ ವಿರುದ್ಧದ ಉದ್ದೇಶಿತ ಹಿಂಸಾಚಾರ ಕೊನೆಗೊಳ್ಳುವ ಲಕ್ಷಣಗಳಿಲ್ಲ ಕಾಣುತ್ತಿಲ್ಲ ಎಂದು ಖುಹಮಿ ಗಮನಸೆಳೆದಿದ್ದಾರೆ.

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...