Homeಮುಖಪುಟಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

- Advertisement -
- Advertisement -

ಹೊಸದಿಲ್ಲಿ:  ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ  ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ.

ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಕಾಶ್ಮೀರದ ಶಾಲು ಮಾರಾಟಗಾರರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಕಾಶ್ಮೀರಿ ಮಾರಾಟಗಾರರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಸುಖ್ವಿಂದರ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನವನ್ನು ಸೆಳೆಯಲು ಮುಫ್ತಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ. ಈ ವ್ಯಾಪಾರಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವಂತೆ ಸುಖ್ವಿಂದರ್ ಸಿಂಗ್ ಅವರನ್ನು ಕೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಶ್ಮೀರಿ ಶಾಲು ಮಾರಾಟಗಾರರು ಹಿಂದುತ್ವ ಗುಂಪುಗಳಿಂದ ಕಿರುಕುಳ, ಹಲ್ಲೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಈ ವ್ಯಾಪಾರಿಗಳು ಸರಿಯಾದ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ, ಅವರನ್ನು ವ್ಯಾಪಾರ ಮಾಡದಂತೆ ನಿರ್ಬಂಧಿಸಲಾಗಿದೆ ಮತ್ತು ಹೊರಹಾಕಲಾಗುತ್ತಿದೆ. ಇದು ಈ ರಾಜ್ಯದಲ್ಲಿ ನಡೆದ ಮೂರನೇ ಘಟನೆಯಾಗಿದ್ದು, ಉದ್ದೇಶಪೂರ್ವಕ ಕಿರುಕುಳವು ಆತಂಕಕಾರಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಾಶ್ಮೀರಿ ಮಾರಾಟಗಾರರೊಬ್ಬರು, ನಾವು 3-4 ದಿನಗಳ ಕಾಲ ಇಲ್ಲಿ ಒಂದೇ ಕಡೆ ಕುಳಿತಿದ್ದೇವೆ. ನಮಗೆ ಕಿರುಕುಳ ನೀಡಲಾಗುತ್ತಿದೆ. ನಾವು ನಮ್ಮ ಸರಕುಗಳನ್ನು ಮಾರಾಟ ಮಾಡಲು ಬಸ್ ನಿಲ್ದಾಣಕ್ಕೆ ಹೋದಾಗ, ಅವಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ನಮಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ. ನಾವು ಆ ಪ್ರದೇಶದಿಂದ ದೂರ ಹೋಗಲು ಮತ್ತು ಕಾಶ್ಮೀರಕ್ಕೆ ಹಿಂತಿರುಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಳಲು ತೊಡಿಕೊಂಡಿದ್ದಾನೆ.

ನಾವು ಹಿಮಾಚಲ ಪ್ರದೇಶದ  ಸ್ಥಳೀಯ ಜನರಿಗೆ ತಾವೂ ಸಹ ಭಾರತೀಯರು ಮತ್ತು ನಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡಬಹುದು ಎಂದು ಹೇಳಿದರೆ ಪ್ರಯೋಜನವಿಲ್ಲವಾಗಿದೆ.  ಸ್ಥಳೀಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮತ್ತು ಇತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ನಮಗೆ ವ್ಯಾಪಾರಕ್ಕೆ ಅನುಮತಿಸಲು ಸ್ಥಳೀಯರು ಸಿದ್ಧರಿಲ್ಲ ಎಂದು ಕಾಶ್ಮೀರಿ ವ್ಯಾಪಾರಿ ಹೇಳಿದ್ದಾನೆ.

ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಮಾಲಿಕರಿಗೆ ಅಲ್ಲಿಂದ ಹೊರಹಾಕುವಂತೆ ಈ ಹಿಂದುತ್ವ ಗುಂಪುಗಳು ಕರೆ ನೀಡುತ್ತಿದ್ದಾರೆ. ನಾವು ಕಳೆದ 25 ,30 ಮತ್ತು 40 ವರ್ಷಗಳಿಂದ ತಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಕಾಶ್ಮೀರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಅಂಗಡಿಯವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಕೆಲವರು ಮಾತ್ರ ನಮ್ಮನ್ನು ಹೊರಹಾಕಲು ಒತ್ತಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಕಾಶ್ಮೀರಿ ಮಾರಾಟಗಾರ ಹೇಳುತ್ತಾನೆ.

ಘಟನೆಯು ಹಿಮಾಚಲ ಪ್ರದೇಶದ ಬಿಲಾಸ್ಪುರದ ಘುಮರ್ವಿನ್ ಪಟ್ಟಣದಲ್ಲಿ ಸಂಭವಿಸಿದೆ. ಈ ನತದೃಷ್ಟ ಕಾಶ್ಮೀರಿ ಮಾರಾಟಗಾರರು ಘುಮರ್ವಿನ್‌ನ ಎಸ್‌ಡಿಎಂಗೆ ದೂರು ನೀಡಲು ಹೋಗಿದ್ದರು. ಎಸ್ ಡಿಎಂ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರನ್ನು ಕಳುಹಿಸಿದ್ದರು ಎಂದು ವರದಿಗಳು ಹೇಳಿವೆ.

ಸ್ಥಳೀಯ ವ್ಯಾಪಾರಿಗಳು ಮತ್ತು ಕಾಶ್ಮೀರಿ ಮಾರಾಟಗಾರರ ನಡುವಿನ ಈ ವಿವಾದವಾಗಿದೆ ಮತ್ತು ಈ ಬಗ್ಗೆ ದೂರು ಸ್ವೀಕರಿಸಲಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ವರದಿಯಾಗಿದ್ದವು. ಕೆಲ ವ್ಯಾಪಾರಿಗಳು ಮಾರಾಟಗಾರರಿಂದ ನಷ್ಟ ಅನುಭವಿಸುತ್ತಿದ್ದಾರೆ. ಇದುವರೆಗೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಲಾಸ್ಪುರ್ ಎಸ್ಪಿ ಸಂದೀಪ್ ಧವಾಲ್ ತಿಳಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಜಗಳಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಎಸ್ಪಿಯವರು ಡಿಸಿ ಕಚೇರಿಗೆ ಸೂಚಿಸಿದ್ದಾರೆ. ಮುಂದಿನ 2 ಅಥವಾ 3 ದಿನಗಳಲ್ಲಿ ಎರಡೂ ಗುಂಪುಗಳ ನಡುವೆ ಸಭೆ ನಡೆಯುವ ನಿರೀಕ್ಷೆಯಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕಾಶ್ಮೀರಿಗಳ ವಿರುದ್ಧ ಇಂತಹ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರಿಗೆ ಕಾಶ್ಮೀರ ಬೇಕು, ಆದರೆ ಕಾಶ್ಮೀರಿಗಳು ಬೇಕಾಗಿಲ್ಲ. ಭಾರತದ ಕಲ್ಪನೆಗೆ ಇಂತಹ ಘಟನೆಗಳಿಂದ ಕಾಶ್ಮೀರದಲ್ಲಿ ಹೆಚ್ಚು ಹಾನಿಯಾಗುವುದಿಲ್ಲ. ಕಾಶ್ಮೀರಿಗಳಿಗೆ ಪ್ರತಿದಿನವೂ ಕಿರುಕುಳ ನೀಡುವುದು ಮತ್ತು ಬೆದರಿಕೆ ಹಾಕುವುದು ಸರಿಯಲ್ಲ. ಎರಡು ರಾಜ್ಯಗಳ ನಡುವೆ ನಿಜವಾದ ಏಕೀಕರಣವು ಗೌರವ, ಘನತೆ ಮತ್ತು ಸಹಾನುಭೂತಿಯಿಂದ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಳೀಯ ಆರ್ಥಿಕತೆಗೆ ಕಾಶ್ಮೀರವು ಅಪಾರ ಕೊಡುಗೆ ನೀಡಿದೆ ಮತ್ತು ಅಲ್ಲಿನ ಸಾಮಾಜಿಕ ರಚನೆಯ ಭಾಗವಾಗಿರುವ ಈ ಶಾಲು ಮಾರಾಟಗಾರರು ಈಗ ಬೆದರಿಕೆ ಮತ್ತು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಕಾಶ್ಮೀರಿ ಶಾಲು ಮಾರಾಟಗಾರರನ್ನು ಪ್ರತಿದಿನವೂ ಗುರಿಯಾಗಿಸುವ ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ಇದು ಆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆಯಾಗಿದೆ. ಕಾಶ್ಮೀರಿಗಳ ವಿರುದ್ಧದ ಉದ್ದೇಶಿತ ಹಿಂಸಾಚಾರ ಕೊನೆಗೊಳ್ಳುವ ಲಕ್ಷಣಗಳಿಲ್ಲ ಕಾಣುತ್ತಿಲ್ಲ ಎಂದು ಖುಹಮಿ ಗಮನಸೆಳೆದಿದ್ದಾರೆ.

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...