Homeಮುಖಪುಟಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ...

ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

- Advertisement -
- Advertisement -

ಗುಜರಾತ್ ಮೂಲದ ಉದ್ಯಮಿ ಅದಾನಿ ಅವರ ಸಂಸ್ಥೆಯ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಮಾಡಿರುವ ಆರೋಪವೂ ‘ಭಾರತದ ಮೇಲಿನ ವ್ಯವಸ್ಥಿತ ದಾಳಿ’ ಎಂದು ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. ಹಿಂಡೆನ್‌ಬರ್ಗ್‌ ಮಾಡಿರುವ ಆರೋಪವೂ, ‘ಸುಳ್ಳೆ ಹೊರತು ಬೇರೇನೂ ಅಲ್ಲ’ ಎಂದು ಅದಾನಿ ಗ್ರೂಪ್‌ ಬಿಡುಗಡೆ ಮಾಡಿರುವ 413 ಪುಟಗಳ ಪ್ರತಿಕ್ರಿಯೆಯಲ್ಲಿ ಹೇಳಿದೆ.

“ಇದು ಕೇವಲ ಯಾವುದೊ ಒಂದು ನಿರ್ದಿಷ್ಟ ಕಂಪನಿಯ ಮೇಲಿನ ದಾಳಿಯಲ್ಲ. ಬದಲಾಗಿ ಭಾರತೀಯ ಸಂಸ್ಥೆಗಳ ಸ್ವಾತಂತ್ರ್ಯ, ಸಮಗ್ರತೆ ಮತ್ತು ಗುಣಮಟ್ಟ ಹಾಗೂ ಭಾರತದ ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಮೇಲಿನ ವ್ಯವಸ್ಥಿತ ದಾಳಿಯಾಗಿದೆ” ಎಂದು ಅದಾನಿ ಗ್ರೂಪ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂಡೆನ್‌ಬರ್ಗ್‌ ರಿಸರ್ಚ್‌ ಜನವರಿ 24 ರಂದು ಬಿಡುಗಡೆ ಮಾಡಿರುವ ವರದಿಯಲ್ಲಿನ ಆರೋಪಗಳು ‘ಸುಳ್ಳೇ ಹೊರತು ಬೇರೇನೂ ಇಲ್ಲ’ ಎಂದು ಹೇಳಿರುವ ಅದಾನಿ ಗ್ರೂಪ್‌, “ಡಾಕ್ಯುಮೆಂಟ್‌ ಅನ್ನು ಆಯ್ದ ತಪ್ಪು ಮಾಹಿತಿಯ ಮೂಲಕ ದುರುದ್ದೇಶಪೂರಿತವಾಗಿ ಸಂಯೋಜನೆ ಮಾಡಲಾಲಗಿದೆ” ಎಂದು ಹೇಳಿದೆ.

ಅಷ್ಟೆ ಅಲ್ಲದೆ ಅದಾನಿ ಗ್ರೂಪ್‌‌ ಹಿಂಡೆನ್‌ಬರ್ಗ್‌ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ನೈತಿಕತೆಯನ್ನು ಕೂಡಾ ಪ್ರಶ್ನಿಸಿದೆ. “ಹಿಂಡೆನ್‌ಬರ್ಗ್ ಈ ವರದಿಯನ್ನು ಯಾವುದೇ ಪರಹಿತಚಿಂತನೆಯ ಕಾರಣಗಳಿಗಾಗಿ ಪ್ರಕಟಿಸಿಲ್ಲ. ಹೊರತಾಗಿ ಸಂಪೂರ್ಣವಾಗಿ ಸ್ವಾರ್ಥ ಉದ್ದೇಶಗಳಿಂದ ಪ್ರಕಟಿಸಿದೆ. ಇದು ಅನ್ವಯವಾಗುವ ಸೆಕ್ಯುರಿಟೀಸ್ ಮತ್ತು ವಿದೇಶಿ ವಿನಿಮಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅದಾನಿ ಹೇಳಿದೆ.

“ವರದಿಯು ‘ಸ್ವತಂತ್ರ’ ಅಥವಾ ‘ವಸ್ತುನಿಷ್ಠ’ ಅಥವಾ ‘ಉತ್ತಮ ಸಂಶೋಧನೆ’ ಅಲ್ಲ” ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅದಾನಿ ಪ್ರತಿಕ್ರಿಯೆಗಳಿಗೆ ಮರು ಪ್ರತಿಕ್ರಿಯಿಸಿರುವ ಹಿಂಡನ್‌‌ಬರ್ಗ್‌,“ವಂಚನೆಯನ್ನು ರಾಷ್ಟ್ರೀಯತೆಯ ಅಡಿಯಲ್ಲಿ ಮರೆಯಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಅದಾನಿ ಪ್ರತಿಕ್ರಿಯೆಗೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ಅದಾನಿ ಎಂದರೆ ಭಾರತವಲ್ಲ ಎಂದು ಹೇಳಿದ್ದಾರೆ. “ಮುಂಚೆ ಮೋದಿ ಎಂದರೆ ಭಾರತ ಎಂದು ಹೇಳುತ್ತಿದ್ದರು. ಮೋದಿ ಸರ್ಕಾರವನ್ನು ಟೀಕಿಸಿದರೆ, ದೇಶ ವಿರೋಧಿ ಎಂದು ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಅಮೆರಿಕದ ಸಂಸ್ಥೆಯೊಂದು ಅದಾನಿ ಎಂಬ ಉದ್ಯಮಿಯ ವಂಚನೆಯನ್ನು ಬಯಲಿಗೆಳೆದರೆ, ಅದಕ್ಕೆ ಆತನೆ ಉತ್ತರ ಕೊಡಬೇಕೆ ಹೊರತು, ತನ್ನ ತಪ್ಪುಗಳನ್ನು ಭಾರತೀಯರ ತಲೆಗೆ ಹಾಕುವುದಲ್ಲ. ಅದಾನಿಯನ್ನು ಪ್ರಶ್ನಿಸಿದರೆ, ಟೀಕಿಸಿದರೆ ಅದಾನಿಯನ್ನು ಮಾತ್ರ ಟೀಕಿಸಿದಂತೆ ಹೊರತು ಭಾರತವನ್ನಲ್ಲ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...