Homeಮುಖಪುಟಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ...

ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

- Advertisement -
- Advertisement -

ಗುಜರಾತ್ ಮೂಲದ ಉದ್ಯಮಿ ಅದಾನಿ ಅವರ ಸಂಸ್ಥೆಯ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಮಾಡಿರುವ ಆರೋಪವೂ ‘ಭಾರತದ ಮೇಲಿನ ವ್ಯವಸ್ಥಿತ ದಾಳಿ’ ಎಂದು ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. ಹಿಂಡೆನ್‌ಬರ್ಗ್‌ ಮಾಡಿರುವ ಆರೋಪವೂ, ‘ಸುಳ್ಳೆ ಹೊರತು ಬೇರೇನೂ ಅಲ್ಲ’ ಎಂದು ಅದಾನಿ ಗ್ರೂಪ್‌ ಬಿಡುಗಡೆ ಮಾಡಿರುವ 413 ಪುಟಗಳ ಪ್ರತಿಕ್ರಿಯೆಯಲ್ಲಿ ಹೇಳಿದೆ.

“ಇದು ಕೇವಲ ಯಾವುದೊ ಒಂದು ನಿರ್ದಿಷ್ಟ ಕಂಪನಿಯ ಮೇಲಿನ ದಾಳಿಯಲ್ಲ. ಬದಲಾಗಿ ಭಾರತೀಯ ಸಂಸ್ಥೆಗಳ ಸ್ವಾತಂತ್ರ್ಯ, ಸಮಗ್ರತೆ ಮತ್ತು ಗುಣಮಟ್ಟ ಹಾಗೂ ಭಾರತದ ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಮೇಲಿನ ವ್ಯವಸ್ಥಿತ ದಾಳಿಯಾಗಿದೆ” ಎಂದು ಅದಾನಿ ಗ್ರೂಪ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂಡೆನ್‌ಬರ್ಗ್‌ ರಿಸರ್ಚ್‌ ಜನವರಿ 24 ರಂದು ಬಿಡುಗಡೆ ಮಾಡಿರುವ ವರದಿಯಲ್ಲಿನ ಆರೋಪಗಳು ‘ಸುಳ್ಳೇ ಹೊರತು ಬೇರೇನೂ ಇಲ್ಲ’ ಎಂದು ಹೇಳಿರುವ ಅದಾನಿ ಗ್ರೂಪ್‌, “ಡಾಕ್ಯುಮೆಂಟ್‌ ಅನ್ನು ಆಯ್ದ ತಪ್ಪು ಮಾಹಿತಿಯ ಮೂಲಕ ದುರುದ್ದೇಶಪೂರಿತವಾಗಿ ಸಂಯೋಜನೆ ಮಾಡಲಾಲಗಿದೆ” ಎಂದು ಹೇಳಿದೆ.

ಅಷ್ಟೆ ಅಲ್ಲದೆ ಅದಾನಿ ಗ್ರೂಪ್‌‌ ಹಿಂಡೆನ್‌ಬರ್ಗ್‌ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ನೈತಿಕತೆಯನ್ನು ಕೂಡಾ ಪ್ರಶ್ನಿಸಿದೆ. “ಹಿಂಡೆನ್‌ಬರ್ಗ್ ಈ ವರದಿಯನ್ನು ಯಾವುದೇ ಪರಹಿತಚಿಂತನೆಯ ಕಾರಣಗಳಿಗಾಗಿ ಪ್ರಕಟಿಸಿಲ್ಲ. ಹೊರತಾಗಿ ಸಂಪೂರ್ಣವಾಗಿ ಸ್ವಾರ್ಥ ಉದ್ದೇಶಗಳಿಂದ ಪ್ರಕಟಿಸಿದೆ. ಇದು ಅನ್ವಯವಾಗುವ ಸೆಕ್ಯುರಿಟೀಸ್ ಮತ್ತು ವಿದೇಶಿ ವಿನಿಮಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅದಾನಿ ಹೇಳಿದೆ.

“ವರದಿಯು ‘ಸ್ವತಂತ್ರ’ ಅಥವಾ ‘ವಸ್ತುನಿಷ್ಠ’ ಅಥವಾ ‘ಉತ್ತಮ ಸಂಶೋಧನೆ’ ಅಲ್ಲ” ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅದಾನಿ ಪ್ರತಿಕ್ರಿಯೆಗಳಿಗೆ ಮರು ಪ್ರತಿಕ್ರಿಯಿಸಿರುವ ಹಿಂಡನ್‌‌ಬರ್ಗ್‌,“ವಂಚನೆಯನ್ನು ರಾಷ್ಟ್ರೀಯತೆಯ ಅಡಿಯಲ್ಲಿ ಮರೆಯಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಅದಾನಿ ಪ್ರತಿಕ್ರಿಯೆಗೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ಅದಾನಿ ಎಂದರೆ ಭಾರತವಲ್ಲ ಎಂದು ಹೇಳಿದ್ದಾರೆ. “ಮುಂಚೆ ಮೋದಿ ಎಂದರೆ ಭಾರತ ಎಂದು ಹೇಳುತ್ತಿದ್ದರು. ಮೋದಿ ಸರ್ಕಾರವನ್ನು ಟೀಕಿಸಿದರೆ, ದೇಶ ವಿರೋಧಿ ಎಂದು ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಅಮೆರಿಕದ ಸಂಸ್ಥೆಯೊಂದು ಅದಾನಿ ಎಂಬ ಉದ್ಯಮಿಯ ವಂಚನೆಯನ್ನು ಬಯಲಿಗೆಳೆದರೆ, ಅದಕ್ಕೆ ಆತನೆ ಉತ್ತರ ಕೊಡಬೇಕೆ ಹೊರತು, ತನ್ನ ತಪ್ಪುಗಳನ್ನು ಭಾರತೀಯರ ತಲೆಗೆ ಹಾಕುವುದಲ್ಲ. ಅದಾನಿಯನ್ನು ಪ್ರಶ್ನಿಸಿದರೆ, ಟೀಕಿಸಿದರೆ ಅದಾನಿಯನ್ನು ಮಾತ್ರ ಟೀಕಿಸಿದಂತೆ ಹೊರತು ಭಾರತವನ್ನಲ್ಲ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...