Homeಮುಖಪುಟಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ...

ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

- Advertisement -
- Advertisement -

ಗುಜರಾತ್ ಮೂಲದ ಉದ್ಯಮಿ ಅದಾನಿ ಅವರ ಸಂಸ್ಥೆಯ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಮಾಡಿರುವ ಆರೋಪವೂ ‘ಭಾರತದ ಮೇಲಿನ ವ್ಯವಸ್ಥಿತ ದಾಳಿ’ ಎಂದು ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. ಹಿಂಡೆನ್‌ಬರ್ಗ್‌ ಮಾಡಿರುವ ಆರೋಪವೂ, ‘ಸುಳ್ಳೆ ಹೊರತು ಬೇರೇನೂ ಅಲ್ಲ’ ಎಂದು ಅದಾನಿ ಗ್ರೂಪ್‌ ಬಿಡುಗಡೆ ಮಾಡಿರುವ 413 ಪುಟಗಳ ಪ್ರತಿಕ್ರಿಯೆಯಲ್ಲಿ ಹೇಳಿದೆ.

“ಇದು ಕೇವಲ ಯಾವುದೊ ಒಂದು ನಿರ್ದಿಷ್ಟ ಕಂಪನಿಯ ಮೇಲಿನ ದಾಳಿಯಲ್ಲ. ಬದಲಾಗಿ ಭಾರತೀಯ ಸಂಸ್ಥೆಗಳ ಸ್ವಾತಂತ್ರ್ಯ, ಸಮಗ್ರತೆ ಮತ್ತು ಗುಣಮಟ್ಟ ಹಾಗೂ ಭಾರತದ ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಮೇಲಿನ ವ್ಯವಸ್ಥಿತ ದಾಳಿಯಾಗಿದೆ” ಎಂದು ಅದಾನಿ ಗ್ರೂಪ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂಡೆನ್‌ಬರ್ಗ್‌ ರಿಸರ್ಚ್‌ ಜನವರಿ 24 ರಂದು ಬಿಡುಗಡೆ ಮಾಡಿರುವ ವರದಿಯಲ್ಲಿನ ಆರೋಪಗಳು ‘ಸುಳ್ಳೇ ಹೊರತು ಬೇರೇನೂ ಇಲ್ಲ’ ಎಂದು ಹೇಳಿರುವ ಅದಾನಿ ಗ್ರೂಪ್‌, “ಡಾಕ್ಯುಮೆಂಟ್‌ ಅನ್ನು ಆಯ್ದ ತಪ್ಪು ಮಾಹಿತಿಯ ಮೂಲಕ ದುರುದ್ದೇಶಪೂರಿತವಾಗಿ ಸಂಯೋಜನೆ ಮಾಡಲಾಲಗಿದೆ” ಎಂದು ಹೇಳಿದೆ.

ಅಷ್ಟೆ ಅಲ್ಲದೆ ಅದಾನಿ ಗ್ರೂಪ್‌‌ ಹಿಂಡೆನ್‌ಬರ್ಗ್‌ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ನೈತಿಕತೆಯನ್ನು ಕೂಡಾ ಪ್ರಶ್ನಿಸಿದೆ. “ಹಿಂಡೆನ್‌ಬರ್ಗ್ ಈ ವರದಿಯನ್ನು ಯಾವುದೇ ಪರಹಿತಚಿಂತನೆಯ ಕಾರಣಗಳಿಗಾಗಿ ಪ್ರಕಟಿಸಿಲ್ಲ. ಹೊರತಾಗಿ ಸಂಪೂರ್ಣವಾಗಿ ಸ್ವಾರ್ಥ ಉದ್ದೇಶಗಳಿಂದ ಪ್ರಕಟಿಸಿದೆ. ಇದು ಅನ್ವಯವಾಗುವ ಸೆಕ್ಯುರಿಟೀಸ್ ಮತ್ತು ವಿದೇಶಿ ವಿನಿಮಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅದಾನಿ ಹೇಳಿದೆ.

“ವರದಿಯು ‘ಸ್ವತಂತ್ರ’ ಅಥವಾ ‘ವಸ್ತುನಿಷ್ಠ’ ಅಥವಾ ‘ಉತ್ತಮ ಸಂಶೋಧನೆ’ ಅಲ್ಲ” ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅದಾನಿ ಪ್ರತಿಕ್ರಿಯೆಗಳಿಗೆ ಮರು ಪ್ರತಿಕ್ರಿಯಿಸಿರುವ ಹಿಂಡನ್‌‌ಬರ್ಗ್‌,“ವಂಚನೆಯನ್ನು ರಾಷ್ಟ್ರೀಯತೆಯ ಅಡಿಯಲ್ಲಿ ಮರೆಯಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಅದಾನಿ ಪ್ರತಿಕ್ರಿಯೆಗೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ಅದಾನಿ ಎಂದರೆ ಭಾರತವಲ್ಲ ಎಂದು ಹೇಳಿದ್ದಾರೆ. “ಮುಂಚೆ ಮೋದಿ ಎಂದರೆ ಭಾರತ ಎಂದು ಹೇಳುತ್ತಿದ್ದರು. ಮೋದಿ ಸರ್ಕಾರವನ್ನು ಟೀಕಿಸಿದರೆ, ದೇಶ ವಿರೋಧಿ ಎಂದು ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಅಮೆರಿಕದ ಸಂಸ್ಥೆಯೊಂದು ಅದಾನಿ ಎಂಬ ಉದ್ಯಮಿಯ ವಂಚನೆಯನ್ನು ಬಯಲಿಗೆಳೆದರೆ, ಅದಕ್ಕೆ ಆತನೆ ಉತ್ತರ ಕೊಡಬೇಕೆ ಹೊರತು, ತನ್ನ ತಪ್ಪುಗಳನ್ನು ಭಾರತೀಯರ ತಲೆಗೆ ಹಾಕುವುದಲ್ಲ. ಅದಾನಿಯನ್ನು ಪ್ರಶ್ನಿಸಿದರೆ, ಟೀಕಿಸಿದರೆ ಅದಾನಿಯನ್ನು ಮಾತ್ರ ಟೀಕಿಸಿದಂತೆ ಹೊರತು ಭಾರತವನ್ನಲ್ಲ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...