Homeಮುಖಪುಟಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ...

ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

- Advertisement -
- Advertisement -

ಗುಜರಾತ್ ಮೂಲದ ಉದ್ಯಮಿ ಅದಾನಿ ಅವರ ಸಂಸ್ಥೆಯ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಮಾಡಿರುವ ಆರೋಪವೂ ‘ಭಾರತದ ಮೇಲಿನ ವ್ಯವಸ್ಥಿತ ದಾಳಿ’ ಎಂದು ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. ಹಿಂಡೆನ್‌ಬರ್ಗ್‌ ಮಾಡಿರುವ ಆರೋಪವೂ, ‘ಸುಳ್ಳೆ ಹೊರತು ಬೇರೇನೂ ಅಲ್ಲ’ ಎಂದು ಅದಾನಿ ಗ್ರೂಪ್‌ ಬಿಡುಗಡೆ ಮಾಡಿರುವ 413 ಪುಟಗಳ ಪ್ರತಿಕ್ರಿಯೆಯಲ್ಲಿ ಹೇಳಿದೆ.

“ಇದು ಕೇವಲ ಯಾವುದೊ ಒಂದು ನಿರ್ದಿಷ್ಟ ಕಂಪನಿಯ ಮೇಲಿನ ದಾಳಿಯಲ್ಲ. ಬದಲಾಗಿ ಭಾರತೀಯ ಸಂಸ್ಥೆಗಳ ಸ್ವಾತಂತ್ರ್ಯ, ಸಮಗ್ರತೆ ಮತ್ತು ಗುಣಮಟ್ಟ ಹಾಗೂ ಭಾರತದ ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಮೇಲಿನ ವ್ಯವಸ್ಥಿತ ದಾಳಿಯಾಗಿದೆ” ಎಂದು ಅದಾನಿ ಗ್ರೂಪ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂಡೆನ್‌ಬರ್ಗ್‌ ರಿಸರ್ಚ್‌ ಜನವರಿ 24 ರಂದು ಬಿಡುಗಡೆ ಮಾಡಿರುವ ವರದಿಯಲ್ಲಿನ ಆರೋಪಗಳು ‘ಸುಳ್ಳೇ ಹೊರತು ಬೇರೇನೂ ಇಲ್ಲ’ ಎಂದು ಹೇಳಿರುವ ಅದಾನಿ ಗ್ರೂಪ್‌, “ಡಾಕ್ಯುಮೆಂಟ್‌ ಅನ್ನು ಆಯ್ದ ತಪ್ಪು ಮಾಹಿತಿಯ ಮೂಲಕ ದುರುದ್ದೇಶಪೂರಿತವಾಗಿ ಸಂಯೋಜನೆ ಮಾಡಲಾಲಗಿದೆ” ಎಂದು ಹೇಳಿದೆ.

ಅಷ್ಟೆ ಅಲ್ಲದೆ ಅದಾನಿ ಗ್ರೂಪ್‌‌ ಹಿಂಡೆನ್‌ಬರ್ಗ್‌ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ನೈತಿಕತೆಯನ್ನು ಕೂಡಾ ಪ್ರಶ್ನಿಸಿದೆ. “ಹಿಂಡೆನ್‌ಬರ್ಗ್ ಈ ವರದಿಯನ್ನು ಯಾವುದೇ ಪರಹಿತಚಿಂತನೆಯ ಕಾರಣಗಳಿಗಾಗಿ ಪ್ರಕಟಿಸಿಲ್ಲ. ಹೊರತಾಗಿ ಸಂಪೂರ್ಣವಾಗಿ ಸ್ವಾರ್ಥ ಉದ್ದೇಶಗಳಿಂದ ಪ್ರಕಟಿಸಿದೆ. ಇದು ಅನ್ವಯವಾಗುವ ಸೆಕ್ಯುರಿಟೀಸ್ ಮತ್ತು ವಿದೇಶಿ ವಿನಿಮಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅದಾನಿ ಹೇಳಿದೆ.

“ವರದಿಯು ‘ಸ್ವತಂತ್ರ’ ಅಥವಾ ‘ವಸ್ತುನಿಷ್ಠ’ ಅಥವಾ ‘ಉತ್ತಮ ಸಂಶೋಧನೆ’ ಅಲ್ಲ” ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅದಾನಿ ಪ್ರತಿಕ್ರಿಯೆಗಳಿಗೆ ಮರು ಪ್ರತಿಕ್ರಿಯಿಸಿರುವ ಹಿಂಡನ್‌‌ಬರ್ಗ್‌,“ವಂಚನೆಯನ್ನು ರಾಷ್ಟ್ರೀಯತೆಯ ಅಡಿಯಲ್ಲಿ ಮರೆಯಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಅದಾನಿ ಪ್ರತಿಕ್ರಿಯೆಗೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ಅದಾನಿ ಎಂದರೆ ಭಾರತವಲ್ಲ ಎಂದು ಹೇಳಿದ್ದಾರೆ. “ಮುಂಚೆ ಮೋದಿ ಎಂದರೆ ಭಾರತ ಎಂದು ಹೇಳುತ್ತಿದ್ದರು. ಮೋದಿ ಸರ್ಕಾರವನ್ನು ಟೀಕಿಸಿದರೆ, ದೇಶ ವಿರೋಧಿ ಎಂದು ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಅಮೆರಿಕದ ಸಂಸ್ಥೆಯೊಂದು ಅದಾನಿ ಎಂಬ ಉದ್ಯಮಿಯ ವಂಚನೆಯನ್ನು ಬಯಲಿಗೆಳೆದರೆ, ಅದಕ್ಕೆ ಆತನೆ ಉತ್ತರ ಕೊಡಬೇಕೆ ಹೊರತು, ತನ್ನ ತಪ್ಪುಗಳನ್ನು ಭಾರತೀಯರ ತಲೆಗೆ ಹಾಕುವುದಲ್ಲ. ಅದಾನಿಯನ್ನು ಪ್ರಶ್ನಿಸಿದರೆ, ಟೀಕಿಸಿದರೆ ಅದಾನಿಯನ್ನು ಮಾತ್ರ ಟೀಕಿಸಿದಂತೆ ಹೊರತು ಭಾರತವನ್ನಲ್ಲ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...