Homeಮುಖಪುಟಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ...

ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

- Advertisement -
- Advertisement -

ಗುಜರಾತ್ ಮೂಲದ ಉದ್ಯಮಿ ಅದಾನಿ ಅವರ ಸಂಸ್ಥೆಯ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಮಾಡಿರುವ ಆರೋಪವೂ ‘ಭಾರತದ ಮೇಲಿನ ವ್ಯವಸ್ಥಿತ ದಾಳಿ’ ಎಂದು ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. ಹಿಂಡೆನ್‌ಬರ್ಗ್‌ ಮಾಡಿರುವ ಆರೋಪವೂ, ‘ಸುಳ್ಳೆ ಹೊರತು ಬೇರೇನೂ ಅಲ್ಲ’ ಎಂದು ಅದಾನಿ ಗ್ರೂಪ್‌ ಬಿಡುಗಡೆ ಮಾಡಿರುವ 413 ಪುಟಗಳ ಪ್ರತಿಕ್ರಿಯೆಯಲ್ಲಿ ಹೇಳಿದೆ.

“ಇದು ಕೇವಲ ಯಾವುದೊ ಒಂದು ನಿರ್ದಿಷ್ಟ ಕಂಪನಿಯ ಮೇಲಿನ ದಾಳಿಯಲ್ಲ. ಬದಲಾಗಿ ಭಾರತೀಯ ಸಂಸ್ಥೆಗಳ ಸ್ವಾತಂತ್ರ್ಯ, ಸಮಗ್ರತೆ ಮತ್ತು ಗುಣಮಟ್ಟ ಹಾಗೂ ಭಾರತದ ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಮೇಲಿನ ವ್ಯವಸ್ಥಿತ ದಾಳಿಯಾಗಿದೆ” ಎಂದು ಅದಾನಿ ಗ್ರೂಪ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂಡೆನ್‌ಬರ್ಗ್‌ ರಿಸರ್ಚ್‌ ಜನವರಿ 24 ರಂದು ಬಿಡುಗಡೆ ಮಾಡಿರುವ ವರದಿಯಲ್ಲಿನ ಆರೋಪಗಳು ‘ಸುಳ್ಳೇ ಹೊರತು ಬೇರೇನೂ ಇಲ್ಲ’ ಎಂದು ಹೇಳಿರುವ ಅದಾನಿ ಗ್ರೂಪ್‌, “ಡಾಕ್ಯುಮೆಂಟ್‌ ಅನ್ನು ಆಯ್ದ ತಪ್ಪು ಮಾಹಿತಿಯ ಮೂಲಕ ದುರುದ್ದೇಶಪೂರಿತವಾಗಿ ಸಂಯೋಜನೆ ಮಾಡಲಾಲಗಿದೆ” ಎಂದು ಹೇಳಿದೆ.

ಅಷ್ಟೆ ಅಲ್ಲದೆ ಅದಾನಿ ಗ್ರೂಪ್‌‌ ಹಿಂಡೆನ್‌ಬರ್ಗ್‌ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ನೈತಿಕತೆಯನ್ನು ಕೂಡಾ ಪ್ರಶ್ನಿಸಿದೆ. “ಹಿಂಡೆನ್‌ಬರ್ಗ್ ಈ ವರದಿಯನ್ನು ಯಾವುದೇ ಪರಹಿತಚಿಂತನೆಯ ಕಾರಣಗಳಿಗಾಗಿ ಪ್ರಕಟಿಸಿಲ್ಲ. ಹೊರತಾಗಿ ಸಂಪೂರ್ಣವಾಗಿ ಸ್ವಾರ್ಥ ಉದ್ದೇಶಗಳಿಂದ ಪ್ರಕಟಿಸಿದೆ. ಇದು ಅನ್ವಯವಾಗುವ ಸೆಕ್ಯುರಿಟೀಸ್ ಮತ್ತು ವಿದೇಶಿ ವಿನಿಮಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅದಾನಿ ಹೇಳಿದೆ.

“ವರದಿಯು ‘ಸ್ವತಂತ್ರ’ ಅಥವಾ ‘ವಸ್ತುನಿಷ್ಠ’ ಅಥವಾ ‘ಉತ್ತಮ ಸಂಶೋಧನೆ’ ಅಲ್ಲ” ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅದಾನಿ ಪ್ರತಿಕ್ರಿಯೆಗಳಿಗೆ ಮರು ಪ್ರತಿಕ್ರಿಯಿಸಿರುವ ಹಿಂಡನ್‌‌ಬರ್ಗ್‌,“ವಂಚನೆಯನ್ನು ರಾಷ್ಟ್ರೀಯತೆಯ ಅಡಿಯಲ್ಲಿ ಮರೆಯಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಅದಾನಿ ಪ್ರತಿಕ್ರಿಯೆಗೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ಅದಾನಿ ಎಂದರೆ ಭಾರತವಲ್ಲ ಎಂದು ಹೇಳಿದ್ದಾರೆ. “ಮುಂಚೆ ಮೋದಿ ಎಂದರೆ ಭಾರತ ಎಂದು ಹೇಳುತ್ತಿದ್ದರು. ಮೋದಿ ಸರ್ಕಾರವನ್ನು ಟೀಕಿಸಿದರೆ, ದೇಶ ವಿರೋಧಿ ಎಂದು ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಅಮೆರಿಕದ ಸಂಸ್ಥೆಯೊಂದು ಅದಾನಿ ಎಂಬ ಉದ್ಯಮಿಯ ವಂಚನೆಯನ್ನು ಬಯಲಿಗೆಳೆದರೆ, ಅದಕ್ಕೆ ಆತನೆ ಉತ್ತರ ಕೊಡಬೇಕೆ ಹೊರತು, ತನ್ನ ತಪ್ಪುಗಳನ್ನು ಭಾರತೀಯರ ತಲೆಗೆ ಹಾಕುವುದಲ್ಲ. ಅದಾನಿಯನ್ನು ಪ್ರಶ್ನಿಸಿದರೆ, ಟೀಕಿಸಿದರೆ ಅದಾನಿಯನ್ನು ಮಾತ್ರ ಟೀಕಿಸಿದಂತೆ ಹೊರತು ಭಾರತವನ್ನಲ್ಲ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...