HomeUncategorizedಹಿಂಡೆನ್‌ಬರ್ಗ್ ವರದಿ ಎಫೆಕ್ಟ್: $48 ಶತಕೋಟಿಗೆ ಕುಸಿದ ಅದಾನಿ ಆಸ್ತಿ

ಹಿಂಡೆನ್‌ಬರ್ಗ್ ವರದಿ ಎಫೆಕ್ಟ್: $48 ಶತಕೋಟಿಗೆ ಕುಸಿದ ಅದಾನಿ ಆಸ್ತಿ

- Advertisement -
- Advertisement -

ಉದ್ಯಮಿ ಗೌತಮ್ ಅದಾನಿ ಅವರ ನಿವ್ವಳ ಆಸ್ತಿ ಇಂದು (ಫೆ.20) ಮೊದಲ ಬಾರಿಗೆ $50 ಶತಕೋಟಿಗಿಂತ ಕಡಿಮೆಯಾಗಿದೆ. ಹಿಂಡೆನ್‌ಬರ್ಗ್ ವರದಿ ಪರಿಣಾಮವಾಗಿ ಅವರ ಆಸ್ತಿ $48 ಬಿಲಿಯನ್‌ ಡಾಲರ್‌ಗೆ (3.9 ಲಕ್ಷ ಕೋಟಿ ರೂಗಳು) ಇಳಿಕೆಯಾಗಿದೆ ಎಂದು ಫೋರ್ಬ್ಸ್ ಮತ್ತು ಬ್ಲೂಮ್‌ಬರ್ಗ್ ವರದಿ ಮಾಡಿವೆ.

ಇಂದು ಫೋರ್ಬ್ಸ್ ಮತ್ತು ಬ್ಲೂಮ್‌ಬರ್ಗ್ ಬಿಡುಗಡೆ ಮಾಡಿರುವ ಬಿಲಿಯನೇರ್‌ಗಳ ಪಟ್ಟಿಗಳಲ್ಲಿ ಅದಾನಿಯು ವಿಶ್ವದ ಇಪ್ಪತ್ತೈದನೇ ಶ್ರೀಮಂತ ವ್ಯಕ್ತಿ ಎಂದು ಶ್ರೇಣೀಕರಿಸಿವೆ.

ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್ ಪಟ್ಟಿ ಮತ್ತು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ವಿಶ್ವದ ಶ್ರೀಮಂತ ಜನರ ದೈನಂದಿನ ಶ್ರೇಯಾಂಕಗಳಾಗಿವೆ. ಫೋರ್ಬ್ಸ್ ಪಟ್ಟಿಯಲ್ಲಿ ಸದ್ಯ ಅದಾನಿ ಗ್ರೂಪ್, ಚೀನಾದ ಜಾಂಗ್ ಯಿಮಿಂಗ್ ($49.5 ಶತಕೋಟಿ), ಮತ್ತು ಯುನೈಟೆಡ್ ಸ್ಟೇಟ್ಸ್‌ನ ಫಿಲ್ ನೈಟ್ ಮತ್ತು ಕುಟುಂಬ ($47.4 ಶತಕೋಟಿ) ನಡುವೆ ಇದ್ದಾರೆ.

ಮತ್ತೊಂದೆಡೆ, ಬ್ಲೂಮ್‌ಬರ್ಗ್ ಸೂಚ್ಯಂಕದಲ್ಲಿ ಯುನೈಟೆಡ್ ಸ್ಟೇಟ್ಸ್‌ನ ಮೈಕೆಲ್ ಡೆಲ್ ($49.2 ಶತಕೋಟಿ) ಮತ್ತು ಫ್ರಾನ್ಸ್‌ನ ಅಲೈನ್ ವರ್ತೈಮರ್ ($49 ಶತಕೋಟಿ) ನಡುವೆ ಅದಾನಿ ಸ್ಥಾನ ಪಡೆದಿದ್ದಾರೆ.

ಅದಾನಿಯವರ ಒಟ್ಟು ಸಂಪತ್ತಿನ ಭಾರೀ ಕುಸಿತಕ್ಕೆ ಕಾರಣ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಯಾಗಿದೆ. ಈ ವರದಿಯಲ್ಲಿ ‘ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ಹಗರಣವನ್ನು’ ಅದಾನಿ ಗ್ರೂಪ್ಸ್ ನಡೆಸುತ್ತಿದೆ ಎಂದು ಆರೋಪಿಸಸಲಾಗಿತ್ತು. ಹಾಗಾಗಿ ಕೃತಕವಾಗಿ ಏರಿಸಲಾಗಿದ್ದ ಅವರು ಷೇರುಗಳ ಮೌಲ್ಯ ಪ್ರತಿ ದಿನ ಕುಸಿಯುತ್ತಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

2023ರ ಆರಂಭದಲ್ಲಿ ಗೌತಮ್ ಅದಾನಿ ಅವರು, ವಿಶ್ವದ ಮೂರನೇ ಅತಿ ಶ್ರೀಮಂತ ವ್ಯಕ್ತಿ ಮತ್ತು ಏಷ್ಯನ್ನರಲ್ಲಿ ಅತ್ಯಧಿಕ ನಿವ್ವಳ ಮೌಲ್ಯ ಹೊಂದಿರುವ ವ್ಯಕ್ತಿಯಾಗಿದ್ದರು. ಆದರೆ ಅವರು ಈಗ ಏಷ್ಯಾ ಖಂಡದಲ್ಲಿ ನಾಲ್ಕನೇ ಶ್ರೀಮಂತರಾಗಿದ್ದಾರೆ. ಮುಖೇಶ್ ಅಂಬಾನಿ ಮತ್ತು ಚೀನಾದ ಜೋಡಿಯಾದ ಜಾಂಗ್ ಶಾನ್ಶನ್ ಮತ್ತು ಜಾಂಗ್ ಯಿಮಿಂಗ್ ಅವರ ನಂತರ ಸ್ಥಾನದಲ್ಲಿ ಅದಾನಿ ಬಂದು ನಿಂತಿದ್ದಾರೆ.

ಫ್ರಾನ್ಸ್‌ನ ಬರ್ನಾರ್ಡ್ ಅರ್ನಾಲ್ಟ್ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿದಿದ್ದಾರೆ. ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ನಂತರದ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿದ್ದ ಅದಾನಿ 25ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಇದನ್ನೂ ಓದಿ:  ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...