Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...