Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...