Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...