Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...