Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...