Homeಮುಖಪುಟಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಅದಾನಿ ಸೇರಿದಂತೆ ಕಾರ್ಪೋರೇಟ್ ದೈತ್ಯರ ಅಕ್ರಮ ಬಯಲಿಗೆಳೆದಿದ್ದ ಸಂಸ್ಥೆ

- Advertisement -
- Advertisement -

ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

“ನಾವು ಮುನ್ನಡೆಸುತ್ತಿದ್ದ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಾಗಾಗಿ ಸಂಸ್ಥೆಯನ್ನು ವಿಸರ್ಜಿಸುತ್ತೇವೆ ಎಂದು ಹಿಂಡನ್‌ಬರ್ಗ್ ಸಂಸ್ಥಾಪಕ ನೇಟ್ ಆಂಡರ್ಸನ್ ಬುಧವಾರ (ಜ.15) ಹೇಳಿದ್ದಾರೆ.

ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನೇಟ್ ಆಂಡರ್ಸನ್ ಪ್ರಕಟಣೆ

ನೇಟ್ ಆಂಡರ್ಸನ್ ಅವರ ಸಂಪೂರ್ಣ ಹೇಳಿಕೆ ಇಲ್ಲಿದೆ 

2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್‌ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.

2023ರಲ್ಲಿ ಭಾರತೀಯ ಸಂಘಟಿತ ಸಂಸ್ಥೆಗಳ ವಿರುದ್ಧ ಹಿಂಡನ್‌ಬರ್ಗ್ ವರದಿ ಪ್ರಕಟಿಸಿತ್ತು. ಅದಾನಿ ಗ್ರೂಪ್ ಕಡಲಾಚೆಯ ತೆರಿಗೆಳನ್ನು ಅಸಮರ್ಪಕವಾಗಿ ಬಳಕೆ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ, ಈ ಆರೋಪವನ್ನು ಅದಾನಿ ಗ್ರೂಪ್ ನಿರಾಕರಿಸಿತ್ತು.

ಅದಾನಿ ಗ್ರೂಪ್‌ ತನ್ನ ಕಂಪನಿಯ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್‌ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಪಾಲು ಹೊಂದಿದ್ದಾರೆ ಎಂದು ಹಿಂಡನ್‌ಬರ್ಗ್ 2024ರಲ್ಲಿ ಆರೋಪ ಮಾಡಿತ್ತು. ಇದು ಷೇರುಪೇಟೆಯಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್‌ ಷೇರುಗಳಲ್ಲಿ ಭಾರೀ ಕುಸಿತ ಉಂಟಾಗಿತ್ತು.

ಈ ನಡುವೆ 2024ರ ನವೆಂಬರ್‌ನಲ್ಲಿ ಬಹುಕೋಟಿ ಡಾಲರ್‌ ಲಂಚ ಮತ್ತು ವಂಚನೆ ಆರೋಪಿಸಿ ನ್ಯೂಯಾರ್ಕ್‌ನಲ್ಲಿ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಸೇರಿದಂತೆ ಹಲವರ ವಿರುದ್ಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದರು.

ಭಾರತಕ್ಕೆ ಸಂಬಂಧಪಟ್ಟಂತೆ ಅದಾನಿ ವಿರುದ್ದ ಹಿಂಡನ್‌ಬರ್ಗ್ ಮಾಡಿದ್ದ ಎರಡು ಪ್ರಮುಖ ಆರೋಪಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದಾನಿ ಕಂಪನಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಭಾರತದಲ್ಲಿ ಆಡಳಿತ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಒಕ್ಕೂಟ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ನಡುವೆ ತೀವ್ರ ತಿಕ್ಕಾಟ ನಡೆದಿತ್ತು.

ಬಿಜೆಪಿ ಮತ್ತು ಸಂಘ ಪರಿವಾರದ ಹಿಂದುತ್ವ ಸಂಘಟನೆಗಳು ಆದಾನಿ ವಿರುದ್ದ ಹಿಂಡನ್‌ಬರ್ಗ್‌ ಆರೋಪ ಭಾರತ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಹಿಂಡನ್‌ಬರ್ಗ್ ಅನ್ನು ಬೆಂಬಲಿಸಿದ್ದ ಪ್ರತಿಪಕ್ಷಗಳ ವಿರುದ್ದ ದೇಶದ್ರೋಹದ ಆರೋಪ ಮಾಡಿತ್ತು.

ಹಿಂಡನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಬಯಲಿಗೆಳೆದ ಕಾರ್ಪೋರೇಟ್ ಕಂಪನಿಗಳ ಅಕ್ರಮಗಳಲ್ಲಿಎಲೆಕ್ಟ್ರಿಕ್ ಟ್ರಕ್ ತಯಾರಕ ಕಂಪನಿ ನಿಕೋಲಾ ವಿರುದ್ಧದ ಪ್ರಕರಣವೂ ಒಂದು. ನಿಕೋಲಾ ತನ್ನ ತಂತ್ರಜ್ಞಾನದ ಸ್ಥಿತಿಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು 2020ರಲ್ಲಿ ಹಿಂಡನ್‌ಬರ್ಗ್ ಆರೋಪಿಸಿತ್ತು.

ಪರಿಣಾಮ, ನಿಕೋಲಾ ಕಂಪನಿಯ ಮೇಲೆ ಕ್ರಿಮಿನಲ್ ವಂಚನೆ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯು ಯುಎಸ್‌ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್‌ಗೆ 125 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿತ್ತು. ಇದು ಹಿಂಡನ್‌ಬರ್ಗ್‌ನ ಯಶಸ್ವಿ ವರದಿ ಎಂದು ಪರಿಗಣಿಸಲಾಗಿದೆ.

ಹಿಂಡೆನ್‌ಬರ್ಗ್ ವರದಿಯು ವಂಚನೆ ಆರೋಪ ಹೊರಿಸಿದ ನಂತರ ಅದಾನಿ ಗ್ರೂಪ್ 2023 ರಲ್ಲಿ ತನ್ನ ಮಾರುಕಟ್ಟೆ ಮೌಲ್ಯದಿಂದ 150 ಬಿಲಿಯನ್ ಡಾಲರ್ ಕಳೆದುಕೊಂಡಿತ್ತು.

ಬಹಳ ಕಡಿಮೆ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ ದೈತ್ಯ ಕಾರ್ಪೋರೇಟ್ ಕಂಪನಿಗಳ ಅಕ್ರಮ ಬಯಲಿಗೆಳೆದು, ಅವರನ್ನು ಎದುರು ಹಾಕಿಕೊಂಡಿರುವ ಹಿಂಡನ್‌ಬರ್ಗ್ ಹಠಾತ್ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಏಕೆ ಎಂಬುವುದು ಸ್ಪಷ್ಟವಾಗಿಲ್ಲ.

ಆದರೆ, ಮುಂದಿನ ವಾರ ಅಮೆರಿದಲ್ಲಿ ಬೈಡೆನ್‌ ಆಡಳಿತ ಕೊನೆಗೊಂಡು ಪ್ರಧಾನಿ ಮೋದಿಯವರ ಆಪ್ತ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷ ಹುದ್ದೆ ಅಲಂಕರಿಸಲಿದ್ದಾರೆ. ಅದಕ್ಕೂ ಮುನ್ನ ಹಿಂಡನ್‌ಬರ್ಗ್ ಸ್ಥಗಿತಕ್ಕೆ ಮುಂದಾಗಿರುವುದು ಗಮನಾರ್ಹ.

ಕಂಪನಿ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆ ಸ್ಥಗಿಗೊಳ್ಳಲಿದೆ ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ ಹೇಳಿದ್ದಾರೆ.

ಇದುವರೆಗಿನ ತಮ್ಮ ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 100 ಜನರು ಕೋಟ್ಯಾದಿಪತಿಗಳು, ಕಾರ್ಪೋರೇಟ್ ದೈತ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಆಂಡರ್ನಸ್ ಮೆಲುಕು ಹಾಕಿದ್ದಾರೆ. “ನಾವು ಅಲುಗಾಡಿಸಬೇಕು ಎಂದಿದ್ದ ಕೆಲವು ಸಾಮ್ರಾಜ್ಯಗಳನ್ನು ಅಲುಗಾಡಿಸಿದ್ದೇವೆ” ಎಂದಿದ್ದಾರೆ.

ಮುಂದಿನ ಆರು ತಿಂಗಳಲ್ಲಿ ನಾವು ಹೇಗೆ ಸಂಶೋಧನೆಗಳನ್ನು ಮಾಡುತ್ತೇವೆ. ಹೇಗೆ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ ಎಂಬುವುದರ ಬಗ್ಗೆ ಸರಣಿ ವಿಡಿಯೋ ಮತ್ತು ಇತರ ರೀತಿಯಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

ಕಂಪನಿ ಮುಚ್ಚುವ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...