Homeಮುಖಪುಟಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಅದಾನಿ ಸೇರಿದಂತೆ ಕಾರ್ಪೋರೇಟ್ ದೈತ್ಯರ ಅಕ್ರಮ ಬಯಲಿಗೆಳೆದಿದ್ದ ಸಂಸ್ಥೆ

- Advertisement -
- Advertisement -

ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

“ನಾವು ಮುನ್ನಡೆಸುತ್ತಿದ್ದ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಾಗಾಗಿ ಸಂಸ್ಥೆಯನ್ನು ವಿಸರ್ಜಿಸುತ್ತೇವೆ ಎಂದು ಹಿಂಡನ್‌ಬರ್ಗ್ ಸಂಸ್ಥಾಪಕ ನೇಟ್ ಆಂಡರ್ಸನ್ ಬುಧವಾರ (ಜ.15) ಹೇಳಿದ್ದಾರೆ.

ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನೇಟ್ ಆಂಡರ್ಸನ್ ಪ್ರಕಟಣೆ

ನೇಟ್ ಆಂಡರ್ಸನ್ ಅವರ ಸಂಪೂರ್ಣ ಹೇಳಿಕೆ ಇಲ್ಲಿದೆ 

2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್‌ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.

2023ರಲ್ಲಿ ಭಾರತೀಯ ಸಂಘಟಿತ ಸಂಸ್ಥೆಗಳ ವಿರುದ್ಧ ಹಿಂಡನ್‌ಬರ್ಗ್ ವರದಿ ಪ್ರಕಟಿಸಿತ್ತು. ಅದಾನಿ ಗ್ರೂಪ್ ಕಡಲಾಚೆಯ ತೆರಿಗೆಳನ್ನು ಅಸಮರ್ಪಕವಾಗಿ ಬಳಕೆ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ, ಈ ಆರೋಪವನ್ನು ಅದಾನಿ ಗ್ರೂಪ್ ನಿರಾಕರಿಸಿತ್ತು.

ಅದಾನಿ ಗ್ರೂಪ್‌ ತನ್ನ ಕಂಪನಿಯ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್‌ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಪಾಲು ಹೊಂದಿದ್ದಾರೆ ಎಂದು ಹಿಂಡನ್‌ಬರ್ಗ್ 2024ರಲ್ಲಿ ಆರೋಪ ಮಾಡಿತ್ತು. ಇದು ಷೇರುಪೇಟೆಯಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್‌ ಷೇರುಗಳಲ್ಲಿ ಭಾರೀ ಕುಸಿತ ಉಂಟಾಗಿತ್ತು.

ಈ ನಡುವೆ 2024ರ ನವೆಂಬರ್‌ನಲ್ಲಿ ಬಹುಕೋಟಿ ಡಾಲರ್‌ ಲಂಚ ಮತ್ತು ವಂಚನೆ ಆರೋಪಿಸಿ ನ್ಯೂಯಾರ್ಕ್‌ನಲ್ಲಿ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಸೇರಿದಂತೆ ಹಲವರ ವಿರುದ್ಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದರು.

ಭಾರತಕ್ಕೆ ಸಂಬಂಧಪಟ್ಟಂತೆ ಅದಾನಿ ವಿರುದ್ದ ಹಿಂಡನ್‌ಬರ್ಗ್ ಮಾಡಿದ್ದ ಎರಡು ಪ್ರಮುಖ ಆರೋಪಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದಾನಿ ಕಂಪನಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಭಾರತದಲ್ಲಿ ಆಡಳಿತ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಒಕ್ಕೂಟ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ನಡುವೆ ತೀವ್ರ ತಿಕ್ಕಾಟ ನಡೆದಿತ್ತು.

ಬಿಜೆಪಿ ಮತ್ತು ಸಂಘ ಪರಿವಾರದ ಹಿಂದುತ್ವ ಸಂಘಟನೆಗಳು ಆದಾನಿ ವಿರುದ್ದ ಹಿಂಡನ್‌ಬರ್ಗ್‌ ಆರೋಪ ಭಾರತ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಹಿಂಡನ್‌ಬರ್ಗ್ ಅನ್ನು ಬೆಂಬಲಿಸಿದ್ದ ಪ್ರತಿಪಕ್ಷಗಳ ವಿರುದ್ದ ದೇಶದ್ರೋಹದ ಆರೋಪ ಮಾಡಿತ್ತು.

ಹಿಂಡನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಬಯಲಿಗೆಳೆದ ಕಾರ್ಪೋರೇಟ್ ಕಂಪನಿಗಳ ಅಕ್ರಮಗಳಲ್ಲಿಎಲೆಕ್ಟ್ರಿಕ್ ಟ್ರಕ್ ತಯಾರಕ ಕಂಪನಿ ನಿಕೋಲಾ ವಿರುದ್ಧದ ಪ್ರಕರಣವೂ ಒಂದು. ನಿಕೋಲಾ ತನ್ನ ತಂತ್ರಜ್ಞಾನದ ಸ್ಥಿತಿಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು 2020ರಲ್ಲಿ ಹಿಂಡನ್‌ಬರ್ಗ್ ಆರೋಪಿಸಿತ್ತು.

ಪರಿಣಾಮ, ನಿಕೋಲಾ ಕಂಪನಿಯ ಮೇಲೆ ಕ್ರಿಮಿನಲ್ ವಂಚನೆ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯು ಯುಎಸ್‌ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್‌ಗೆ 125 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿತ್ತು. ಇದು ಹಿಂಡನ್‌ಬರ್ಗ್‌ನ ಯಶಸ್ವಿ ವರದಿ ಎಂದು ಪರಿಗಣಿಸಲಾಗಿದೆ.

ಹಿಂಡೆನ್‌ಬರ್ಗ್ ವರದಿಯು ವಂಚನೆ ಆರೋಪ ಹೊರಿಸಿದ ನಂತರ ಅದಾನಿ ಗ್ರೂಪ್ 2023 ರಲ್ಲಿ ತನ್ನ ಮಾರುಕಟ್ಟೆ ಮೌಲ್ಯದಿಂದ 150 ಬಿಲಿಯನ್ ಡಾಲರ್ ಕಳೆದುಕೊಂಡಿತ್ತು.

ಬಹಳ ಕಡಿಮೆ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ ದೈತ್ಯ ಕಾರ್ಪೋರೇಟ್ ಕಂಪನಿಗಳ ಅಕ್ರಮ ಬಯಲಿಗೆಳೆದು, ಅವರನ್ನು ಎದುರು ಹಾಕಿಕೊಂಡಿರುವ ಹಿಂಡನ್‌ಬರ್ಗ್ ಹಠಾತ್ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಏಕೆ ಎಂಬುವುದು ಸ್ಪಷ್ಟವಾಗಿಲ್ಲ.

ಆದರೆ, ಮುಂದಿನ ವಾರ ಅಮೆರಿದಲ್ಲಿ ಬೈಡೆನ್‌ ಆಡಳಿತ ಕೊನೆಗೊಂಡು ಪ್ರಧಾನಿ ಮೋದಿಯವರ ಆಪ್ತ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷ ಹುದ್ದೆ ಅಲಂಕರಿಸಲಿದ್ದಾರೆ. ಅದಕ್ಕೂ ಮುನ್ನ ಹಿಂಡನ್‌ಬರ್ಗ್ ಸ್ಥಗಿತಕ್ಕೆ ಮುಂದಾಗಿರುವುದು ಗಮನಾರ್ಹ.

ಕಂಪನಿ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆ ಸ್ಥಗಿಗೊಳ್ಳಲಿದೆ ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ ಹೇಳಿದ್ದಾರೆ.

ಇದುವರೆಗಿನ ತಮ್ಮ ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 100 ಜನರು ಕೋಟ್ಯಾದಿಪತಿಗಳು, ಕಾರ್ಪೋರೇಟ್ ದೈತ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಆಂಡರ್ನಸ್ ಮೆಲುಕು ಹಾಕಿದ್ದಾರೆ. “ನಾವು ಅಲುಗಾಡಿಸಬೇಕು ಎಂದಿದ್ದ ಕೆಲವು ಸಾಮ್ರಾಜ್ಯಗಳನ್ನು ಅಲುಗಾಡಿಸಿದ್ದೇವೆ” ಎಂದಿದ್ದಾರೆ.

ಮುಂದಿನ ಆರು ತಿಂಗಳಲ್ಲಿ ನಾವು ಹೇಗೆ ಸಂಶೋಧನೆಗಳನ್ನು ಮಾಡುತ್ತೇವೆ. ಹೇಗೆ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ ಎಂಬುವುದರ ಬಗ್ಗೆ ಸರಣಿ ವಿಡಿಯೋ ಮತ್ತು ಇತರ ರೀತಿಯಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

ಕಂಪನಿ ಮುಚ್ಚುವ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...