Homeಮುಖಪುಟಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಅದಾನಿ ಸೇರಿದಂತೆ ಕಾರ್ಪೋರೇಟ್ ದೈತ್ಯರ ಅಕ್ರಮ ಬಯಲಿಗೆಳೆದಿದ್ದ ಸಂಸ್ಥೆ

- Advertisement -
- Advertisement -

ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

“ನಾವು ಮುನ್ನಡೆಸುತ್ತಿದ್ದ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಾಗಾಗಿ ಸಂಸ್ಥೆಯನ್ನು ವಿಸರ್ಜಿಸುತ್ತೇವೆ ಎಂದು ಹಿಂಡನ್‌ಬರ್ಗ್ ಸಂಸ್ಥಾಪಕ ನೇಟ್ ಆಂಡರ್ಸನ್ ಬುಧವಾರ (ಜ.15) ಹೇಳಿದ್ದಾರೆ.

ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನೇಟ್ ಆಂಡರ್ಸನ್ ಪ್ರಕಟಣೆ

ನೇಟ್ ಆಂಡರ್ಸನ್ ಅವರ ಸಂಪೂರ್ಣ ಹೇಳಿಕೆ ಇಲ್ಲಿದೆ 

2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್‌ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.

2023ರಲ್ಲಿ ಭಾರತೀಯ ಸಂಘಟಿತ ಸಂಸ್ಥೆಗಳ ವಿರುದ್ಧ ಹಿಂಡನ್‌ಬರ್ಗ್ ವರದಿ ಪ್ರಕಟಿಸಿತ್ತು. ಅದಾನಿ ಗ್ರೂಪ್ ಕಡಲಾಚೆಯ ತೆರಿಗೆಳನ್ನು ಅಸಮರ್ಪಕವಾಗಿ ಬಳಕೆ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ, ಈ ಆರೋಪವನ್ನು ಅದಾನಿ ಗ್ರೂಪ್ ನಿರಾಕರಿಸಿತ್ತು.

ಅದಾನಿ ಗ್ರೂಪ್‌ ತನ್ನ ಕಂಪನಿಯ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್‌ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಪಾಲು ಹೊಂದಿದ್ದಾರೆ ಎಂದು ಹಿಂಡನ್‌ಬರ್ಗ್ 2024ರಲ್ಲಿ ಆರೋಪ ಮಾಡಿತ್ತು. ಇದು ಷೇರುಪೇಟೆಯಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್‌ ಷೇರುಗಳಲ್ಲಿ ಭಾರೀ ಕುಸಿತ ಉಂಟಾಗಿತ್ತು.

ಈ ನಡುವೆ 2024ರ ನವೆಂಬರ್‌ನಲ್ಲಿ ಬಹುಕೋಟಿ ಡಾಲರ್‌ ಲಂಚ ಮತ್ತು ವಂಚನೆ ಆರೋಪಿಸಿ ನ್ಯೂಯಾರ್ಕ್‌ನಲ್ಲಿ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಸೇರಿದಂತೆ ಹಲವರ ವಿರುದ್ಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದರು.

ಭಾರತಕ್ಕೆ ಸಂಬಂಧಪಟ್ಟಂತೆ ಅದಾನಿ ವಿರುದ್ದ ಹಿಂಡನ್‌ಬರ್ಗ್ ಮಾಡಿದ್ದ ಎರಡು ಪ್ರಮುಖ ಆರೋಪಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದಾನಿ ಕಂಪನಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಭಾರತದಲ್ಲಿ ಆಡಳಿತ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಒಕ್ಕೂಟ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ನಡುವೆ ತೀವ್ರ ತಿಕ್ಕಾಟ ನಡೆದಿತ್ತು.

ಬಿಜೆಪಿ ಮತ್ತು ಸಂಘ ಪರಿವಾರದ ಹಿಂದುತ್ವ ಸಂಘಟನೆಗಳು ಆದಾನಿ ವಿರುದ್ದ ಹಿಂಡನ್‌ಬರ್ಗ್‌ ಆರೋಪ ಭಾರತ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಹಿಂಡನ್‌ಬರ್ಗ್ ಅನ್ನು ಬೆಂಬಲಿಸಿದ್ದ ಪ್ರತಿಪಕ್ಷಗಳ ವಿರುದ್ದ ದೇಶದ್ರೋಹದ ಆರೋಪ ಮಾಡಿತ್ತು.

ಹಿಂಡನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಬಯಲಿಗೆಳೆದ ಕಾರ್ಪೋರೇಟ್ ಕಂಪನಿಗಳ ಅಕ್ರಮಗಳಲ್ಲಿಎಲೆಕ್ಟ್ರಿಕ್ ಟ್ರಕ್ ತಯಾರಕ ಕಂಪನಿ ನಿಕೋಲಾ ವಿರುದ್ಧದ ಪ್ರಕರಣವೂ ಒಂದು. ನಿಕೋಲಾ ತನ್ನ ತಂತ್ರಜ್ಞಾನದ ಸ್ಥಿತಿಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು 2020ರಲ್ಲಿ ಹಿಂಡನ್‌ಬರ್ಗ್ ಆರೋಪಿಸಿತ್ತು.

ಪರಿಣಾಮ, ನಿಕೋಲಾ ಕಂಪನಿಯ ಮೇಲೆ ಕ್ರಿಮಿನಲ್ ವಂಚನೆ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯು ಯುಎಸ್‌ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್‌ಗೆ 125 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿತ್ತು. ಇದು ಹಿಂಡನ್‌ಬರ್ಗ್‌ನ ಯಶಸ್ವಿ ವರದಿ ಎಂದು ಪರಿಗಣಿಸಲಾಗಿದೆ.

ಹಿಂಡೆನ್‌ಬರ್ಗ್ ವರದಿಯು ವಂಚನೆ ಆರೋಪ ಹೊರಿಸಿದ ನಂತರ ಅದಾನಿ ಗ್ರೂಪ್ 2023 ರಲ್ಲಿ ತನ್ನ ಮಾರುಕಟ್ಟೆ ಮೌಲ್ಯದಿಂದ 150 ಬಿಲಿಯನ್ ಡಾಲರ್ ಕಳೆದುಕೊಂಡಿತ್ತು.

ಬಹಳ ಕಡಿಮೆ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ ದೈತ್ಯ ಕಾರ್ಪೋರೇಟ್ ಕಂಪನಿಗಳ ಅಕ್ರಮ ಬಯಲಿಗೆಳೆದು, ಅವರನ್ನು ಎದುರು ಹಾಕಿಕೊಂಡಿರುವ ಹಿಂಡನ್‌ಬರ್ಗ್ ಹಠಾತ್ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಏಕೆ ಎಂಬುವುದು ಸ್ಪಷ್ಟವಾಗಿಲ್ಲ.

ಆದರೆ, ಮುಂದಿನ ವಾರ ಅಮೆರಿದಲ್ಲಿ ಬೈಡೆನ್‌ ಆಡಳಿತ ಕೊನೆಗೊಂಡು ಪ್ರಧಾನಿ ಮೋದಿಯವರ ಆಪ್ತ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷ ಹುದ್ದೆ ಅಲಂಕರಿಸಲಿದ್ದಾರೆ. ಅದಕ್ಕೂ ಮುನ್ನ ಹಿಂಡನ್‌ಬರ್ಗ್ ಸ್ಥಗಿತಕ್ಕೆ ಮುಂದಾಗಿರುವುದು ಗಮನಾರ್ಹ.

ಕಂಪನಿ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆ ಸ್ಥಗಿಗೊಳ್ಳಲಿದೆ ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ ಹೇಳಿದ್ದಾರೆ.

ಇದುವರೆಗಿನ ತಮ್ಮ ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 100 ಜನರು ಕೋಟ್ಯಾದಿಪತಿಗಳು, ಕಾರ್ಪೋರೇಟ್ ದೈತ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಆಂಡರ್ನಸ್ ಮೆಲುಕು ಹಾಕಿದ್ದಾರೆ. “ನಾವು ಅಲುಗಾಡಿಸಬೇಕು ಎಂದಿದ್ದ ಕೆಲವು ಸಾಮ್ರಾಜ್ಯಗಳನ್ನು ಅಲುಗಾಡಿಸಿದ್ದೇವೆ” ಎಂದಿದ್ದಾರೆ.

ಮುಂದಿನ ಆರು ತಿಂಗಳಲ್ಲಿ ನಾವು ಹೇಗೆ ಸಂಶೋಧನೆಗಳನ್ನು ಮಾಡುತ್ತೇವೆ. ಹೇಗೆ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ ಎಂಬುವುದರ ಬಗ್ಗೆ ಸರಣಿ ವಿಡಿಯೋ ಮತ್ತು ಇತರ ರೀತಿಯಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

ಕಂಪನಿ ಮುಚ್ಚುವ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...