Homeಮುಖಪುಟಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಅದಾನಿ ಸೇರಿದಂತೆ ಕಾರ್ಪೋರೇಟ್ ದೈತ್ಯರ ಅಕ್ರಮ ಬಯಲಿಗೆಳೆದಿದ್ದ ಸಂಸ್ಥೆ

- Advertisement -
- Advertisement -

ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

“ನಾವು ಮುನ್ನಡೆಸುತ್ತಿದ್ದ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಾಗಾಗಿ ಸಂಸ್ಥೆಯನ್ನು ವಿಸರ್ಜಿಸುತ್ತೇವೆ ಎಂದು ಹಿಂಡನ್‌ಬರ್ಗ್ ಸಂಸ್ಥಾಪಕ ನೇಟ್ ಆಂಡರ್ಸನ್ ಬುಧವಾರ (ಜ.15) ಹೇಳಿದ್ದಾರೆ.

ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನೇಟ್ ಆಂಡರ್ಸನ್ ಪ್ರಕಟಣೆ

ನೇಟ್ ಆಂಡರ್ಸನ್ ಅವರ ಸಂಪೂರ್ಣ ಹೇಳಿಕೆ ಇಲ್ಲಿದೆ 

2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್‌ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.

2023ರಲ್ಲಿ ಭಾರತೀಯ ಸಂಘಟಿತ ಸಂಸ್ಥೆಗಳ ವಿರುದ್ಧ ಹಿಂಡನ್‌ಬರ್ಗ್ ವರದಿ ಪ್ರಕಟಿಸಿತ್ತು. ಅದಾನಿ ಗ್ರೂಪ್ ಕಡಲಾಚೆಯ ತೆರಿಗೆಳನ್ನು ಅಸಮರ್ಪಕವಾಗಿ ಬಳಕೆ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ, ಈ ಆರೋಪವನ್ನು ಅದಾನಿ ಗ್ರೂಪ್ ನಿರಾಕರಿಸಿತ್ತು.

ಅದಾನಿ ಗ್ರೂಪ್‌ ತನ್ನ ಕಂಪನಿಯ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್‌ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಪಾಲು ಹೊಂದಿದ್ದಾರೆ ಎಂದು ಹಿಂಡನ್‌ಬರ್ಗ್ 2024ರಲ್ಲಿ ಆರೋಪ ಮಾಡಿತ್ತು. ಇದು ಷೇರುಪೇಟೆಯಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್‌ ಷೇರುಗಳಲ್ಲಿ ಭಾರೀ ಕುಸಿತ ಉಂಟಾಗಿತ್ತು.

ಈ ನಡುವೆ 2024ರ ನವೆಂಬರ್‌ನಲ್ಲಿ ಬಹುಕೋಟಿ ಡಾಲರ್‌ ಲಂಚ ಮತ್ತು ವಂಚನೆ ಆರೋಪಿಸಿ ನ್ಯೂಯಾರ್ಕ್‌ನಲ್ಲಿ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಸೇರಿದಂತೆ ಹಲವರ ವಿರುದ್ಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದರು.

ಭಾರತಕ್ಕೆ ಸಂಬಂಧಪಟ್ಟಂತೆ ಅದಾನಿ ವಿರುದ್ದ ಹಿಂಡನ್‌ಬರ್ಗ್ ಮಾಡಿದ್ದ ಎರಡು ಪ್ರಮುಖ ಆರೋಪಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದಾನಿ ಕಂಪನಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಭಾರತದಲ್ಲಿ ಆಡಳಿತ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಒಕ್ಕೂಟ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ನಡುವೆ ತೀವ್ರ ತಿಕ್ಕಾಟ ನಡೆದಿತ್ತು.

ಬಿಜೆಪಿ ಮತ್ತು ಸಂಘ ಪರಿವಾರದ ಹಿಂದುತ್ವ ಸಂಘಟನೆಗಳು ಆದಾನಿ ವಿರುದ್ದ ಹಿಂಡನ್‌ಬರ್ಗ್‌ ಆರೋಪ ಭಾರತ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಹಿಂಡನ್‌ಬರ್ಗ್ ಅನ್ನು ಬೆಂಬಲಿಸಿದ್ದ ಪ್ರತಿಪಕ್ಷಗಳ ವಿರುದ್ದ ದೇಶದ್ರೋಹದ ಆರೋಪ ಮಾಡಿತ್ತು.

ಹಿಂಡನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಬಯಲಿಗೆಳೆದ ಕಾರ್ಪೋರೇಟ್ ಕಂಪನಿಗಳ ಅಕ್ರಮಗಳಲ್ಲಿಎಲೆಕ್ಟ್ರಿಕ್ ಟ್ರಕ್ ತಯಾರಕ ಕಂಪನಿ ನಿಕೋಲಾ ವಿರುದ್ಧದ ಪ್ರಕರಣವೂ ಒಂದು. ನಿಕೋಲಾ ತನ್ನ ತಂತ್ರಜ್ಞಾನದ ಸ್ಥಿತಿಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು 2020ರಲ್ಲಿ ಹಿಂಡನ್‌ಬರ್ಗ್ ಆರೋಪಿಸಿತ್ತು.

ಪರಿಣಾಮ, ನಿಕೋಲಾ ಕಂಪನಿಯ ಮೇಲೆ ಕ್ರಿಮಿನಲ್ ವಂಚನೆ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯು ಯುಎಸ್‌ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್‌ಗೆ 125 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿತ್ತು. ಇದು ಹಿಂಡನ್‌ಬರ್ಗ್‌ನ ಯಶಸ್ವಿ ವರದಿ ಎಂದು ಪರಿಗಣಿಸಲಾಗಿದೆ.

ಹಿಂಡೆನ್‌ಬರ್ಗ್ ವರದಿಯು ವಂಚನೆ ಆರೋಪ ಹೊರಿಸಿದ ನಂತರ ಅದಾನಿ ಗ್ರೂಪ್ 2023 ರಲ್ಲಿ ತನ್ನ ಮಾರುಕಟ್ಟೆ ಮೌಲ್ಯದಿಂದ 150 ಬಿಲಿಯನ್ ಡಾಲರ್ ಕಳೆದುಕೊಂಡಿತ್ತು.

ಬಹಳ ಕಡಿಮೆ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ ದೈತ್ಯ ಕಾರ್ಪೋರೇಟ್ ಕಂಪನಿಗಳ ಅಕ್ರಮ ಬಯಲಿಗೆಳೆದು, ಅವರನ್ನು ಎದುರು ಹಾಕಿಕೊಂಡಿರುವ ಹಿಂಡನ್‌ಬರ್ಗ್ ಹಠಾತ್ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಏಕೆ ಎಂಬುವುದು ಸ್ಪಷ್ಟವಾಗಿಲ್ಲ.

ಆದರೆ, ಮುಂದಿನ ವಾರ ಅಮೆರಿದಲ್ಲಿ ಬೈಡೆನ್‌ ಆಡಳಿತ ಕೊನೆಗೊಂಡು ಪ್ರಧಾನಿ ಮೋದಿಯವರ ಆಪ್ತ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷ ಹುದ್ದೆ ಅಲಂಕರಿಸಲಿದ್ದಾರೆ. ಅದಕ್ಕೂ ಮುನ್ನ ಹಿಂಡನ್‌ಬರ್ಗ್ ಸ್ಥಗಿತಕ್ಕೆ ಮುಂದಾಗಿರುವುದು ಗಮನಾರ್ಹ.

ಕಂಪನಿ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆ ಸ್ಥಗಿಗೊಳ್ಳಲಿದೆ ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ ಹೇಳಿದ್ದಾರೆ.

ಇದುವರೆಗಿನ ತಮ್ಮ ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 100 ಜನರು ಕೋಟ್ಯಾದಿಪತಿಗಳು, ಕಾರ್ಪೋರೇಟ್ ದೈತ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಆಂಡರ್ನಸ್ ಮೆಲುಕು ಹಾಕಿದ್ದಾರೆ. “ನಾವು ಅಲುಗಾಡಿಸಬೇಕು ಎಂದಿದ್ದ ಕೆಲವು ಸಾಮ್ರಾಜ್ಯಗಳನ್ನು ಅಲುಗಾಡಿಸಿದ್ದೇವೆ” ಎಂದಿದ್ದಾರೆ.

ಮುಂದಿನ ಆರು ತಿಂಗಳಲ್ಲಿ ನಾವು ಹೇಗೆ ಸಂಶೋಧನೆಗಳನ್ನು ಮಾಡುತ್ತೇವೆ. ಹೇಗೆ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ ಎಂಬುವುದರ ಬಗ್ಗೆ ಸರಣಿ ವಿಡಿಯೋ ಮತ್ತು ಇತರ ರೀತಿಯಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

ಕಂಪನಿ ಮುಚ್ಚುವ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...