Homeಮುಖಪುಟಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಹಿಂಡೆನ್‌ಬರ್ಗ್ ರಿಸರ್ಚ್ ಕಾರ್ಯಾಚರಣೆ ಸ್ಥಗಿತ : ಸಂಸ್ಥಾಪಕ ಆಂಡರ್ಸನ್ ಘೋಷಣೆ

ಅದಾನಿ ಸೇರಿದಂತೆ ಕಾರ್ಪೋರೇಟ್ ದೈತ್ಯರ ಅಕ್ರಮ ಬಯಲಿಗೆಳೆದಿದ್ದ ಸಂಸ್ಥೆ

- Advertisement -
- Advertisement -

ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್‌ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

“ನಾವು ಮುನ್ನಡೆಸುತ್ತಿದ್ದ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಹಾಗಾಗಿ ಸಂಸ್ಥೆಯನ್ನು ವಿಸರ್ಜಿಸುತ್ತೇವೆ ಎಂದು ಹಿಂಡನ್‌ಬರ್ಗ್ ಸಂಸ್ಥಾಪಕ ನೇಟ್ ಆಂಡರ್ಸನ್ ಬುಧವಾರ (ಜ.15) ಹೇಳಿದ್ದಾರೆ.

ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನೇಟ್ ಆಂಡರ್ಸನ್ ಪ್ರಕಟಣೆ

ನೇಟ್ ಆಂಡರ್ಸನ್ ಅವರ ಸಂಪೂರ್ಣ ಹೇಳಿಕೆ ಇಲ್ಲಿದೆ 

2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್‌ಬರ್ಗ್‌, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್‌ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.

2023ರಲ್ಲಿ ಭಾರತೀಯ ಸಂಘಟಿತ ಸಂಸ್ಥೆಗಳ ವಿರುದ್ಧ ಹಿಂಡನ್‌ಬರ್ಗ್ ವರದಿ ಪ್ರಕಟಿಸಿತ್ತು. ಅದಾನಿ ಗ್ರೂಪ್ ಕಡಲಾಚೆಯ ತೆರಿಗೆಳನ್ನು ಅಸಮರ್ಪಕವಾಗಿ ಬಳಕೆ ಮಾಡುತ್ತಿದೆ ಎಂದು ಆರೋಪಿಸಿತ್ತು. ಆದರೆ, ಈ ಆರೋಪವನ್ನು ಅದಾನಿ ಗ್ರೂಪ್ ನಿರಾಕರಿಸಿತ್ತು.

ಅದಾನಿ ಗ್ರೂಪ್‌ ತನ್ನ ಕಂಪನಿಯ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್‌ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಪಾಲು ಹೊಂದಿದ್ದಾರೆ ಎಂದು ಹಿಂಡನ್‌ಬರ್ಗ್ 2024ರಲ್ಲಿ ಆರೋಪ ಮಾಡಿತ್ತು. ಇದು ಷೇರುಪೇಟೆಯಲ್ಲಿ ಸಾಕಷ್ಟು ಸಂಚಲನ ಉಂಟು ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್‌ ಷೇರುಗಳಲ್ಲಿ ಭಾರೀ ಕುಸಿತ ಉಂಟಾಗಿತ್ತು.

ಈ ನಡುವೆ 2024ರ ನವೆಂಬರ್‌ನಲ್ಲಿ ಬಹುಕೋಟಿ ಡಾಲರ್‌ ಲಂಚ ಮತ್ತು ವಂಚನೆ ಆರೋಪಿಸಿ ನ್ಯೂಯಾರ್ಕ್‌ನಲ್ಲಿ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಸೇರಿದಂತೆ ಹಲವರ ವಿರುದ್ಧ ಚಾರ್ಜ್‌ಶೀಟ್‌ ದಾಖಲಿಸಲಾಗಿದೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದರು.

ಭಾರತಕ್ಕೆ ಸಂಬಂಧಪಟ್ಟಂತೆ ಅದಾನಿ ವಿರುದ್ದ ಹಿಂಡನ್‌ಬರ್ಗ್ ಮಾಡಿದ್ದ ಎರಡು ಪ್ರಮುಖ ಆರೋಪಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದಾನಿ ಕಂಪನಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಭಾರತದಲ್ಲಿ ಆಡಳಿತ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಒಕ್ಕೂಟ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ನಡುವೆ ತೀವ್ರ ತಿಕ್ಕಾಟ ನಡೆದಿತ್ತು.

ಬಿಜೆಪಿ ಮತ್ತು ಸಂಘ ಪರಿವಾರದ ಹಿಂದುತ್ವ ಸಂಘಟನೆಗಳು ಆದಾನಿ ವಿರುದ್ದ ಹಿಂಡನ್‌ಬರ್ಗ್‌ ಆರೋಪ ಭಾರತ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಹಿಂಡನ್‌ಬರ್ಗ್ ಅನ್ನು ಬೆಂಬಲಿಸಿದ್ದ ಪ್ರತಿಪಕ್ಷಗಳ ವಿರುದ್ದ ದೇಶದ್ರೋಹದ ಆರೋಪ ಮಾಡಿತ್ತು.

ಹಿಂಡನ್‌ಬರ್ಗ್ ಜಾಗತಿಕ ಮಟ್ಟದಲ್ಲಿ ಬಯಲಿಗೆಳೆದ ಕಾರ್ಪೋರೇಟ್ ಕಂಪನಿಗಳ ಅಕ್ರಮಗಳಲ್ಲಿಎಲೆಕ್ಟ್ರಿಕ್ ಟ್ರಕ್ ತಯಾರಕ ಕಂಪನಿ ನಿಕೋಲಾ ವಿರುದ್ಧದ ಪ್ರಕರಣವೂ ಒಂದು. ನಿಕೋಲಾ ತನ್ನ ತಂತ್ರಜ್ಞಾನದ ಸ್ಥಿತಿಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು 2020ರಲ್ಲಿ ಹಿಂಡನ್‌ಬರ್ಗ್ ಆರೋಪಿಸಿತ್ತು.

ಪರಿಣಾಮ, ನಿಕೋಲಾ ಕಂಪನಿಯ ಮೇಲೆ ಕ್ರಿಮಿನಲ್ ವಂಚನೆ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯು ಯುಎಸ್‌ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಕಮಿಷನ್‌ಗೆ 125 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿತ್ತು. ಇದು ಹಿಂಡನ್‌ಬರ್ಗ್‌ನ ಯಶಸ್ವಿ ವರದಿ ಎಂದು ಪರಿಗಣಿಸಲಾಗಿದೆ.

ಹಿಂಡೆನ್‌ಬರ್ಗ್ ವರದಿಯು ವಂಚನೆ ಆರೋಪ ಹೊರಿಸಿದ ನಂತರ ಅದಾನಿ ಗ್ರೂಪ್ 2023 ರಲ್ಲಿ ತನ್ನ ಮಾರುಕಟ್ಟೆ ಮೌಲ್ಯದಿಂದ 150 ಬಿಲಿಯನ್ ಡಾಲರ್ ಕಳೆದುಕೊಂಡಿತ್ತು.

ಬಹಳ ಕಡಿಮೆ ಅವಧಿಯಲ್ಲಿ ಜಾಗತಿಕ ಮಟ್ಟದಲ್ಲಿ ದೈತ್ಯ ಕಾರ್ಪೋರೇಟ್ ಕಂಪನಿಗಳ ಅಕ್ರಮ ಬಯಲಿಗೆಳೆದು, ಅವರನ್ನು ಎದುರು ಹಾಕಿಕೊಂಡಿರುವ ಹಿಂಡನ್‌ಬರ್ಗ್ ಹಠಾತ್ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಏಕೆ ಎಂಬುವುದು ಸ್ಪಷ್ಟವಾಗಿಲ್ಲ.

ಆದರೆ, ಮುಂದಿನ ವಾರ ಅಮೆರಿದಲ್ಲಿ ಬೈಡೆನ್‌ ಆಡಳಿತ ಕೊನೆಗೊಂಡು ಪ್ರಧಾನಿ ಮೋದಿಯವರ ಆಪ್ತ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷ ಹುದ್ದೆ ಅಲಂಕರಿಸಲಿದ್ದಾರೆ. ಅದಕ್ಕೂ ಮುನ್ನ ಹಿಂಡನ್‌ಬರ್ಗ್ ಸ್ಥಗಿತಕ್ಕೆ ಮುಂದಾಗಿರುವುದು ಗಮನಾರ್ಹ.

ಕಂಪನಿ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆ ಸ್ಥಗಿಗೊಳ್ಳಲಿದೆ ಎಂದು ಸಂಸ್ಥಾಪಕ ನೇಟ್ ಆಂಡರ್ಸನ್ ಹೇಳಿದ್ದಾರೆ.

ಇದುವರೆಗಿನ ತಮ್ಮ ಕಾರ್ಯಾಚರಣೆಯ ಅವಧಿಯಲ್ಲಿ ಕನಿಷ್ಠ 100 ಜನರು ಕೋಟ್ಯಾದಿಪತಿಗಳು, ಕಾರ್ಪೋರೇಟ್ ದೈತ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಆಂಡರ್ನಸ್ ಮೆಲುಕು ಹಾಕಿದ್ದಾರೆ. “ನಾವು ಅಲುಗಾಡಿಸಬೇಕು ಎಂದಿದ್ದ ಕೆಲವು ಸಾಮ್ರಾಜ್ಯಗಳನ್ನು ಅಲುಗಾಡಿಸಿದ್ದೇವೆ” ಎಂದಿದ್ದಾರೆ.

ಮುಂದಿನ ಆರು ತಿಂಗಳಲ್ಲಿ ನಾವು ಹೇಗೆ ಸಂಶೋಧನೆಗಳನ್ನು ಮಾಡುತ್ತೇವೆ. ಹೇಗೆ ಅಕ್ರಮಗಳನ್ನು ಬಯಲಿಗೆಳೆಯುತ್ತೇವೆ ಎಂಬುವುದರ ಬಗ್ಗೆ ಸರಣಿ ವಿಡಿಯೋ ಮತ್ತು ಇತರ ರೀತಿಯಲ್ಲಿ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಆಂಡರ್ಸನ್ ತಿಳಿಸಿದ್ದಾರೆ.

ಕಂಪನಿ ಮುಚ್ಚುವ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಬೆದರಿಕೆ ಅಥವಾ ವೈಯಕ್ತಿಕ ಸಮಸ್ಯೆ ಇಲ್ಲ ಎಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...