Homeಕರ್ನಾಟಕಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

ಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಹಿಂದೆ ಹೇರಿಕೆಯ ವಿರುದ್ಧ ಇದೇ ಜೂನ್ 6ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದು ನಡೆಯುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಅದು ನಡೆಯಲಿಲ್ಲ. ತಮಿಳುನಾಡು ಇಂತಹ ವಿಚಾರ ಬಂದಾಗ, ಅಪೂರ್ವವಾದ ಒಗ್ಗಟ್ಟನ್ನು ಕಾಪಾಡಿಕೊಂಡು ಕೇಂದ್ರಕ್ಕೆ ಮುಟ್ಟಿಸಬೇಕಾದ ಸಂದೇಶ ಮುಟ್ಟಿಸಿಯೇ ತೀರುತ್ತದೆ. ಕರ್ನಾಟಕದಲ್ಲಿ ಹೀಗಾಗದ್ದಕ್ಕೆ ಕಾರಣವೇನು ಎಂಬುದರ ಅವಲೋಕನದ ಅಗತ್ಯವಿದೆ. ಅದೇನೇ ಇರಲಿ, ಜೂನ್ 6ರ ಪ್ರತಿಭಟನೆ ಏಕೆ ನಡೆಯಲಿಲ್ಲ ಎಂಬುದನ್ನು ನೋಡೋಣ. ಸ್ವತಃ ಈ ವರದಿಗಾರ ಹಾಜರಿದ್ದ ಪೂರ್ವಭಾವಿ ಸಭೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜೂನ್ 4, ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳೂ ಮತ್ತು ಕನ್ನಡ ಅಭಿಮಾನಿಗಳ ಸಭೆ ಕರೆದಿದ್ದರು. ಕರ್ನಾಟಕ ಕೈಗಾರಿಕ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟವು ಹಿಂದಿ ಹೇರಿಕೆಯ ವಿರುದ್ಧ 6ರಂದು ಪ್ರತಿಭಟನೆ ಮಾಡಬೇಕೆಂಬ ಕಾರಣಕ್ಕೇ ಕರೆದಿದ್ದ ಪೂರ್ವಭಾವಿ ಸಭೆ ಅದಾಗಿತ್ತು. ಈ ಸಭೆಯು ಹಿರಿಯರಾದ ತಿಮ್ಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕರ್ನಾಟಕ ಕೈಗಾರಿಕೋದ್ಯಮ ಸಂಘಟನೆಗಳ ಮುಖಂಡರಾದ ಶ್ರೀಧರ್, ಕನ್ನಡ ಸಂಘದ ಭೀಮಶಂಕರ್ ಪಾಟೀಲ್ ಭಾಗವಹಿಸಿದ್ದರು.

ದಲಿತ ಕವಿ ಸಿದ್ದಲಿಂಗಯ್ಯನವರು ಮಾತನಾಡಿ ಹಿಂದಿ ಹೇರಿಕೆಯ ಕುರಿತ ಭಾಗವನ್ನು ಕೇಂದ್ರ ಸರ್ಕಾರವು ಮೊನ್ನೆ ವಾಪಸ್ಸು ತೆಗೆದುಕೊಂಡಿದ್ದೆವೆ ಎಂದಿದ್ದಾರೆ. ಆದರೆ ಅವರನ್ನು ನಾವು ನಂಬುವ ಹಾಗಿಲ್ಲ. ದಕ್ಷಿಣದಲ್ಲಿ ಕಪ್ಪು ಜನರಿದ್ದಾರೆ ನಾವು ಸಹಿಸಿಕೊಂಡಿಲ್ಲವೇ ಎಂದು ಕೇಳುವ ಉತ್ತರ ಭಾರತದ ರಾಜಕಾರಣಿಗಳಿದ್ದಾರೆ. ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ಹೋಗಿ ದೇಶಗಳೇ ಒಡೆದಿರುವ ಉದಾಹರಣೆಗಳಿವೆ. ನಮ್ಮಲ್ಲಿ ಹಾಗಾಗಬಾರದು. ಹಾಗಾಗಿ 6ನೇ ತಾರೀಖು ನಡೆಯುವ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಹೇಳಿದರು.

ಎಸ್.ಜಿ.ಸಿದ್ದರಾಮಯ್ಯನವರು ಮಾತನಾಡಿ ದಕ್ಷಿಣ ರಾಜ್ಯದ ಭಾಷೆಗಳ ಮೇಲೆ ಹಿಡಿತ ಸಾಧಿಸಲು ಪದೇ ಪದೇ ಈ ರೀತಿ ನಡೆಯುತ್ತಿದೆ. ಇದಕ್ಕೆ ಸರಿಯಾದ ಬುದ್ಧಿ ಕಲಿಸಬೇಕಾದರೆ ಪ್ರತಿಭಟನೆ ಮಾಡಲೇಬೇಕು ಮತ್ತು ಒಕ್ಕೂಟಕ್ಕೆ ಗೌರವ ಬರಬೇಕು. ದೇಶ ಛಿದ್ರವಾಗಬಾರದು ಎಂದರೆ ಎಲ್ಲಾ ಭಾಷೆಗಳನ್ನು ಗೌರವಿಸುವುದು ಕಲಿಯಬೇಕು ಎಂದು ಹೇಳಿ ಕೇಂದ್ರದ ನೀತಿಗಳನ್ನು ಖಂಡಿಸಿದರು. 6ರ ಪ್ರತಿಭಟನೆಗೆ ಮಾಡಬೇಕಾದ ತಯಾರಿಯನ್ನು ಮಾಡಿಕೊಂಡು ಮುನ್ನುಗ್ಗೋಣ ಎಂದರು.

ಭೀಮಶಂಕರ್ ಪಾಟೀಲ್, ಅರುಣ್ ಜಾವಗಲ್, ಕ.ಸಾ.ಪ ಮಾಯಣ್ಣ ಮತ್ತು ಅಲ್ಲಿ ಬಂದಿದ್ದ ಸಾಕಷ್ಟು ಜನ ಪ್ರತಿಭಟನೆ ಮಾಡಬೇಕೆಂದರು. ಮತ್ತು ಇದರ ವಿರುದ್ಧ ಹಿಂದಿ ವಿರೋಧಿ ಕನ್ನಡ ಒಕ್ಕೂಟ ಮಾಡಿಕೊಂಡು ದೀರ್ಘಕಾಲದ ಹೋರಾಟ ಮಾಡಬೇಕೆಂಬುದೂ ಅಲ್ಲಿನ ಬಹುತೇಕರ ಅಭಿಪ್ರಾಯವಾಗಿತ್ತು. ಪುಸ್ತಕ ಪ್ರಾಧಿಕಾರದ ಅಧಕ್ಷತೆ ವಸುಂಧರ ಭೂಪತಿಯವರು ಮಾತ್ರ ‘ಹಿಂದಿ ಹೇರಿಕೆಯ ವಿರುದ್ಧ ಎಲ್ಲಾ ಕಡೆ ಧ್ವನಿ ಬಂದಿದ್ದಕ್ಕಾಗಿ ವಾಪಸ್ಸು ತೆಗೆದುಕೊಂಡಿದ್ದಾರೆ ಹಾಗಾಗಿ ಪ್ರತಿಭಟನೆ ನಂತರ ಮಾಡೋಣ’ ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರು ಮಾತನಾಡಿದರು. ಅವರ ಮಾತಿನಲ್ಲಿ ಹಿಂದಿ ಹೇರಿಕೆಯ ಕುರಿತ ಯಾವ ಸಿಟ್ಟೂ ಇರಲಿಲ್ಲ. ಸದ್ಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ವೆಬ್ ಸೈಟ್‍ನಿಂದ ಇದನ್ನ ತೆಗೆದಿರುವುದರಿಂದ ಪ್ರತಿಭಟನೆಯ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದರ ಬಗ್ಗೆ ಹಲವರು ಅಸಮಾಧಾನಗೊಂಡು ಪ್ರಶ್ನಿಸಿದಾಗ, ಕಾರಣ ಇಲ್ಲದೇ ಪ್ರತಿಭಟನೆ ಬೇಡ ಎಂದು ಹೇಳಿ ಮುಗಿಸಿದರು. ಕೆಲವರು ಅವರ ಬೆಂಬಲಕ್ಕೆ ನಿಂತರು. ಕೊನೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಿಮ್ಮಯ್ಯನವರು ಕೂಡ ಮನು ಬಳಿಗಾರ್ ಅಭಿಪ್ರಾಯವನ್ನೇ ಮುಂದಿಟ್ಟರು.

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ನಡೆದ ಸಭೆಯಾಗಿದ್ದು, ಜೊತೆಗೆ ಕಸಾಪ ರಾಜ್ಯಾಧ್ಯಕ್ಷರ ಮಾತಿಗೆ ಹೆಚ್ಚಿನ ಮಹತ್ವವಿರುತ್ತದೆ. ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಇದರ ಅಧ್ಯಕ್ಷರಾಗಿರುವವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕೆಂಬುದು ಸಭೆಯಿಂದ ಹೊರಗೆ ಬಂದ ನಂತರ ಹೆಚ್ಚಿನವರ ಅನಿಸಿಕೆಯಾಗಿತ್ತು. ಏಕೆಂದರೆ, ಇದು ಕೇವಲ ಹಿಂದಿ ಹೇರಿಕೆಯ ಪ್ರಶ್ನೆಯಾಗಿರದೇ, ಈಗಾಗಲೇ ಕರ್ನಾಟಕದ ನೆಲದ ಎರಡು ಬ್ಯಾಂಕುಗಳು (ಮೈಸೂರು ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್) ನಷ್ಟದಲ್ಲಿರುವ ಬೇರೆ ರಾಜ್ಯಗಳ ಬ್ಯಾಂಕುಗಳಲ್ಲಿ ವಿಲೀನವಾಗಬೇಕಾಗಿ ಬಂದಿದೆ. ಜಿಎಸ್‍ಟಿಯ ನಂತರ ರಾಜ್ಯಗಳು ಆರ್ಥಿಕವಾಗಿಯೂ ಕೇಂದ್ರದ ಮರ್ಜಿಯಲ್ಲಿರಬೇಕಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ನಡೆಯಬಹುದಾಗಿದ್ದ ಪ್ರತಿಭಟನೆಯು ಸರಿಯಾದ ಸಂದೇಶವನ್ನೇ ನೀಡುತ್ತಿತ್ತು.

ಆದರೆ, ಅದಾಗದಂತೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನು ಬಳಿಗಾರ್. ಉಳಿದ ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮುಂದುವರೆಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನಿಲ್ ಕುಮಾರ್ ಚಿಕ್ಕ ದಾಳವಟ್ಟ ಅವರ ಸುದ್ದಿಗೆ ಕುತೂಹಲ ಕೆರಳಿಸುವ ಶೀರ್ಷಿಕೆ ಕೊಟ್ಟು ಅದಕ್ಕೆ ಉತ್ತರ ಕೊಟ್ಟಿಲ್ಲ.
    ಹಿಂದಿ ಹೇರಿಕೆ ವಿರುದ್ಧ ಕನ್ನಡ ಜನ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆ ಉಂಟಾಗಿದೆ. ಆ ವಿಷಯಗಳನ್ನು ಚೆನ್ನಾಗಿ ತಿಳಿಸಿದ್ದಾರೆ.
    ಧನ್ಯವಾದಗಳು ಸರ್.

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...