Homeಕರ್ನಾಟಕಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

ಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಹಿಂದೆ ಹೇರಿಕೆಯ ವಿರುದ್ಧ ಇದೇ ಜೂನ್ 6ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದು ನಡೆಯುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಅದು ನಡೆಯಲಿಲ್ಲ. ತಮಿಳುನಾಡು ಇಂತಹ ವಿಚಾರ ಬಂದಾಗ, ಅಪೂರ್ವವಾದ ಒಗ್ಗಟ್ಟನ್ನು ಕಾಪಾಡಿಕೊಂಡು ಕೇಂದ್ರಕ್ಕೆ ಮುಟ್ಟಿಸಬೇಕಾದ ಸಂದೇಶ ಮುಟ್ಟಿಸಿಯೇ ತೀರುತ್ತದೆ. ಕರ್ನಾಟಕದಲ್ಲಿ ಹೀಗಾಗದ್ದಕ್ಕೆ ಕಾರಣವೇನು ಎಂಬುದರ ಅವಲೋಕನದ ಅಗತ್ಯವಿದೆ. ಅದೇನೇ ಇರಲಿ, ಜೂನ್ 6ರ ಪ್ರತಿಭಟನೆ ಏಕೆ ನಡೆಯಲಿಲ್ಲ ಎಂಬುದನ್ನು ನೋಡೋಣ. ಸ್ವತಃ ಈ ವರದಿಗಾರ ಹಾಜರಿದ್ದ ಪೂರ್ವಭಾವಿ ಸಭೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜೂನ್ 4, ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳೂ ಮತ್ತು ಕನ್ನಡ ಅಭಿಮಾನಿಗಳ ಸಭೆ ಕರೆದಿದ್ದರು. ಕರ್ನಾಟಕ ಕೈಗಾರಿಕ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟವು ಹಿಂದಿ ಹೇರಿಕೆಯ ವಿರುದ್ಧ 6ರಂದು ಪ್ರತಿಭಟನೆ ಮಾಡಬೇಕೆಂಬ ಕಾರಣಕ್ಕೇ ಕರೆದಿದ್ದ ಪೂರ್ವಭಾವಿ ಸಭೆ ಅದಾಗಿತ್ತು. ಈ ಸಭೆಯು ಹಿರಿಯರಾದ ತಿಮ್ಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕರ್ನಾಟಕ ಕೈಗಾರಿಕೋದ್ಯಮ ಸಂಘಟನೆಗಳ ಮುಖಂಡರಾದ ಶ್ರೀಧರ್, ಕನ್ನಡ ಸಂಘದ ಭೀಮಶಂಕರ್ ಪಾಟೀಲ್ ಭಾಗವಹಿಸಿದ್ದರು.

ದಲಿತ ಕವಿ ಸಿದ್ದಲಿಂಗಯ್ಯನವರು ಮಾತನಾಡಿ ಹಿಂದಿ ಹೇರಿಕೆಯ ಕುರಿತ ಭಾಗವನ್ನು ಕೇಂದ್ರ ಸರ್ಕಾರವು ಮೊನ್ನೆ ವಾಪಸ್ಸು ತೆಗೆದುಕೊಂಡಿದ್ದೆವೆ ಎಂದಿದ್ದಾರೆ. ಆದರೆ ಅವರನ್ನು ನಾವು ನಂಬುವ ಹಾಗಿಲ್ಲ. ದಕ್ಷಿಣದಲ್ಲಿ ಕಪ್ಪು ಜನರಿದ್ದಾರೆ ನಾವು ಸಹಿಸಿಕೊಂಡಿಲ್ಲವೇ ಎಂದು ಕೇಳುವ ಉತ್ತರ ಭಾರತದ ರಾಜಕಾರಣಿಗಳಿದ್ದಾರೆ. ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ಹೋಗಿ ದೇಶಗಳೇ ಒಡೆದಿರುವ ಉದಾಹರಣೆಗಳಿವೆ. ನಮ್ಮಲ್ಲಿ ಹಾಗಾಗಬಾರದು. ಹಾಗಾಗಿ 6ನೇ ತಾರೀಖು ನಡೆಯುವ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಹೇಳಿದರು.

ಎಸ್.ಜಿ.ಸಿದ್ದರಾಮಯ್ಯನವರು ಮಾತನಾಡಿ ದಕ್ಷಿಣ ರಾಜ್ಯದ ಭಾಷೆಗಳ ಮೇಲೆ ಹಿಡಿತ ಸಾಧಿಸಲು ಪದೇ ಪದೇ ಈ ರೀತಿ ನಡೆಯುತ್ತಿದೆ. ಇದಕ್ಕೆ ಸರಿಯಾದ ಬುದ್ಧಿ ಕಲಿಸಬೇಕಾದರೆ ಪ್ರತಿಭಟನೆ ಮಾಡಲೇಬೇಕು ಮತ್ತು ಒಕ್ಕೂಟಕ್ಕೆ ಗೌರವ ಬರಬೇಕು. ದೇಶ ಛಿದ್ರವಾಗಬಾರದು ಎಂದರೆ ಎಲ್ಲಾ ಭಾಷೆಗಳನ್ನು ಗೌರವಿಸುವುದು ಕಲಿಯಬೇಕು ಎಂದು ಹೇಳಿ ಕೇಂದ್ರದ ನೀತಿಗಳನ್ನು ಖಂಡಿಸಿದರು. 6ರ ಪ್ರತಿಭಟನೆಗೆ ಮಾಡಬೇಕಾದ ತಯಾರಿಯನ್ನು ಮಾಡಿಕೊಂಡು ಮುನ್ನುಗ್ಗೋಣ ಎಂದರು.

ಭೀಮಶಂಕರ್ ಪಾಟೀಲ್, ಅರುಣ್ ಜಾವಗಲ್, ಕ.ಸಾ.ಪ ಮಾಯಣ್ಣ ಮತ್ತು ಅಲ್ಲಿ ಬಂದಿದ್ದ ಸಾಕಷ್ಟು ಜನ ಪ್ರತಿಭಟನೆ ಮಾಡಬೇಕೆಂದರು. ಮತ್ತು ಇದರ ವಿರುದ್ಧ ಹಿಂದಿ ವಿರೋಧಿ ಕನ್ನಡ ಒಕ್ಕೂಟ ಮಾಡಿಕೊಂಡು ದೀರ್ಘಕಾಲದ ಹೋರಾಟ ಮಾಡಬೇಕೆಂಬುದೂ ಅಲ್ಲಿನ ಬಹುತೇಕರ ಅಭಿಪ್ರಾಯವಾಗಿತ್ತು. ಪುಸ್ತಕ ಪ್ರಾಧಿಕಾರದ ಅಧಕ್ಷತೆ ವಸುಂಧರ ಭೂಪತಿಯವರು ಮಾತ್ರ ‘ಹಿಂದಿ ಹೇರಿಕೆಯ ವಿರುದ್ಧ ಎಲ್ಲಾ ಕಡೆ ಧ್ವನಿ ಬಂದಿದ್ದಕ್ಕಾಗಿ ವಾಪಸ್ಸು ತೆಗೆದುಕೊಂಡಿದ್ದಾರೆ ಹಾಗಾಗಿ ಪ್ರತಿಭಟನೆ ನಂತರ ಮಾಡೋಣ’ ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರು ಮಾತನಾಡಿದರು. ಅವರ ಮಾತಿನಲ್ಲಿ ಹಿಂದಿ ಹೇರಿಕೆಯ ಕುರಿತ ಯಾವ ಸಿಟ್ಟೂ ಇರಲಿಲ್ಲ. ಸದ್ಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ವೆಬ್ ಸೈಟ್‍ನಿಂದ ಇದನ್ನ ತೆಗೆದಿರುವುದರಿಂದ ಪ್ರತಿಭಟನೆಯ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದರ ಬಗ್ಗೆ ಹಲವರು ಅಸಮಾಧಾನಗೊಂಡು ಪ್ರಶ್ನಿಸಿದಾಗ, ಕಾರಣ ಇಲ್ಲದೇ ಪ್ರತಿಭಟನೆ ಬೇಡ ಎಂದು ಹೇಳಿ ಮುಗಿಸಿದರು. ಕೆಲವರು ಅವರ ಬೆಂಬಲಕ್ಕೆ ನಿಂತರು. ಕೊನೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಿಮ್ಮಯ್ಯನವರು ಕೂಡ ಮನು ಬಳಿಗಾರ್ ಅಭಿಪ್ರಾಯವನ್ನೇ ಮುಂದಿಟ್ಟರು.

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ನಡೆದ ಸಭೆಯಾಗಿದ್ದು, ಜೊತೆಗೆ ಕಸಾಪ ರಾಜ್ಯಾಧ್ಯಕ್ಷರ ಮಾತಿಗೆ ಹೆಚ್ಚಿನ ಮಹತ್ವವಿರುತ್ತದೆ. ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಇದರ ಅಧ್ಯಕ್ಷರಾಗಿರುವವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕೆಂಬುದು ಸಭೆಯಿಂದ ಹೊರಗೆ ಬಂದ ನಂತರ ಹೆಚ್ಚಿನವರ ಅನಿಸಿಕೆಯಾಗಿತ್ತು. ಏಕೆಂದರೆ, ಇದು ಕೇವಲ ಹಿಂದಿ ಹೇರಿಕೆಯ ಪ್ರಶ್ನೆಯಾಗಿರದೇ, ಈಗಾಗಲೇ ಕರ್ನಾಟಕದ ನೆಲದ ಎರಡು ಬ್ಯಾಂಕುಗಳು (ಮೈಸೂರು ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್) ನಷ್ಟದಲ್ಲಿರುವ ಬೇರೆ ರಾಜ್ಯಗಳ ಬ್ಯಾಂಕುಗಳಲ್ಲಿ ವಿಲೀನವಾಗಬೇಕಾಗಿ ಬಂದಿದೆ. ಜಿಎಸ್‍ಟಿಯ ನಂತರ ರಾಜ್ಯಗಳು ಆರ್ಥಿಕವಾಗಿಯೂ ಕೇಂದ್ರದ ಮರ್ಜಿಯಲ್ಲಿರಬೇಕಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ನಡೆಯಬಹುದಾಗಿದ್ದ ಪ್ರತಿಭಟನೆಯು ಸರಿಯಾದ ಸಂದೇಶವನ್ನೇ ನೀಡುತ್ತಿತ್ತು.

ಆದರೆ, ಅದಾಗದಂತೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನು ಬಳಿಗಾರ್. ಉಳಿದ ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮುಂದುವರೆಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನಿಲ್ ಕುಮಾರ್ ಚಿಕ್ಕ ದಾಳವಟ್ಟ ಅವರ ಸುದ್ದಿಗೆ ಕುತೂಹಲ ಕೆರಳಿಸುವ ಶೀರ್ಷಿಕೆ ಕೊಟ್ಟು ಅದಕ್ಕೆ ಉತ್ತರ ಕೊಟ್ಟಿಲ್ಲ.
    ಹಿಂದಿ ಹೇರಿಕೆ ವಿರುದ್ಧ ಕನ್ನಡ ಜನ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆ ಉಂಟಾಗಿದೆ. ಆ ವಿಷಯಗಳನ್ನು ಚೆನ್ನಾಗಿ ತಿಳಿಸಿದ್ದಾರೆ.
    ಧನ್ಯವಾದಗಳು ಸರ್.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...