Homeಕರ್ನಾಟಕಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

ಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಹಿಂದೆ ಹೇರಿಕೆಯ ವಿರುದ್ಧ ಇದೇ ಜೂನ್ 6ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದು ನಡೆಯುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಅದು ನಡೆಯಲಿಲ್ಲ. ತಮಿಳುನಾಡು ಇಂತಹ ವಿಚಾರ ಬಂದಾಗ, ಅಪೂರ್ವವಾದ ಒಗ್ಗಟ್ಟನ್ನು ಕಾಪಾಡಿಕೊಂಡು ಕೇಂದ್ರಕ್ಕೆ ಮುಟ್ಟಿಸಬೇಕಾದ ಸಂದೇಶ ಮುಟ್ಟಿಸಿಯೇ ತೀರುತ್ತದೆ. ಕರ್ನಾಟಕದಲ್ಲಿ ಹೀಗಾಗದ್ದಕ್ಕೆ ಕಾರಣವೇನು ಎಂಬುದರ ಅವಲೋಕನದ ಅಗತ್ಯವಿದೆ. ಅದೇನೇ ಇರಲಿ, ಜೂನ್ 6ರ ಪ್ರತಿಭಟನೆ ಏಕೆ ನಡೆಯಲಿಲ್ಲ ಎಂಬುದನ್ನು ನೋಡೋಣ. ಸ್ವತಃ ಈ ವರದಿಗಾರ ಹಾಜರಿದ್ದ ಪೂರ್ವಭಾವಿ ಸಭೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜೂನ್ 4, ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳೂ ಮತ್ತು ಕನ್ನಡ ಅಭಿಮಾನಿಗಳ ಸಭೆ ಕರೆದಿದ್ದರು. ಕರ್ನಾಟಕ ಕೈಗಾರಿಕ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟವು ಹಿಂದಿ ಹೇರಿಕೆಯ ವಿರುದ್ಧ 6ರಂದು ಪ್ರತಿಭಟನೆ ಮಾಡಬೇಕೆಂಬ ಕಾರಣಕ್ಕೇ ಕರೆದಿದ್ದ ಪೂರ್ವಭಾವಿ ಸಭೆ ಅದಾಗಿತ್ತು. ಈ ಸಭೆಯು ಹಿರಿಯರಾದ ತಿಮ್ಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕರ್ನಾಟಕ ಕೈಗಾರಿಕೋದ್ಯಮ ಸಂಘಟನೆಗಳ ಮುಖಂಡರಾದ ಶ್ರೀಧರ್, ಕನ್ನಡ ಸಂಘದ ಭೀಮಶಂಕರ್ ಪಾಟೀಲ್ ಭಾಗವಹಿಸಿದ್ದರು.

ದಲಿತ ಕವಿ ಸಿದ್ದಲಿಂಗಯ್ಯನವರು ಮಾತನಾಡಿ ಹಿಂದಿ ಹೇರಿಕೆಯ ಕುರಿತ ಭಾಗವನ್ನು ಕೇಂದ್ರ ಸರ್ಕಾರವು ಮೊನ್ನೆ ವಾಪಸ್ಸು ತೆಗೆದುಕೊಂಡಿದ್ದೆವೆ ಎಂದಿದ್ದಾರೆ. ಆದರೆ ಅವರನ್ನು ನಾವು ನಂಬುವ ಹಾಗಿಲ್ಲ. ದಕ್ಷಿಣದಲ್ಲಿ ಕಪ್ಪು ಜನರಿದ್ದಾರೆ ನಾವು ಸಹಿಸಿಕೊಂಡಿಲ್ಲವೇ ಎಂದು ಕೇಳುವ ಉತ್ತರ ಭಾರತದ ರಾಜಕಾರಣಿಗಳಿದ್ದಾರೆ. ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ಹೋಗಿ ದೇಶಗಳೇ ಒಡೆದಿರುವ ಉದಾಹರಣೆಗಳಿವೆ. ನಮ್ಮಲ್ಲಿ ಹಾಗಾಗಬಾರದು. ಹಾಗಾಗಿ 6ನೇ ತಾರೀಖು ನಡೆಯುವ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಹೇಳಿದರು.

ಎಸ್.ಜಿ.ಸಿದ್ದರಾಮಯ್ಯನವರು ಮಾತನಾಡಿ ದಕ್ಷಿಣ ರಾಜ್ಯದ ಭಾಷೆಗಳ ಮೇಲೆ ಹಿಡಿತ ಸಾಧಿಸಲು ಪದೇ ಪದೇ ಈ ರೀತಿ ನಡೆಯುತ್ತಿದೆ. ಇದಕ್ಕೆ ಸರಿಯಾದ ಬುದ್ಧಿ ಕಲಿಸಬೇಕಾದರೆ ಪ್ರತಿಭಟನೆ ಮಾಡಲೇಬೇಕು ಮತ್ತು ಒಕ್ಕೂಟಕ್ಕೆ ಗೌರವ ಬರಬೇಕು. ದೇಶ ಛಿದ್ರವಾಗಬಾರದು ಎಂದರೆ ಎಲ್ಲಾ ಭಾಷೆಗಳನ್ನು ಗೌರವಿಸುವುದು ಕಲಿಯಬೇಕು ಎಂದು ಹೇಳಿ ಕೇಂದ್ರದ ನೀತಿಗಳನ್ನು ಖಂಡಿಸಿದರು. 6ರ ಪ್ರತಿಭಟನೆಗೆ ಮಾಡಬೇಕಾದ ತಯಾರಿಯನ್ನು ಮಾಡಿಕೊಂಡು ಮುನ್ನುಗ್ಗೋಣ ಎಂದರು.

ಭೀಮಶಂಕರ್ ಪಾಟೀಲ್, ಅರುಣ್ ಜಾವಗಲ್, ಕ.ಸಾ.ಪ ಮಾಯಣ್ಣ ಮತ್ತು ಅಲ್ಲಿ ಬಂದಿದ್ದ ಸಾಕಷ್ಟು ಜನ ಪ್ರತಿಭಟನೆ ಮಾಡಬೇಕೆಂದರು. ಮತ್ತು ಇದರ ವಿರುದ್ಧ ಹಿಂದಿ ವಿರೋಧಿ ಕನ್ನಡ ಒಕ್ಕೂಟ ಮಾಡಿಕೊಂಡು ದೀರ್ಘಕಾಲದ ಹೋರಾಟ ಮಾಡಬೇಕೆಂಬುದೂ ಅಲ್ಲಿನ ಬಹುತೇಕರ ಅಭಿಪ್ರಾಯವಾಗಿತ್ತು. ಪುಸ್ತಕ ಪ್ರಾಧಿಕಾರದ ಅಧಕ್ಷತೆ ವಸುಂಧರ ಭೂಪತಿಯವರು ಮಾತ್ರ ‘ಹಿಂದಿ ಹೇರಿಕೆಯ ವಿರುದ್ಧ ಎಲ್ಲಾ ಕಡೆ ಧ್ವನಿ ಬಂದಿದ್ದಕ್ಕಾಗಿ ವಾಪಸ್ಸು ತೆಗೆದುಕೊಂಡಿದ್ದಾರೆ ಹಾಗಾಗಿ ಪ್ರತಿಭಟನೆ ನಂತರ ಮಾಡೋಣ’ ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರು ಮಾತನಾಡಿದರು. ಅವರ ಮಾತಿನಲ್ಲಿ ಹಿಂದಿ ಹೇರಿಕೆಯ ಕುರಿತ ಯಾವ ಸಿಟ್ಟೂ ಇರಲಿಲ್ಲ. ಸದ್ಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ವೆಬ್ ಸೈಟ್‍ನಿಂದ ಇದನ್ನ ತೆಗೆದಿರುವುದರಿಂದ ಪ್ರತಿಭಟನೆಯ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದರ ಬಗ್ಗೆ ಹಲವರು ಅಸಮಾಧಾನಗೊಂಡು ಪ್ರಶ್ನಿಸಿದಾಗ, ಕಾರಣ ಇಲ್ಲದೇ ಪ್ರತಿಭಟನೆ ಬೇಡ ಎಂದು ಹೇಳಿ ಮುಗಿಸಿದರು. ಕೆಲವರು ಅವರ ಬೆಂಬಲಕ್ಕೆ ನಿಂತರು. ಕೊನೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಿಮ್ಮಯ್ಯನವರು ಕೂಡ ಮನು ಬಳಿಗಾರ್ ಅಭಿಪ್ರಾಯವನ್ನೇ ಮುಂದಿಟ್ಟರು.

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ನಡೆದ ಸಭೆಯಾಗಿದ್ದು, ಜೊತೆಗೆ ಕಸಾಪ ರಾಜ್ಯಾಧ್ಯಕ್ಷರ ಮಾತಿಗೆ ಹೆಚ್ಚಿನ ಮಹತ್ವವಿರುತ್ತದೆ. ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಇದರ ಅಧ್ಯಕ್ಷರಾಗಿರುವವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕೆಂಬುದು ಸಭೆಯಿಂದ ಹೊರಗೆ ಬಂದ ನಂತರ ಹೆಚ್ಚಿನವರ ಅನಿಸಿಕೆಯಾಗಿತ್ತು. ಏಕೆಂದರೆ, ಇದು ಕೇವಲ ಹಿಂದಿ ಹೇರಿಕೆಯ ಪ್ರಶ್ನೆಯಾಗಿರದೇ, ಈಗಾಗಲೇ ಕರ್ನಾಟಕದ ನೆಲದ ಎರಡು ಬ್ಯಾಂಕುಗಳು (ಮೈಸೂರು ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್) ನಷ್ಟದಲ್ಲಿರುವ ಬೇರೆ ರಾಜ್ಯಗಳ ಬ್ಯಾಂಕುಗಳಲ್ಲಿ ವಿಲೀನವಾಗಬೇಕಾಗಿ ಬಂದಿದೆ. ಜಿಎಸ್‍ಟಿಯ ನಂತರ ರಾಜ್ಯಗಳು ಆರ್ಥಿಕವಾಗಿಯೂ ಕೇಂದ್ರದ ಮರ್ಜಿಯಲ್ಲಿರಬೇಕಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ನಡೆಯಬಹುದಾಗಿದ್ದ ಪ್ರತಿಭಟನೆಯು ಸರಿಯಾದ ಸಂದೇಶವನ್ನೇ ನೀಡುತ್ತಿತ್ತು.

ಆದರೆ, ಅದಾಗದಂತೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನು ಬಳಿಗಾರ್. ಉಳಿದ ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮುಂದುವರೆಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನಿಲ್ ಕುಮಾರ್ ಚಿಕ್ಕ ದಾಳವಟ್ಟ ಅವರ ಸುದ್ದಿಗೆ ಕುತೂಹಲ ಕೆರಳಿಸುವ ಶೀರ್ಷಿಕೆ ಕೊಟ್ಟು ಅದಕ್ಕೆ ಉತ್ತರ ಕೊಟ್ಟಿಲ್ಲ.
    ಹಿಂದಿ ಹೇರಿಕೆ ವಿರುದ್ಧ ಕನ್ನಡ ಜನ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆ ಉಂಟಾಗಿದೆ. ಆ ವಿಷಯಗಳನ್ನು ಚೆನ್ನಾಗಿ ತಿಳಿಸಿದ್ದಾರೆ.
    ಧನ್ಯವಾದಗಳು ಸರ್.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...