Homeಕರ್ನಾಟಕಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

ಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಹಿಂದೆ ಹೇರಿಕೆಯ ವಿರುದ್ಧ ಇದೇ ಜೂನ್ 6ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದು ನಡೆಯುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಅದು ನಡೆಯಲಿಲ್ಲ. ತಮಿಳುನಾಡು ಇಂತಹ ವಿಚಾರ ಬಂದಾಗ, ಅಪೂರ್ವವಾದ ಒಗ್ಗಟ್ಟನ್ನು ಕಾಪಾಡಿಕೊಂಡು ಕೇಂದ್ರಕ್ಕೆ ಮುಟ್ಟಿಸಬೇಕಾದ ಸಂದೇಶ ಮುಟ್ಟಿಸಿಯೇ ತೀರುತ್ತದೆ. ಕರ್ನಾಟಕದಲ್ಲಿ ಹೀಗಾಗದ್ದಕ್ಕೆ ಕಾರಣವೇನು ಎಂಬುದರ ಅವಲೋಕನದ ಅಗತ್ಯವಿದೆ. ಅದೇನೇ ಇರಲಿ, ಜೂನ್ 6ರ ಪ್ರತಿಭಟನೆ ಏಕೆ ನಡೆಯಲಿಲ್ಲ ಎಂಬುದನ್ನು ನೋಡೋಣ. ಸ್ವತಃ ಈ ವರದಿಗಾರ ಹಾಜರಿದ್ದ ಪೂರ್ವಭಾವಿ ಸಭೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜೂನ್ 4, ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳೂ ಮತ್ತು ಕನ್ನಡ ಅಭಿಮಾನಿಗಳ ಸಭೆ ಕರೆದಿದ್ದರು. ಕರ್ನಾಟಕ ಕೈಗಾರಿಕ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟವು ಹಿಂದಿ ಹೇರಿಕೆಯ ವಿರುದ್ಧ 6ರಂದು ಪ್ರತಿಭಟನೆ ಮಾಡಬೇಕೆಂಬ ಕಾರಣಕ್ಕೇ ಕರೆದಿದ್ದ ಪೂರ್ವಭಾವಿ ಸಭೆ ಅದಾಗಿತ್ತು. ಈ ಸಭೆಯು ಹಿರಿಯರಾದ ತಿಮ್ಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕರ್ನಾಟಕ ಕೈಗಾರಿಕೋದ್ಯಮ ಸಂಘಟನೆಗಳ ಮುಖಂಡರಾದ ಶ್ರೀಧರ್, ಕನ್ನಡ ಸಂಘದ ಭೀಮಶಂಕರ್ ಪಾಟೀಲ್ ಭಾಗವಹಿಸಿದ್ದರು.

ದಲಿತ ಕವಿ ಸಿದ್ದಲಿಂಗಯ್ಯನವರು ಮಾತನಾಡಿ ಹಿಂದಿ ಹೇರಿಕೆಯ ಕುರಿತ ಭಾಗವನ್ನು ಕೇಂದ್ರ ಸರ್ಕಾರವು ಮೊನ್ನೆ ವಾಪಸ್ಸು ತೆಗೆದುಕೊಂಡಿದ್ದೆವೆ ಎಂದಿದ್ದಾರೆ. ಆದರೆ ಅವರನ್ನು ನಾವು ನಂಬುವ ಹಾಗಿಲ್ಲ. ದಕ್ಷಿಣದಲ್ಲಿ ಕಪ್ಪು ಜನರಿದ್ದಾರೆ ನಾವು ಸಹಿಸಿಕೊಂಡಿಲ್ಲವೇ ಎಂದು ಕೇಳುವ ಉತ್ತರ ಭಾರತದ ರಾಜಕಾರಣಿಗಳಿದ್ದಾರೆ. ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ಹೋಗಿ ದೇಶಗಳೇ ಒಡೆದಿರುವ ಉದಾಹರಣೆಗಳಿವೆ. ನಮ್ಮಲ್ಲಿ ಹಾಗಾಗಬಾರದು. ಹಾಗಾಗಿ 6ನೇ ತಾರೀಖು ನಡೆಯುವ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಹೇಳಿದರು.

ಎಸ್.ಜಿ.ಸಿದ್ದರಾಮಯ್ಯನವರು ಮಾತನಾಡಿ ದಕ್ಷಿಣ ರಾಜ್ಯದ ಭಾಷೆಗಳ ಮೇಲೆ ಹಿಡಿತ ಸಾಧಿಸಲು ಪದೇ ಪದೇ ಈ ರೀತಿ ನಡೆಯುತ್ತಿದೆ. ಇದಕ್ಕೆ ಸರಿಯಾದ ಬುದ್ಧಿ ಕಲಿಸಬೇಕಾದರೆ ಪ್ರತಿಭಟನೆ ಮಾಡಲೇಬೇಕು ಮತ್ತು ಒಕ್ಕೂಟಕ್ಕೆ ಗೌರವ ಬರಬೇಕು. ದೇಶ ಛಿದ್ರವಾಗಬಾರದು ಎಂದರೆ ಎಲ್ಲಾ ಭಾಷೆಗಳನ್ನು ಗೌರವಿಸುವುದು ಕಲಿಯಬೇಕು ಎಂದು ಹೇಳಿ ಕೇಂದ್ರದ ನೀತಿಗಳನ್ನು ಖಂಡಿಸಿದರು. 6ರ ಪ್ರತಿಭಟನೆಗೆ ಮಾಡಬೇಕಾದ ತಯಾರಿಯನ್ನು ಮಾಡಿಕೊಂಡು ಮುನ್ನುಗ್ಗೋಣ ಎಂದರು.

ಭೀಮಶಂಕರ್ ಪಾಟೀಲ್, ಅರುಣ್ ಜಾವಗಲ್, ಕ.ಸಾ.ಪ ಮಾಯಣ್ಣ ಮತ್ತು ಅಲ್ಲಿ ಬಂದಿದ್ದ ಸಾಕಷ್ಟು ಜನ ಪ್ರತಿಭಟನೆ ಮಾಡಬೇಕೆಂದರು. ಮತ್ತು ಇದರ ವಿರುದ್ಧ ಹಿಂದಿ ವಿರೋಧಿ ಕನ್ನಡ ಒಕ್ಕೂಟ ಮಾಡಿಕೊಂಡು ದೀರ್ಘಕಾಲದ ಹೋರಾಟ ಮಾಡಬೇಕೆಂಬುದೂ ಅಲ್ಲಿನ ಬಹುತೇಕರ ಅಭಿಪ್ರಾಯವಾಗಿತ್ತು. ಪುಸ್ತಕ ಪ್ರಾಧಿಕಾರದ ಅಧಕ್ಷತೆ ವಸುಂಧರ ಭೂಪತಿಯವರು ಮಾತ್ರ ‘ಹಿಂದಿ ಹೇರಿಕೆಯ ವಿರುದ್ಧ ಎಲ್ಲಾ ಕಡೆ ಧ್ವನಿ ಬಂದಿದ್ದಕ್ಕಾಗಿ ವಾಪಸ್ಸು ತೆಗೆದುಕೊಂಡಿದ್ದಾರೆ ಹಾಗಾಗಿ ಪ್ರತಿಭಟನೆ ನಂತರ ಮಾಡೋಣ’ ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರು ಮಾತನಾಡಿದರು. ಅವರ ಮಾತಿನಲ್ಲಿ ಹಿಂದಿ ಹೇರಿಕೆಯ ಕುರಿತ ಯಾವ ಸಿಟ್ಟೂ ಇರಲಿಲ್ಲ. ಸದ್ಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ವೆಬ್ ಸೈಟ್‍ನಿಂದ ಇದನ್ನ ತೆಗೆದಿರುವುದರಿಂದ ಪ್ರತಿಭಟನೆಯ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದರ ಬಗ್ಗೆ ಹಲವರು ಅಸಮಾಧಾನಗೊಂಡು ಪ್ರಶ್ನಿಸಿದಾಗ, ಕಾರಣ ಇಲ್ಲದೇ ಪ್ರತಿಭಟನೆ ಬೇಡ ಎಂದು ಹೇಳಿ ಮುಗಿಸಿದರು. ಕೆಲವರು ಅವರ ಬೆಂಬಲಕ್ಕೆ ನಿಂತರು. ಕೊನೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಿಮ್ಮಯ್ಯನವರು ಕೂಡ ಮನು ಬಳಿಗಾರ್ ಅಭಿಪ್ರಾಯವನ್ನೇ ಮುಂದಿಟ್ಟರು.

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ನಡೆದ ಸಭೆಯಾಗಿದ್ದು, ಜೊತೆಗೆ ಕಸಾಪ ರಾಜ್ಯಾಧ್ಯಕ್ಷರ ಮಾತಿಗೆ ಹೆಚ್ಚಿನ ಮಹತ್ವವಿರುತ್ತದೆ. ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಇದರ ಅಧ್ಯಕ್ಷರಾಗಿರುವವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕೆಂಬುದು ಸಭೆಯಿಂದ ಹೊರಗೆ ಬಂದ ನಂತರ ಹೆಚ್ಚಿನವರ ಅನಿಸಿಕೆಯಾಗಿತ್ತು. ಏಕೆಂದರೆ, ಇದು ಕೇವಲ ಹಿಂದಿ ಹೇರಿಕೆಯ ಪ್ರಶ್ನೆಯಾಗಿರದೇ, ಈಗಾಗಲೇ ಕರ್ನಾಟಕದ ನೆಲದ ಎರಡು ಬ್ಯಾಂಕುಗಳು (ಮೈಸೂರು ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್) ನಷ್ಟದಲ್ಲಿರುವ ಬೇರೆ ರಾಜ್ಯಗಳ ಬ್ಯಾಂಕುಗಳಲ್ಲಿ ವಿಲೀನವಾಗಬೇಕಾಗಿ ಬಂದಿದೆ. ಜಿಎಸ್‍ಟಿಯ ನಂತರ ರಾಜ್ಯಗಳು ಆರ್ಥಿಕವಾಗಿಯೂ ಕೇಂದ್ರದ ಮರ್ಜಿಯಲ್ಲಿರಬೇಕಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ನಡೆಯಬಹುದಾಗಿದ್ದ ಪ್ರತಿಭಟನೆಯು ಸರಿಯಾದ ಸಂದೇಶವನ್ನೇ ನೀಡುತ್ತಿತ್ತು.

ಆದರೆ, ಅದಾಗದಂತೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನು ಬಳಿಗಾರ್. ಉಳಿದ ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮುಂದುವರೆಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನಿಲ್ ಕುಮಾರ್ ಚಿಕ್ಕ ದಾಳವಟ್ಟ ಅವರ ಸುದ್ದಿಗೆ ಕುತೂಹಲ ಕೆರಳಿಸುವ ಶೀರ್ಷಿಕೆ ಕೊಟ್ಟು ಅದಕ್ಕೆ ಉತ್ತರ ಕೊಟ್ಟಿಲ್ಲ.
    ಹಿಂದಿ ಹೇರಿಕೆ ವಿರುದ್ಧ ಕನ್ನಡ ಜನ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆ ಉಂಟಾಗಿದೆ. ಆ ವಿಷಯಗಳನ್ನು ಚೆನ್ನಾಗಿ ತಿಳಿಸಿದ್ದಾರೆ.
    ಧನ್ಯವಾದಗಳು ಸರ್.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...