Homeಕರ್ನಾಟಕಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

ಹಿಂದೆ ಹೇರಿಕೆಯ ವಿರುದ್ಧದ ಪ್ರತಿಭಟನೆಯನ್ನು ತಡೆದರೇಕೇ ಮನುಬಳಿಗಾರ್?

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಹಿಂದೆ ಹೇರಿಕೆಯ ವಿರುದ್ಧ ಇದೇ ಜೂನ್ 6ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದು ನಡೆಯುತ್ತದೆ ಎಂದು ಘೋಷಿಸಲಾಗಿತ್ತು. ಆದರೆ, ಅದು ನಡೆಯಲಿಲ್ಲ. ತಮಿಳುನಾಡು ಇಂತಹ ವಿಚಾರ ಬಂದಾಗ, ಅಪೂರ್ವವಾದ ಒಗ್ಗಟ್ಟನ್ನು ಕಾಪಾಡಿಕೊಂಡು ಕೇಂದ್ರಕ್ಕೆ ಮುಟ್ಟಿಸಬೇಕಾದ ಸಂದೇಶ ಮುಟ್ಟಿಸಿಯೇ ತೀರುತ್ತದೆ. ಕರ್ನಾಟಕದಲ್ಲಿ ಹೀಗಾಗದ್ದಕ್ಕೆ ಕಾರಣವೇನು ಎಂಬುದರ ಅವಲೋಕನದ ಅಗತ್ಯವಿದೆ. ಅದೇನೇ ಇರಲಿ, ಜೂನ್ 6ರ ಪ್ರತಿಭಟನೆ ಏಕೆ ನಡೆಯಲಿಲ್ಲ ಎಂಬುದನ್ನು ನೋಡೋಣ. ಸ್ವತಃ ಈ ವರದಿಗಾರ ಹಾಜರಿದ್ದ ಪೂರ್ವಭಾವಿ ಸಭೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜೂನ್ 4, ಮಂಗಳವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್‍ನ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳೂ ಮತ್ತು ಕನ್ನಡ ಅಭಿಮಾನಿಗಳ ಸಭೆ ಕರೆದಿದ್ದರು. ಕರ್ನಾಟಕ ಕೈಗಾರಿಕ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟವು ಹಿಂದಿ ಹೇರಿಕೆಯ ವಿರುದ್ಧ 6ರಂದು ಪ್ರತಿಭಟನೆ ಮಾಡಬೇಕೆಂಬ ಕಾರಣಕ್ಕೇ ಕರೆದಿದ್ದ ಪೂರ್ವಭಾವಿ ಸಭೆ ಅದಾಗಿತ್ತು. ಈ ಸಭೆಯು ಹಿರಿಯರಾದ ತಿಮ್ಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕರ್ನಾಟಕ ಕೈಗಾರಿಕೋದ್ಯಮ ಸಂಘಟನೆಗಳ ಮುಖಂಡರಾದ ಶ್ರೀಧರ್, ಕನ್ನಡ ಸಂಘದ ಭೀಮಶಂಕರ್ ಪಾಟೀಲ್ ಭಾಗವಹಿಸಿದ್ದರು.

ದಲಿತ ಕವಿ ಸಿದ್ದಲಿಂಗಯ್ಯನವರು ಮಾತನಾಡಿ ಹಿಂದಿ ಹೇರಿಕೆಯ ಕುರಿತ ಭಾಗವನ್ನು ಕೇಂದ್ರ ಸರ್ಕಾರವು ಮೊನ್ನೆ ವಾಪಸ್ಸು ತೆಗೆದುಕೊಂಡಿದ್ದೆವೆ ಎಂದಿದ್ದಾರೆ. ಆದರೆ ಅವರನ್ನು ನಾವು ನಂಬುವ ಹಾಗಿಲ್ಲ. ದಕ್ಷಿಣದಲ್ಲಿ ಕಪ್ಪು ಜನರಿದ್ದಾರೆ ನಾವು ಸಹಿಸಿಕೊಂಡಿಲ್ಲವೇ ಎಂದು ಕೇಳುವ ಉತ್ತರ ಭಾರತದ ರಾಜಕಾರಣಿಗಳಿದ್ದಾರೆ. ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ಹೋಗಿ ದೇಶಗಳೇ ಒಡೆದಿರುವ ಉದಾಹರಣೆಗಳಿವೆ. ನಮ್ಮಲ್ಲಿ ಹಾಗಾಗಬಾರದು. ಹಾಗಾಗಿ 6ನೇ ತಾರೀಖು ನಡೆಯುವ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿ ಎಂದು ಹೇಳಿದರು.

ಎಸ್.ಜಿ.ಸಿದ್ದರಾಮಯ್ಯನವರು ಮಾತನಾಡಿ ದಕ್ಷಿಣ ರಾಜ್ಯದ ಭಾಷೆಗಳ ಮೇಲೆ ಹಿಡಿತ ಸಾಧಿಸಲು ಪದೇ ಪದೇ ಈ ರೀತಿ ನಡೆಯುತ್ತಿದೆ. ಇದಕ್ಕೆ ಸರಿಯಾದ ಬುದ್ಧಿ ಕಲಿಸಬೇಕಾದರೆ ಪ್ರತಿಭಟನೆ ಮಾಡಲೇಬೇಕು ಮತ್ತು ಒಕ್ಕೂಟಕ್ಕೆ ಗೌರವ ಬರಬೇಕು. ದೇಶ ಛಿದ್ರವಾಗಬಾರದು ಎಂದರೆ ಎಲ್ಲಾ ಭಾಷೆಗಳನ್ನು ಗೌರವಿಸುವುದು ಕಲಿಯಬೇಕು ಎಂದು ಹೇಳಿ ಕೇಂದ್ರದ ನೀತಿಗಳನ್ನು ಖಂಡಿಸಿದರು. 6ರ ಪ್ರತಿಭಟನೆಗೆ ಮಾಡಬೇಕಾದ ತಯಾರಿಯನ್ನು ಮಾಡಿಕೊಂಡು ಮುನ್ನುಗ್ಗೋಣ ಎಂದರು.

ಭೀಮಶಂಕರ್ ಪಾಟೀಲ್, ಅರುಣ್ ಜಾವಗಲ್, ಕ.ಸಾ.ಪ ಮಾಯಣ್ಣ ಮತ್ತು ಅಲ್ಲಿ ಬಂದಿದ್ದ ಸಾಕಷ್ಟು ಜನ ಪ್ರತಿಭಟನೆ ಮಾಡಬೇಕೆಂದರು. ಮತ್ತು ಇದರ ವಿರುದ್ಧ ಹಿಂದಿ ವಿರೋಧಿ ಕನ್ನಡ ಒಕ್ಕೂಟ ಮಾಡಿಕೊಂಡು ದೀರ್ಘಕಾಲದ ಹೋರಾಟ ಮಾಡಬೇಕೆಂಬುದೂ ಅಲ್ಲಿನ ಬಹುತೇಕರ ಅಭಿಪ್ರಾಯವಾಗಿತ್ತು. ಪುಸ್ತಕ ಪ್ರಾಧಿಕಾರದ ಅಧಕ್ಷತೆ ವಸುಂಧರ ಭೂಪತಿಯವರು ಮಾತ್ರ ‘ಹಿಂದಿ ಹೇರಿಕೆಯ ವಿರುದ್ಧ ಎಲ್ಲಾ ಕಡೆ ಧ್ವನಿ ಬಂದಿದ್ದಕ್ಕಾಗಿ ವಾಪಸ್ಸು ತೆಗೆದುಕೊಂಡಿದ್ದಾರೆ ಹಾಗಾಗಿ ಪ್ರತಿಭಟನೆ ನಂತರ ಮಾಡೋಣ’ ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್ ಅವರು ಮಾತನಾಡಿದರು. ಅವರ ಮಾತಿನಲ್ಲಿ ಹಿಂದಿ ಹೇರಿಕೆಯ ಕುರಿತ ಯಾವ ಸಿಟ್ಟೂ ಇರಲಿಲ್ಲ. ಸದ್ಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ವೆಬ್ ಸೈಟ್‍ನಿಂದ ಇದನ್ನ ತೆಗೆದಿರುವುದರಿಂದ ಪ್ರತಿಭಟನೆಯ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದರ ಬಗ್ಗೆ ಹಲವರು ಅಸಮಾಧಾನಗೊಂಡು ಪ್ರಶ್ನಿಸಿದಾಗ, ಕಾರಣ ಇಲ್ಲದೇ ಪ್ರತಿಭಟನೆ ಬೇಡ ಎಂದು ಹೇಳಿ ಮುಗಿಸಿದರು. ಕೆಲವರು ಅವರ ಬೆಂಬಲಕ್ಕೆ ನಿಂತರು. ಕೊನೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ತಿಮ್ಮಯ್ಯನವರು ಕೂಡ ಮನು ಬಳಿಗಾರ್ ಅಭಿಪ್ರಾಯವನ್ನೇ ಮುಂದಿಟ್ಟರು.

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ನಡೆದ ಸಭೆಯಾಗಿದ್ದು, ಜೊತೆಗೆ ಕಸಾಪ ರಾಜ್ಯಾಧ್ಯಕ್ಷರ ಮಾತಿಗೆ ಹೆಚ್ಚಿನ ಮಹತ್ವವಿರುತ್ತದೆ. ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಇದರ ಅಧ್ಯಕ್ಷರಾಗಿರುವವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕೆಂಬುದು ಸಭೆಯಿಂದ ಹೊರಗೆ ಬಂದ ನಂತರ ಹೆಚ್ಚಿನವರ ಅನಿಸಿಕೆಯಾಗಿತ್ತು. ಏಕೆಂದರೆ, ಇದು ಕೇವಲ ಹಿಂದಿ ಹೇರಿಕೆಯ ಪ್ರಶ್ನೆಯಾಗಿರದೇ, ಈಗಾಗಲೇ ಕರ್ನಾಟಕದ ನೆಲದ ಎರಡು ಬ್ಯಾಂಕುಗಳು (ಮೈಸೂರು ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್) ನಷ್ಟದಲ್ಲಿರುವ ಬೇರೆ ರಾಜ್ಯಗಳ ಬ್ಯಾಂಕುಗಳಲ್ಲಿ ವಿಲೀನವಾಗಬೇಕಾಗಿ ಬಂದಿದೆ. ಜಿಎಸ್‍ಟಿಯ ನಂತರ ರಾಜ್ಯಗಳು ಆರ್ಥಿಕವಾಗಿಯೂ ಕೇಂದ್ರದ ಮರ್ಜಿಯಲ್ಲಿರಬೇಕಾಗುತ್ತದೆ. ಹಾಗಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ನಡೆಯಬಹುದಾಗಿದ್ದ ಪ್ರತಿಭಟನೆಯು ಸರಿಯಾದ ಸಂದೇಶವನ್ನೇ ನೀಡುತ್ತಿತ್ತು.

ಆದರೆ, ಅದಾಗದಂತೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನು ಬಳಿಗಾರ್. ಉಳಿದ ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮುಂದುವರೆಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನಿಲ್ ಕುಮಾರ್ ಚಿಕ್ಕ ದಾಳವಟ್ಟ ಅವರ ಸುದ್ದಿಗೆ ಕುತೂಹಲ ಕೆರಳಿಸುವ ಶೀರ್ಷಿಕೆ ಕೊಟ್ಟು ಅದಕ್ಕೆ ಉತ್ತರ ಕೊಟ್ಟಿಲ್ಲ.
    ಹಿಂದಿ ಹೇರಿಕೆ ವಿರುದ್ಧ ಕನ್ನಡ ಜನ ಒಗ್ಗಟ್ಟಿನಿಂದ ಪ್ರತಿಭಟಿಸುವ ಅನಿವಾರ್ಯತೆ ಉಂಟಾಗಿದೆ. ಆ ವಿಷಯಗಳನ್ನು ಚೆನ್ನಾಗಿ ತಿಳಿಸಿದ್ದಾರೆ.
    ಧನ್ಯವಾದಗಳು ಸರ್.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...