Homeಚಳವಳಿಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

1968, 86 ಮತ್ತು 92ರ ಶಿಕ್ಷಣ ನೀತಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಹಾಗಾಗಿ ಶಿಕ್ಷಣ ವ್ಯವಸ್ಥೆಯ ಅಧಃಪತನದಲ್ಲಿ ಕಾಂಗ್ರೆಸ್ ಸರ್ಕಾರಗಳ ಪಾಲೂ ಸಹ ಇದೆ - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ. ಆ ಮೂಲಕ ಕನ್ನಡದಂತ ಪ್ರಾದೇಶಿಕ ಭಾಷೆಗಳ ಅಸ್ಮಿತೆಗಳ ಮೇಲೆ ಧಕ್ಕೆ ತರುವ ಯಾವುದೇ ಉದ್ದೇಶವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಭಾರತ ಐಕ್ಯತಾ ಯಾತ್ರೆಯ ಅಂಗವಾಗಿ ನಾಗಮಂಗಲದ ಬಳಿ ಶಿಕ್ಷಣ ತಜ್ಞರು ಮತ್ತು ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಹತ್ವವಿದೆ. ನಾನು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇನೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಹಕ್ಕುಗಳನ್ನು ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಮಾತನಾಡಿ, “ಸಂವಿಧಾನ ಉಳಿದರೆ ದೇಶ ಉಳಿಯುತ್ತದೆ. ಶಾಲೆಗಳು ಸಂವಿಧಾನದ ತೊಟ್ಟಿಲುಗಳಿದ್ದಂತೆ. ಸಂವಿಧಾನ ಉಳಿಯಬೇಕು ಎಂದರೆ ಶಾಲಾ ಮಕ್ಕಳಲ್ಲಿ ಸಂವಿಧಾನದ ಮೌಲ್ಯಗಳನ್ನು ಆಚರಣೆಗೆ ತರಬೇಕಿದೆ. ಎಲ್ಲಾ ವರ್ಗದ, ಎಲ್ಲಾ ಜಾತಿ ಧರ್ಮದ ಮಕ್ಕಳ ಒಟ್ಟಿಗೆ ಬೆರೆತು ಕಲಿಯುವ ಸಮಾನ ಶಾಲಾ ವ್ಯವಸ್ಥೆ ಜಾರಿಗೆ ಬಂದರೆ ಮಾತ್ರ ದೇಶದ ಐಕ್ಯತೆ ಉಳಿಯಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

“ಇಂದು ಎನ್‌ಇಪಿ ಮೂಲಕ ಮಕ್ಕಳಿಗೆ ವಿಷ ತುಂಬುವ ಕೆಲಸ ನಡೆಯುತ್ತಿದೆ. ವಿಚಾರ ಮಾಡುವ, ವಿಮರ್ಶಾತ್ಮಕವಾಗಿ ಆಲೋಚಿಸುವುದನ್ನು ಕಲಿಸುವ ಬದಲಿಗೆ ಪಠ್ಯಗಳನ್ನು ತಿರುಚಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತವನ್ನು ಒಗ್ಗೂಡಿಸುವುದು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

ನೀವು ಕೂಡ 1968, 86 ಮತ್ತು 92ರ ಶಿಕ್ಷಣ ನೀತಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಹಾಗಾಗಿ ಶಿಕ್ಷಣ ವ್ಯವಸ್ಥೆಯ ಅಧಃಪತನದಲ್ಲಿ ಕಾಂಗ್ರೆಸ್ ಸರ್ಕಾರಗಳ ಪಾಲೂ ಸಹ ಇದೆ ಎಂದು ನಿರಂಜನಾರಾಧ್ಯರು ದೂರಿದರು. ದೇಶ ಇವತ್ತು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಜಾತ್ಯಾತೀತ ಮೌಲ್ಯಗಳು ದಾಳಿಗೊಳಗಾಗಿವೆ. ಶಿಕ್ಷಣ ಅವೆಲ್ಲವನ್ನು ಮೀರಿ ನಿಲ್ಲಬೇಕೆಂದು 1986ರಲ್ಲಿಯೇ ಶಿಕ್ಷಣ ನೀತಿಯ 1.11 ರಲ್ಲಿ ರಾಜೀವ್ ಗಾಂಧಿಯವರು ಹೇಳಿದ್ದರು. ಹಾಗಾಗಿ ಮೊದಲು ಶಿಕ್ಷಣ ವ್ಯವಸ್ಥೆ ಸರಿ ಮಾಡೋಣ. ಅದಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮೇಲೆ ಹೆಚ್ಚಿನ ಹೂಡಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಶಿಕ್ಷಣ ಕ್ಷೇತ್ರದ ಮೇಲೆ ಹಣ ಹೂಡಿಕೆ ಮಾಡಬೇಕೆಂಬುದನ್ನು ಒಪ್ಪಿಕೊಂಡರು ಮತ್ತು ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸುವುದು ನಮ್ಮ ಆದ್ಯತೆಯಾಗಬೇಕು ಎಂದರು ಎನ್ನಲಾಗಿದೆ.

ನಾನು ಹಲವು ಮಕ್ಕಳೊಂದಿಗೆ ಮಾತನಾಡಿದ್ದೇನೆ. ಆದರೆ ಚೆನ್ನಾಗಿ ಇಂಗ್ಲಿಷ್‌ನಲ್ಲಿ ಮಾತನಾಡಲು ಮಕ್ಕಳು ಕಷ್ಟಪಡುತ್ತಿದ್ದಾರೆ ಎಂದು ಸಭೆಯಲ್ಲಿ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞರು, ‘ನಮ್ಮಲ್ಲಿ ಚೆನ್ನಾಗಿ ಇಂಗ್ಲಿಷ್ ಕಲಿಸಲು ಸಮರ್ಪಕ ವ್ಯವಸ್ಥೆಯಿಲ್ಲ, ಮೂಲಭೂತ ಸೌಲಭ್ಯಗಳಿಲ್ಲ, ನುರಿತ ಶಿಕ್ಷಕರಿಲ್ಲ. ಹೀಗಿದ್ದಾಗ ಮಕ್ಕಳು ಕಲಿಯಲು ಹೇಗೆ ಸಾಧ್ಯ? ಕನ್ನಡ ಮಾತೃಭಾಷೆಯಲ್ಲಿ ಬೋಧಿಸುತ್ತಲೆ ಉತ್ತಮವಾಗಿ ಇಂಗ್ಲಿಷ್ ಕಲಿಸಲು ಒತ್ತಾಯಿಸಬೇಕು’ ಎಂದರು.

ಇದನ್ನೂ ಓದಿ; ಗೌರಿ ಲಂಕೇಶ್ ಹೋರಾಟ ಸ್ಮರಿಸಿದ ರಾಹುಲ್ ಗಾಂಧಿ: ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆಹಾಕಿದ ಕವಿತಾ, ಇಂದಿರಾ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....