Homeಕರ್ನಾಟಕಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ ಇನ್ನೊರ್ವ ಬಿಜೆಪಿ ಸಂಸದ ಸದಾನಂದಗೌಡ ನಡೆದಿದ್ದು ಕನ್ನಡ ಹೋರಾಟಗಾರರನ್ನು ಕಿಡಿಗೇಡಿ ಎಂದು ಕರೆದಿದ್ದಾರೆ.

ಇಂದು ಮುಂಜಾನೆ 4:30ರ ಸಮಯಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸದಾನಂದಗೌಡರು ‘ಈ ಕೃತ್ಯ ಎಸಗಿರವವರು ಕಿಡಿಗಳೆ ಹೊರತು ಕನ್ನಡದ ಕಟ್ಟಾಳುಗಳಲ್ಲ ಎಂದು ಕರೆದುದ್ದಲ್ಲದೇ ಈ ವಿಚಾರ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ” ಎಂದು ಕರೆ ನೀಡಿದ್ದಾರೆ. ಇವರ ಈ ಹೇಳಿಕೆಗೆ ಕೆರಳಿದ ಕನ್ನಡಿಗರು ಸದಾನಂದಗೌಡರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಮೊದಲು ನಿಮಗೆ ಕಾಳಜಿಯಿದ್ದರೆ ಕೇಂದ್ರದಿಂದ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ. ಸದಾನಂದಗೌಡರ ಪೋಸ್ಟ್ ಮತ್ತು ಅದಕ್ಕೆ ಬಂದ ಕೆಲವು ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಜೈನ ಧಾರ್ಮಿಕ ಕೇಂದ್ರದ ಮುಂದೆ ಹಾಕಿದ್ದ ಹಿಂದಿ ಭಾಷೆಯ ನಾಮ ಫಲಕ ಕಿತ್ತು ಹಾಕಿದ ಘಟನೆ ಯನ್ನು ಭಾಷಾ ಸಂಘರ್ಷವಾಗಿ ಬದಲಾಯಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕ್ಕೊಳ್ಳುತ್ತಿರುವ ಕೈ ಯಾರದ್ದೆಂದು ತಿಳಿದಿದೆ. ಮಾನ್ಯ ಮುಖ್ಯಮಂತ್ರಿಗಳು ಕನ್ನಡ ಹೋರಾಟಗಾರರನ್ನು ಧಮನಿಸುತ್ತಿದ್ದಾರೆ ಎಂಬಂತೆ ಬಿಂಬಿಸಲು ಕೆಲ ಅಸ್ವಸ್ಥ ಮನಸ್ಥಿತಿಗಳು ಪ್ರಯತ್ನ ನಡೆಸಿವೆ. ಕೆಲ ಕಿಡಿಗೇಡಿಗಳು ಮಾಡಿದ ಈ ದುಷ್ಕೃತ್ಯವನ್ನು ಕನ್ನಡದ ಕಟ್ಟಾಳುಗಳ ಕೆಲಸ ಎಂದು ಬಿಂಬಿಸುವ ಪಿತೂರಿ ಕೂಡಾ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ .

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ. ಅದನ್ನು ಬಿಟ್ಟು ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ? ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು.

ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ, ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ. ದಾಳಿ ಮಾಡುವುದು ಕಿಡಿಗೇಡಿಗಳ ಕೆಲಸ. ಇನ್ನು ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕ್ಕೊಳ್ಳಲು ಯತ್ನಿಸಿ ಏನೋ ಆಗಬಾರದ್ದು ಆಗಿ ಬಿಟ್ಟಿದೆ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿರುವ ಹೊರಟಿರುವ ಕೆಲ ಮನಸ್ಥಿತಿ ಗಳನ್ನು ಇಲ್ಲೇ ಕಡಿವಾಣ ಹಾಕಿ ನಿಲ್ಲಿಸಬೇಕೆಂದು. ಇದನ್ನು ರಾಜಕೀಯ ಗೊಳಿಸಲು ಬಿಡಬಾರದೆಂದು ಕನ್ನಡದ ಹಿರಿಯರಲ್ಲಿ ಮನವಿ. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ ಇನ್ನಷ್ಟು ಕೆಡುವುದು ಖಂಡಿತಾ . ಈಗಾಗಲೇ ಪ್ರವಾಹಕ್ಕೆ ಸಿಲುಕಿ ನರಳಿರುವ ಕರ್ನಾಟಕದ ನಮ್ಮ ಸಹೋದರರಿಗೆ ನಮ್ಮಆಸರೆ ಬೇಕು ಬನ್ನಿ ಅಲ್ಲಿ ಕೈ ಜೋಡಿಸೋಣ. ಅದನ್ನು ಬಿಟ್ಟು ಇಂತಹ ಸಂಘರ್ಷಕ್ಕಲ್ಲ. ಎಂದು ಸದಾನಂದಗೌಡರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ “ನಿಮಗೆ fund ಮಾಡುವವರಿಗೆ ಇಷ್ಟು ಬಕೆಟ್ ಹಿಡಿಯದೇ ಹೋದರೆ ಹೇಗೆ ಅಲ್ವಾ? ಅದ್ಯಾವನ್ಗೋ ಅದೆಲ್ಲೋ ಹರ್ಟ್ ಆಯ್ತಂತೆ ನಿಮ್ಗೂ ಕೂಡ ಆಗೋಯ್ತು, ಕರ್ನಾಟಕ ನೆರೆಗೆ ನಿಮ್ಮ ಕೊಡುಗೆ ಏನಿದೆ ಅಂತ ಕನ್ನಡಿಗರಿಗೆ ಗೊತ್ತಿದೆ ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ.. ಕರ್ನಾಟಕದಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂತಿದ್ದೀರಿ ಸ್ವಾಭಿಮಾನದ ಬದುಕು ಬಾಳಿ” ಎಂದು ಸಂತೋಷ್ ಮಹದೇವಯ್ಯನವರು ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

“ಉತ್ತರ ಕನಾ೯ಟಕ ಪ್ರವಾಹ ಸಂತ್ರಸ್ತರಿಗೆ ನೆರವು ನಿಡುವ ವಿಚಾರ ಇಲ್ಲಿ ಮಾತನಾಡಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ ಪರಿಹಾರ ತರಲು ಸಾಧ್ಯವಾಗದ ನಿಮಗೆ ರಾಜಕೀಯ ಬೇಕಾ? ಸುಮ್ಮನೆ ರಾಜಿನಾಮೆ ಕೋಟ್ಟು ಮನೆಯಲ್ಲಿ ಇರಿ ಸಾರ್. ಎಲ್ಲ ಗುಳೆ ಹೋದ ಮೇಲೆ ಮೊಳೆ ಹೋಡೆಯೊಕೆ ಬರಬೇಡಿ, ರಾಜ್ಯಕ್ಕೆ ಗೊತ್ತು ನಿಮ್ಮ ಬಿಜೆಪಿಯವರ ಗೊಸುಂಬೆ ಆಟಗಳು” ಎಂದು ಪದ್ಮರಾಜ್ ರವರು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ನೆರೆ ಪರಿಹಾರಕ್ಕೆ ಒಂದು ನಯಾಪೈಸೆ ತರುವ ಯೋಗ್ಯತೆ ಇಲ್ಲ.. ಈಗ ಉತ್ತರ ಭಾರತೀಯ ಮಾರ್ವಾಡಿಗಳ ಪರವಾಗಿ ನಿಂತು ಕನ್ನಡಿಗರ ವಿಶಯವನ್ನ ರಾಜಕೀಯ ಮಾಡಿ ಬೇಳೆ ಬೇಯಿಸ್ಕೊಳ್ತೀರ!! ಎಂದು ಶೃತಿ ಎಚ್.ಎಂ ರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಬ್ಯಾನರ್ ಹರಿದ ಆರೋಪ: ಆರು ಕನ್ನಡ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...