Homeಕರ್ನಾಟಕಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ ಇನ್ನೊರ್ವ ಬಿಜೆಪಿ ಸಂಸದ ಸದಾನಂದಗೌಡ ನಡೆದಿದ್ದು ಕನ್ನಡ ಹೋರಾಟಗಾರರನ್ನು ಕಿಡಿಗೇಡಿ ಎಂದು ಕರೆದಿದ್ದಾರೆ.

ಇಂದು ಮುಂಜಾನೆ 4:30ರ ಸಮಯಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸದಾನಂದಗೌಡರು ‘ಈ ಕೃತ್ಯ ಎಸಗಿರವವರು ಕಿಡಿಗಳೆ ಹೊರತು ಕನ್ನಡದ ಕಟ್ಟಾಳುಗಳಲ್ಲ ಎಂದು ಕರೆದುದ್ದಲ್ಲದೇ ಈ ವಿಚಾರ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ” ಎಂದು ಕರೆ ನೀಡಿದ್ದಾರೆ. ಇವರ ಈ ಹೇಳಿಕೆಗೆ ಕೆರಳಿದ ಕನ್ನಡಿಗರು ಸದಾನಂದಗೌಡರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಮೊದಲು ನಿಮಗೆ ಕಾಳಜಿಯಿದ್ದರೆ ಕೇಂದ್ರದಿಂದ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ. ಸದಾನಂದಗೌಡರ ಪೋಸ್ಟ್ ಮತ್ತು ಅದಕ್ಕೆ ಬಂದ ಕೆಲವು ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಜೈನ ಧಾರ್ಮಿಕ ಕೇಂದ್ರದ ಮುಂದೆ ಹಾಕಿದ್ದ ಹಿಂದಿ ಭಾಷೆಯ ನಾಮ ಫಲಕ ಕಿತ್ತು ಹಾಕಿದ ಘಟನೆ ಯನ್ನು ಭಾಷಾ ಸಂಘರ್ಷವಾಗಿ ಬದಲಾಯಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕ್ಕೊಳ್ಳುತ್ತಿರುವ ಕೈ ಯಾರದ್ದೆಂದು ತಿಳಿದಿದೆ. ಮಾನ್ಯ ಮುಖ್ಯಮಂತ್ರಿಗಳು ಕನ್ನಡ ಹೋರಾಟಗಾರರನ್ನು ಧಮನಿಸುತ್ತಿದ್ದಾರೆ ಎಂಬಂತೆ ಬಿಂಬಿಸಲು ಕೆಲ ಅಸ್ವಸ್ಥ ಮನಸ್ಥಿತಿಗಳು ಪ್ರಯತ್ನ ನಡೆಸಿವೆ. ಕೆಲ ಕಿಡಿಗೇಡಿಗಳು ಮಾಡಿದ ಈ ದುಷ್ಕೃತ್ಯವನ್ನು ಕನ್ನಡದ ಕಟ್ಟಾಳುಗಳ ಕೆಲಸ ಎಂದು ಬಿಂಬಿಸುವ ಪಿತೂರಿ ಕೂಡಾ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ .

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ. ಅದನ್ನು ಬಿಟ್ಟು ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ? ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು.

ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ, ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ. ದಾಳಿ ಮಾಡುವುದು ಕಿಡಿಗೇಡಿಗಳ ಕೆಲಸ. ಇನ್ನು ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕ್ಕೊಳ್ಳಲು ಯತ್ನಿಸಿ ಏನೋ ಆಗಬಾರದ್ದು ಆಗಿ ಬಿಟ್ಟಿದೆ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿರುವ ಹೊರಟಿರುವ ಕೆಲ ಮನಸ್ಥಿತಿ ಗಳನ್ನು ಇಲ್ಲೇ ಕಡಿವಾಣ ಹಾಕಿ ನಿಲ್ಲಿಸಬೇಕೆಂದು. ಇದನ್ನು ರಾಜಕೀಯ ಗೊಳಿಸಲು ಬಿಡಬಾರದೆಂದು ಕನ್ನಡದ ಹಿರಿಯರಲ್ಲಿ ಮನವಿ. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ ಇನ್ನಷ್ಟು ಕೆಡುವುದು ಖಂಡಿತಾ . ಈಗಾಗಲೇ ಪ್ರವಾಹಕ್ಕೆ ಸಿಲುಕಿ ನರಳಿರುವ ಕರ್ನಾಟಕದ ನಮ್ಮ ಸಹೋದರರಿಗೆ ನಮ್ಮಆಸರೆ ಬೇಕು ಬನ್ನಿ ಅಲ್ಲಿ ಕೈ ಜೋಡಿಸೋಣ. ಅದನ್ನು ಬಿಟ್ಟು ಇಂತಹ ಸಂಘರ್ಷಕ್ಕಲ್ಲ. ಎಂದು ಸದಾನಂದಗೌಡರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ “ನಿಮಗೆ fund ಮಾಡುವವರಿಗೆ ಇಷ್ಟು ಬಕೆಟ್ ಹಿಡಿಯದೇ ಹೋದರೆ ಹೇಗೆ ಅಲ್ವಾ? ಅದ್ಯಾವನ್ಗೋ ಅದೆಲ್ಲೋ ಹರ್ಟ್ ಆಯ್ತಂತೆ ನಿಮ್ಗೂ ಕೂಡ ಆಗೋಯ್ತು, ಕರ್ನಾಟಕ ನೆರೆಗೆ ನಿಮ್ಮ ಕೊಡುಗೆ ಏನಿದೆ ಅಂತ ಕನ್ನಡಿಗರಿಗೆ ಗೊತ್ತಿದೆ ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ.. ಕರ್ನಾಟಕದಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂತಿದ್ದೀರಿ ಸ್ವಾಭಿಮಾನದ ಬದುಕು ಬಾಳಿ” ಎಂದು ಸಂತೋಷ್ ಮಹದೇವಯ್ಯನವರು ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

“ಉತ್ತರ ಕನಾ೯ಟಕ ಪ್ರವಾಹ ಸಂತ್ರಸ್ತರಿಗೆ ನೆರವು ನಿಡುವ ವಿಚಾರ ಇಲ್ಲಿ ಮಾತನಾಡಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ ಪರಿಹಾರ ತರಲು ಸಾಧ್ಯವಾಗದ ನಿಮಗೆ ರಾಜಕೀಯ ಬೇಕಾ? ಸುಮ್ಮನೆ ರಾಜಿನಾಮೆ ಕೋಟ್ಟು ಮನೆಯಲ್ಲಿ ಇರಿ ಸಾರ್. ಎಲ್ಲ ಗುಳೆ ಹೋದ ಮೇಲೆ ಮೊಳೆ ಹೋಡೆಯೊಕೆ ಬರಬೇಡಿ, ರಾಜ್ಯಕ್ಕೆ ಗೊತ್ತು ನಿಮ್ಮ ಬಿಜೆಪಿಯವರ ಗೊಸುಂಬೆ ಆಟಗಳು” ಎಂದು ಪದ್ಮರಾಜ್ ರವರು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ನೆರೆ ಪರಿಹಾರಕ್ಕೆ ಒಂದು ನಯಾಪೈಸೆ ತರುವ ಯೋಗ್ಯತೆ ಇಲ್ಲ.. ಈಗ ಉತ್ತರ ಭಾರತೀಯ ಮಾರ್ವಾಡಿಗಳ ಪರವಾಗಿ ನಿಂತು ಕನ್ನಡಿಗರ ವಿಶಯವನ್ನ ರಾಜಕೀಯ ಮಾಡಿ ಬೇಳೆ ಬೇಯಿಸ್ಕೊಳ್ತೀರ!! ಎಂದು ಶೃತಿ ಎಚ್.ಎಂ ರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಬ್ಯಾನರ್ ಹರಿದ ಆರೋಪ: ಆರು ಕನ್ನಡ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...