Homeಕರ್ನಾಟಕಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ ಇನ್ನೊರ್ವ ಬಿಜೆಪಿ ಸಂಸದ ಸದಾನಂದಗೌಡ ನಡೆದಿದ್ದು ಕನ್ನಡ ಹೋರಾಟಗಾರರನ್ನು ಕಿಡಿಗೇಡಿ ಎಂದು ಕರೆದಿದ್ದಾರೆ.

ಇಂದು ಮುಂಜಾನೆ 4:30ರ ಸಮಯಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸದಾನಂದಗೌಡರು ‘ಈ ಕೃತ್ಯ ಎಸಗಿರವವರು ಕಿಡಿಗಳೆ ಹೊರತು ಕನ್ನಡದ ಕಟ್ಟಾಳುಗಳಲ್ಲ ಎಂದು ಕರೆದುದ್ದಲ್ಲದೇ ಈ ವಿಚಾರ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ” ಎಂದು ಕರೆ ನೀಡಿದ್ದಾರೆ. ಇವರ ಈ ಹೇಳಿಕೆಗೆ ಕೆರಳಿದ ಕನ್ನಡಿಗರು ಸದಾನಂದಗೌಡರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಮೊದಲು ನಿಮಗೆ ಕಾಳಜಿಯಿದ್ದರೆ ಕೇಂದ್ರದಿಂದ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ. ಸದಾನಂದಗೌಡರ ಪೋಸ್ಟ್ ಮತ್ತು ಅದಕ್ಕೆ ಬಂದ ಕೆಲವು ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಜೈನ ಧಾರ್ಮಿಕ ಕೇಂದ್ರದ ಮುಂದೆ ಹಾಕಿದ್ದ ಹಿಂದಿ ಭಾಷೆಯ ನಾಮ ಫಲಕ ಕಿತ್ತು ಹಾಕಿದ ಘಟನೆ ಯನ್ನು ಭಾಷಾ ಸಂಘರ್ಷವಾಗಿ ಬದಲಾಯಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕ್ಕೊಳ್ಳುತ್ತಿರುವ ಕೈ ಯಾರದ್ದೆಂದು ತಿಳಿದಿದೆ. ಮಾನ್ಯ ಮುಖ್ಯಮಂತ್ರಿಗಳು ಕನ್ನಡ ಹೋರಾಟಗಾರರನ್ನು ಧಮನಿಸುತ್ತಿದ್ದಾರೆ ಎಂಬಂತೆ ಬಿಂಬಿಸಲು ಕೆಲ ಅಸ್ವಸ್ಥ ಮನಸ್ಥಿತಿಗಳು ಪ್ರಯತ್ನ ನಡೆಸಿವೆ. ಕೆಲ ಕಿಡಿಗೇಡಿಗಳು ಮಾಡಿದ ಈ ದುಷ್ಕೃತ್ಯವನ್ನು ಕನ್ನಡದ ಕಟ್ಟಾಳುಗಳ ಕೆಲಸ ಎಂದು ಬಿಂಬಿಸುವ ಪಿತೂರಿ ಕೂಡಾ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ .

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ. ಅದನ್ನು ಬಿಟ್ಟು ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ? ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು.

ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ, ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ. ದಾಳಿ ಮಾಡುವುದು ಕಿಡಿಗೇಡಿಗಳ ಕೆಲಸ. ಇನ್ನು ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕ್ಕೊಳ್ಳಲು ಯತ್ನಿಸಿ ಏನೋ ಆಗಬಾರದ್ದು ಆಗಿ ಬಿಟ್ಟಿದೆ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿರುವ ಹೊರಟಿರುವ ಕೆಲ ಮನಸ್ಥಿತಿ ಗಳನ್ನು ಇಲ್ಲೇ ಕಡಿವಾಣ ಹಾಕಿ ನಿಲ್ಲಿಸಬೇಕೆಂದು. ಇದನ್ನು ರಾಜಕೀಯ ಗೊಳಿಸಲು ಬಿಡಬಾರದೆಂದು ಕನ್ನಡದ ಹಿರಿಯರಲ್ಲಿ ಮನವಿ. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ ಇನ್ನಷ್ಟು ಕೆಡುವುದು ಖಂಡಿತಾ . ಈಗಾಗಲೇ ಪ್ರವಾಹಕ್ಕೆ ಸಿಲುಕಿ ನರಳಿರುವ ಕರ್ನಾಟಕದ ನಮ್ಮ ಸಹೋದರರಿಗೆ ನಮ್ಮಆಸರೆ ಬೇಕು ಬನ್ನಿ ಅಲ್ಲಿ ಕೈ ಜೋಡಿಸೋಣ. ಅದನ್ನು ಬಿಟ್ಟು ಇಂತಹ ಸಂಘರ್ಷಕ್ಕಲ್ಲ. ಎಂದು ಸದಾನಂದಗೌಡರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ “ನಿಮಗೆ fund ಮಾಡುವವರಿಗೆ ಇಷ್ಟು ಬಕೆಟ್ ಹಿಡಿಯದೇ ಹೋದರೆ ಹೇಗೆ ಅಲ್ವಾ? ಅದ್ಯಾವನ್ಗೋ ಅದೆಲ್ಲೋ ಹರ್ಟ್ ಆಯ್ತಂತೆ ನಿಮ್ಗೂ ಕೂಡ ಆಗೋಯ್ತು, ಕರ್ನಾಟಕ ನೆರೆಗೆ ನಿಮ್ಮ ಕೊಡುಗೆ ಏನಿದೆ ಅಂತ ಕನ್ನಡಿಗರಿಗೆ ಗೊತ್ತಿದೆ ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ.. ಕರ್ನಾಟಕದಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂತಿದ್ದೀರಿ ಸ್ವಾಭಿಮಾನದ ಬದುಕು ಬಾಳಿ” ಎಂದು ಸಂತೋಷ್ ಮಹದೇವಯ್ಯನವರು ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

“ಉತ್ತರ ಕನಾ೯ಟಕ ಪ್ರವಾಹ ಸಂತ್ರಸ್ತರಿಗೆ ನೆರವು ನಿಡುವ ವಿಚಾರ ಇಲ್ಲಿ ಮಾತನಾಡಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ ಪರಿಹಾರ ತರಲು ಸಾಧ್ಯವಾಗದ ನಿಮಗೆ ರಾಜಕೀಯ ಬೇಕಾ? ಸುಮ್ಮನೆ ರಾಜಿನಾಮೆ ಕೋಟ್ಟು ಮನೆಯಲ್ಲಿ ಇರಿ ಸಾರ್. ಎಲ್ಲ ಗುಳೆ ಹೋದ ಮೇಲೆ ಮೊಳೆ ಹೋಡೆಯೊಕೆ ಬರಬೇಡಿ, ರಾಜ್ಯಕ್ಕೆ ಗೊತ್ತು ನಿಮ್ಮ ಬಿಜೆಪಿಯವರ ಗೊಸುಂಬೆ ಆಟಗಳು” ಎಂದು ಪದ್ಮರಾಜ್ ರವರು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ನೆರೆ ಪರಿಹಾರಕ್ಕೆ ಒಂದು ನಯಾಪೈಸೆ ತರುವ ಯೋಗ್ಯತೆ ಇಲ್ಲ.. ಈಗ ಉತ್ತರ ಭಾರತೀಯ ಮಾರ್ವಾಡಿಗಳ ಪರವಾಗಿ ನಿಂತು ಕನ್ನಡಿಗರ ವಿಶಯವನ್ನ ರಾಜಕೀಯ ಮಾಡಿ ಬೇಳೆ ಬೇಯಿಸ್ಕೊಳ್ತೀರ!! ಎಂದು ಶೃತಿ ಎಚ್.ಎಂ ರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಬ್ಯಾನರ್ ಹರಿದ ಆರೋಪ: ಆರು ಕನ್ನಡ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...