Homeಕರ್ನಾಟಕಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ ಇನ್ನೊರ್ವ ಬಿಜೆಪಿ ಸಂಸದ ಸದಾನಂದಗೌಡ ನಡೆದಿದ್ದು ಕನ್ನಡ ಹೋರಾಟಗಾರರನ್ನು ಕಿಡಿಗೇಡಿ ಎಂದು ಕರೆದಿದ್ದಾರೆ.

ಇಂದು ಮುಂಜಾನೆ 4:30ರ ಸಮಯಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸದಾನಂದಗೌಡರು ‘ಈ ಕೃತ್ಯ ಎಸಗಿರವವರು ಕಿಡಿಗಳೆ ಹೊರತು ಕನ್ನಡದ ಕಟ್ಟಾಳುಗಳಲ್ಲ ಎಂದು ಕರೆದುದ್ದಲ್ಲದೇ ಈ ವಿಚಾರ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ” ಎಂದು ಕರೆ ನೀಡಿದ್ದಾರೆ. ಇವರ ಈ ಹೇಳಿಕೆಗೆ ಕೆರಳಿದ ಕನ್ನಡಿಗರು ಸದಾನಂದಗೌಡರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಮೊದಲು ನಿಮಗೆ ಕಾಳಜಿಯಿದ್ದರೆ ಕೇಂದ್ರದಿಂದ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ. ಸದಾನಂದಗೌಡರ ಪೋಸ್ಟ್ ಮತ್ತು ಅದಕ್ಕೆ ಬಂದ ಕೆಲವು ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಜೈನ ಧಾರ್ಮಿಕ ಕೇಂದ್ರದ ಮುಂದೆ ಹಾಕಿದ್ದ ಹಿಂದಿ ಭಾಷೆಯ ನಾಮ ಫಲಕ ಕಿತ್ತು ಹಾಕಿದ ಘಟನೆ ಯನ್ನು ಭಾಷಾ ಸಂಘರ್ಷವಾಗಿ ಬದಲಾಯಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕ್ಕೊಳ್ಳುತ್ತಿರುವ ಕೈ ಯಾರದ್ದೆಂದು ತಿಳಿದಿದೆ. ಮಾನ್ಯ ಮುಖ್ಯಮಂತ್ರಿಗಳು ಕನ್ನಡ ಹೋರಾಟಗಾರರನ್ನು ಧಮನಿಸುತ್ತಿದ್ದಾರೆ ಎಂಬಂತೆ ಬಿಂಬಿಸಲು ಕೆಲ ಅಸ್ವಸ್ಥ ಮನಸ್ಥಿತಿಗಳು ಪ್ರಯತ್ನ ನಡೆಸಿವೆ. ಕೆಲ ಕಿಡಿಗೇಡಿಗಳು ಮಾಡಿದ ಈ ದುಷ್ಕೃತ್ಯವನ್ನು ಕನ್ನಡದ ಕಟ್ಟಾಳುಗಳ ಕೆಲಸ ಎಂದು ಬಿಂಬಿಸುವ ಪಿತೂರಿ ಕೂಡಾ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ .

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ. ಅದನ್ನು ಬಿಟ್ಟು ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ? ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು.

ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ, ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ. ದಾಳಿ ಮಾಡುವುದು ಕಿಡಿಗೇಡಿಗಳ ಕೆಲಸ. ಇನ್ನು ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕ್ಕೊಳ್ಳಲು ಯತ್ನಿಸಿ ಏನೋ ಆಗಬಾರದ್ದು ಆಗಿ ಬಿಟ್ಟಿದೆ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿರುವ ಹೊರಟಿರುವ ಕೆಲ ಮನಸ್ಥಿತಿ ಗಳನ್ನು ಇಲ್ಲೇ ಕಡಿವಾಣ ಹಾಕಿ ನಿಲ್ಲಿಸಬೇಕೆಂದು. ಇದನ್ನು ರಾಜಕೀಯ ಗೊಳಿಸಲು ಬಿಡಬಾರದೆಂದು ಕನ್ನಡದ ಹಿರಿಯರಲ್ಲಿ ಮನವಿ. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ ಇನ್ನಷ್ಟು ಕೆಡುವುದು ಖಂಡಿತಾ . ಈಗಾಗಲೇ ಪ್ರವಾಹಕ್ಕೆ ಸಿಲುಕಿ ನರಳಿರುವ ಕರ್ನಾಟಕದ ನಮ್ಮ ಸಹೋದರರಿಗೆ ನಮ್ಮಆಸರೆ ಬೇಕು ಬನ್ನಿ ಅಲ್ಲಿ ಕೈ ಜೋಡಿಸೋಣ. ಅದನ್ನು ಬಿಟ್ಟು ಇಂತಹ ಸಂಘರ್ಷಕ್ಕಲ್ಲ. ಎಂದು ಸದಾನಂದಗೌಡರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ “ನಿಮಗೆ fund ಮಾಡುವವರಿಗೆ ಇಷ್ಟು ಬಕೆಟ್ ಹಿಡಿಯದೇ ಹೋದರೆ ಹೇಗೆ ಅಲ್ವಾ? ಅದ್ಯಾವನ್ಗೋ ಅದೆಲ್ಲೋ ಹರ್ಟ್ ಆಯ್ತಂತೆ ನಿಮ್ಗೂ ಕೂಡ ಆಗೋಯ್ತು, ಕರ್ನಾಟಕ ನೆರೆಗೆ ನಿಮ್ಮ ಕೊಡುಗೆ ಏನಿದೆ ಅಂತ ಕನ್ನಡಿಗರಿಗೆ ಗೊತ್ತಿದೆ ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ.. ಕರ್ನಾಟಕದಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂತಿದ್ದೀರಿ ಸ್ವಾಭಿಮಾನದ ಬದುಕು ಬಾಳಿ” ಎಂದು ಸಂತೋಷ್ ಮಹದೇವಯ್ಯನವರು ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

“ಉತ್ತರ ಕನಾ೯ಟಕ ಪ್ರವಾಹ ಸಂತ್ರಸ್ತರಿಗೆ ನೆರವು ನಿಡುವ ವಿಚಾರ ಇಲ್ಲಿ ಮಾತನಾಡಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ ಪರಿಹಾರ ತರಲು ಸಾಧ್ಯವಾಗದ ನಿಮಗೆ ರಾಜಕೀಯ ಬೇಕಾ? ಸುಮ್ಮನೆ ರಾಜಿನಾಮೆ ಕೋಟ್ಟು ಮನೆಯಲ್ಲಿ ಇರಿ ಸಾರ್. ಎಲ್ಲ ಗುಳೆ ಹೋದ ಮೇಲೆ ಮೊಳೆ ಹೋಡೆಯೊಕೆ ಬರಬೇಡಿ, ರಾಜ್ಯಕ್ಕೆ ಗೊತ್ತು ನಿಮ್ಮ ಬಿಜೆಪಿಯವರ ಗೊಸುಂಬೆ ಆಟಗಳು” ಎಂದು ಪದ್ಮರಾಜ್ ರವರು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ನೆರೆ ಪರಿಹಾರಕ್ಕೆ ಒಂದು ನಯಾಪೈಸೆ ತರುವ ಯೋಗ್ಯತೆ ಇಲ್ಲ.. ಈಗ ಉತ್ತರ ಭಾರತೀಯ ಮಾರ್ವಾಡಿಗಳ ಪರವಾಗಿ ನಿಂತು ಕನ್ನಡಿಗರ ವಿಶಯವನ್ನ ರಾಜಕೀಯ ಮಾಡಿ ಬೇಳೆ ಬೇಯಿಸ್ಕೊಳ್ತೀರ!! ಎಂದು ಶೃತಿ ಎಚ್.ಎಂ ರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಬ್ಯಾನರ್ ಹರಿದ ಆರೋಪ: ಆರು ಕನ್ನಡ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...