Homeಕರ್ನಾಟಕಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ ಇನ್ನೊರ್ವ ಬಿಜೆಪಿ ಸಂಸದ ಸದಾನಂದಗೌಡ ನಡೆದಿದ್ದು ಕನ್ನಡ ಹೋರಾಟಗಾರರನ್ನು ಕಿಡಿಗೇಡಿ ಎಂದು ಕರೆದಿದ್ದಾರೆ.

ಇಂದು ಮುಂಜಾನೆ 4:30ರ ಸಮಯಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸದಾನಂದಗೌಡರು ‘ಈ ಕೃತ್ಯ ಎಸಗಿರವವರು ಕಿಡಿಗಳೆ ಹೊರತು ಕನ್ನಡದ ಕಟ್ಟಾಳುಗಳಲ್ಲ ಎಂದು ಕರೆದುದ್ದಲ್ಲದೇ ಈ ವಿಚಾರ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ” ಎಂದು ಕರೆ ನೀಡಿದ್ದಾರೆ. ಇವರ ಈ ಹೇಳಿಕೆಗೆ ಕೆರಳಿದ ಕನ್ನಡಿಗರು ಸದಾನಂದಗೌಡರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಮೊದಲು ನಿಮಗೆ ಕಾಳಜಿಯಿದ್ದರೆ ಕೇಂದ್ರದಿಂದ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ. ಸದಾನಂದಗೌಡರ ಪೋಸ್ಟ್ ಮತ್ತು ಅದಕ್ಕೆ ಬಂದ ಕೆಲವು ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಜೈನ ಧಾರ್ಮಿಕ ಕೇಂದ್ರದ ಮುಂದೆ ಹಾಕಿದ್ದ ಹಿಂದಿ ಭಾಷೆಯ ನಾಮ ಫಲಕ ಕಿತ್ತು ಹಾಕಿದ ಘಟನೆ ಯನ್ನು ಭಾಷಾ ಸಂಘರ್ಷವಾಗಿ ಬದಲಾಯಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕ್ಕೊಳ್ಳುತ್ತಿರುವ ಕೈ ಯಾರದ್ದೆಂದು ತಿಳಿದಿದೆ. ಮಾನ್ಯ ಮುಖ್ಯಮಂತ್ರಿಗಳು ಕನ್ನಡ ಹೋರಾಟಗಾರರನ್ನು ಧಮನಿಸುತ್ತಿದ್ದಾರೆ ಎಂಬಂತೆ ಬಿಂಬಿಸಲು ಕೆಲ ಅಸ್ವಸ್ಥ ಮನಸ್ಥಿತಿಗಳು ಪ್ರಯತ್ನ ನಡೆಸಿವೆ. ಕೆಲ ಕಿಡಿಗೇಡಿಗಳು ಮಾಡಿದ ಈ ದುಷ್ಕೃತ್ಯವನ್ನು ಕನ್ನಡದ ಕಟ್ಟಾಳುಗಳ ಕೆಲಸ ಎಂದು ಬಿಂಬಿಸುವ ಪಿತೂರಿ ಕೂಡಾ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ .

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ. ಅದನ್ನು ಬಿಟ್ಟು ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ? ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು.

ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ, ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ. ದಾಳಿ ಮಾಡುವುದು ಕಿಡಿಗೇಡಿಗಳ ಕೆಲಸ. ಇನ್ನು ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕ್ಕೊಳ್ಳಲು ಯತ್ನಿಸಿ ಏನೋ ಆಗಬಾರದ್ದು ಆಗಿ ಬಿಟ್ಟಿದೆ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿರುವ ಹೊರಟಿರುವ ಕೆಲ ಮನಸ್ಥಿತಿ ಗಳನ್ನು ಇಲ್ಲೇ ಕಡಿವಾಣ ಹಾಕಿ ನಿಲ್ಲಿಸಬೇಕೆಂದು. ಇದನ್ನು ರಾಜಕೀಯ ಗೊಳಿಸಲು ಬಿಡಬಾರದೆಂದು ಕನ್ನಡದ ಹಿರಿಯರಲ್ಲಿ ಮನವಿ. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ ಇನ್ನಷ್ಟು ಕೆಡುವುದು ಖಂಡಿತಾ . ಈಗಾಗಲೇ ಪ್ರವಾಹಕ್ಕೆ ಸಿಲುಕಿ ನರಳಿರುವ ಕರ್ನಾಟಕದ ನಮ್ಮ ಸಹೋದರರಿಗೆ ನಮ್ಮಆಸರೆ ಬೇಕು ಬನ್ನಿ ಅಲ್ಲಿ ಕೈ ಜೋಡಿಸೋಣ. ಅದನ್ನು ಬಿಟ್ಟು ಇಂತಹ ಸಂಘರ್ಷಕ್ಕಲ್ಲ. ಎಂದು ಸದಾನಂದಗೌಡರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ “ನಿಮಗೆ fund ಮಾಡುವವರಿಗೆ ಇಷ್ಟು ಬಕೆಟ್ ಹಿಡಿಯದೇ ಹೋದರೆ ಹೇಗೆ ಅಲ್ವಾ? ಅದ್ಯಾವನ್ಗೋ ಅದೆಲ್ಲೋ ಹರ್ಟ್ ಆಯ್ತಂತೆ ನಿಮ್ಗೂ ಕೂಡ ಆಗೋಯ್ತು, ಕರ್ನಾಟಕ ನೆರೆಗೆ ನಿಮ್ಮ ಕೊಡುಗೆ ಏನಿದೆ ಅಂತ ಕನ್ನಡಿಗರಿಗೆ ಗೊತ್ತಿದೆ ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ.. ಕರ್ನಾಟಕದಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂತಿದ್ದೀರಿ ಸ್ವಾಭಿಮಾನದ ಬದುಕು ಬಾಳಿ” ಎಂದು ಸಂತೋಷ್ ಮಹದೇವಯ್ಯನವರು ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

“ಉತ್ತರ ಕನಾ೯ಟಕ ಪ್ರವಾಹ ಸಂತ್ರಸ್ತರಿಗೆ ನೆರವು ನಿಡುವ ವಿಚಾರ ಇಲ್ಲಿ ಮಾತನಾಡಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ ಪರಿಹಾರ ತರಲು ಸಾಧ್ಯವಾಗದ ನಿಮಗೆ ರಾಜಕೀಯ ಬೇಕಾ? ಸುಮ್ಮನೆ ರಾಜಿನಾಮೆ ಕೋಟ್ಟು ಮನೆಯಲ್ಲಿ ಇರಿ ಸಾರ್. ಎಲ್ಲ ಗುಳೆ ಹೋದ ಮೇಲೆ ಮೊಳೆ ಹೋಡೆಯೊಕೆ ಬರಬೇಡಿ, ರಾಜ್ಯಕ್ಕೆ ಗೊತ್ತು ನಿಮ್ಮ ಬಿಜೆಪಿಯವರ ಗೊಸುಂಬೆ ಆಟಗಳು” ಎಂದು ಪದ್ಮರಾಜ್ ರವರು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ನೆರೆ ಪರಿಹಾರಕ್ಕೆ ಒಂದು ನಯಾಪೈಸೆ ತರುವ ಯೋಗ್ಯತೆ ಇಲ್ಲ.. ಈಗ ಉತ್ತರ ಭಾರತೀಯ ಮಾರ್ವಾಡಿಗಳ ಪರವಾಗಿ ನಿಂತು ಕನ್ನಡಿಗರ ವಿಶಯವನ್ನ ರಾಜಕೀಯ ಮಾಡಿ ಬೇಳೆ ಬೇಯಿಸ್ಕೊಳ್ತೀರ!! ಎಂದು ಶೃತಿ ಎಚ್.ಎಂ ರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಬ್ಯಾನರ್ ಹರಿದ ಆರೋಪ: ಆರು ಕನ್ನಡ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...