Homeಕರ್ನಾಟಕಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

ಕನ್ನಡ ಹೋರಾಟಗಾರರನ್ನು ಕಿಡಿಗೇಡಿಗಳೆಂದು ಕರೆದು ಟ್ರೋಲ್ ಆದ ಮತ್ತೋರ್ವ ಬಿಜೆಪಿ ಸಂಸದ ಸದಾನಂದಗೌಡ

- Advertisement -
- Advertisement -

ಹಿಂದಿ ಬ್ಯಾನರ್ ಹರಿದ ಕಾರಣಕ್ಕೆ ಹುಟ್ಟಿಕೊಂಡಿರುವ ವಿವಾದದಲ್ಲಿ ಕನ್ನಡ ಹೋರಾಟಗಾರರನ್ನು ರೌಡಿಗಳೆಂದು ಕರೆದು, ಕೋಮು ಬಣ್ಣ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಸಾಕಷ್ಟು ಟೀಕೆ ಎದುರಿಸಿದ್ದು ನಿಮಗೆಲ್ಲಾ ಗೊತ್ತಿದೆ. ಆ ಹಾದಿಯಲ್ಲಿ ಈಗ ಇನ್ನೊರ್ವ ಬಿಜೆಪಿ ಸಂಸದ ಸದಾನಂದಗೌಡ ನಡೆದಿದ್ದು ಕನ್ನಡ ಹೋರಾಟಗಾರರನ್ನು ಕಿಡಿಗೇಡಿ ಎಂದು ಕರೆದಿದ್ದಾರೆ.

ಇಂದು ಮುಂಜಾನೆ 4:30ರ ಸಮಯಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸದಾನಂದಗೌಡರು ‘ಈ ಕೃತ್ಯ ಎಸಗಿರವವರು ಕಿಡಿಗಳೆ ಹೊರತು ಕನ್ನಡದ ಕಟ್ಟಾಳುಗಳಲ್ಲ ಎಂದು ಕರೆದುದ್ದಲ್ಲದೇ ಈ ವಿಚಾರ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ” ಎಂದು ಕರೆ ನೀಡಿದ್ದಾರೆ. ಇವರ ಈ ಹೇಳಿಕೆಗೆ ಕೆರಳಿದ ಕನ್ನಡಿಗರು ಸದಾನಂದಗೌಡರನ್ನು ಸಾಕಷ್ಟು ಟ್ರೋಲ್ ಮಾಡಿದ್ದಾರೆ. ಮೊದಲು ನಿಮಗೆ ಕಾಳಜಿಯಿದ್ದರೆ ಕೇಂದ್ರದಿಂದ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ. ಸದಾನಂದಗೌಡರ ಪೋಸ್ಟ್ ಮತ್ತು ಅದಕ್ಕೆ ಬಂದ ಕೆಲವು ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಜೈನ ಧಾರ್ಮಿಕ ಕೇಂದ್ರದ ಮುಂದೆ ಹಾಕಿದ್ದ ಹಿಂದಿ ಭಾಷೆಯ ನಾಮ ಫಲಕ ಕಿತ್ತು ಹಾಕಿದ ಘಟನೆ ಯನ್ನು ಭಾಷಾ ಸಂಘರ್ಷವಾಗಿ ಬದಲಾಯಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕ್ಕೊಳ್ಳುತ್ತಿರುವ ಕೈ ಯಾರದ್ದೆಂದು ತಿಳಿದಿದೆ. ಮಾನ್ಯ ಮುಖ್ಯಮಂತ್ರಿಗಳು ಕನ್ನಡ ಹೋರಾಟಗಾರರನ್ನು ಧಮನಿಸುತ್ತಿದ್ದಾರೆ ಎಂಬಂತೆ ಬಿಂಬಿಸಲು ಕೆಲ ಅಸ್ವಸ್ಥ ಮನಸ್ಥಿತಿಗಳು ಪ್ರಯತ್ನ ನಡೆಸಿವೆ. ಕೆಲ ಕಿಡಿಗೇಡಿಗಳು ಮಾಡಿದ ಈ ದುಷ್ಕೃತ್ಯವನ್ನು ಕನ್ನಡದ ಕಟ್ಟಾಳುಗಳ ಕೆಲಸ ಎಂದು ಬಿಂಬಿಸುವ ಪಿತೂರಿ ಕೂಡಾ ಅಷ್ಟೇ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ .

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ. ಅದನ್ನು ಬಿಟ್ಟು ಶಾಂತಿಪ್ರಿಯ ಜೈನ ಸಮುದಾಯದ ಮೇಲೆ ನಡಿಸಿದ ನೈತಿಕ ದಾಳಿ ಎಷ್ಟು ಸರಿ? ಅವರ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿದ್ದು ಎಷ್ಟು ಸರಿ? ಹಿಂದಿ ಭಾಷೆಯ ನಾಮ ಫಲಕ ಹಾಕಿದ ಕಾರ್ಯಕ್ರಮ ಸಂಘಟಕರನ್ನು ಸಂಪರ್ಕಿಸಿ ಗಮನ ಸೆಳೆಯಬೇಕಿತ್ತು ಮತ್ತು ತತ್ ಕ್ಷಣ ಸರಿ ಪಡಿಸಿಕ್ಕೊಳ್ಳುವಂತೆ ಸೂಚಿಸಬೇಕಿತ್ತು.

ಕನ್ನಡದ ವಿಷಯದಲ್ಲಿ ಕನ್ನಡಿಗರ ಮಾತನ್ನು ಧಿಕ್ಕರಿಸುವ ಮನಸ್ಥಿತಿ, ಧೈರ್ಯ ಯಾರಿಗಾದರೂ ಕರ್ನಾಟಕದಲ್ಲಿ ಇದೆಯಾ? ಕಾನೂನು ತನ್ನ ಕೆಲಸ ಮಾಡೇ ಮಾಡುತ್ತೆ . ಚಳುವಳಿ ಮಾಡಿ ತಪ್ಪೆಸಗಿದವರನ್ನು ಸರಿದಾರಿಗೆ ತರುವುದು ಕನ್ನಡಿಗ ಮನಸ್ಥಿತಿ. ದಾಳಿ ಮಾಡುವುದು ಕಿಡಿಗೇಡಿಗಳ ಕೆಲಸ. ಇನ್ನು ಈ ಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕ್ಕೊಳ್ಳಲು ಯತ್ನಿಸಿ ಏನೋ ಆಗಬಾರದ್ದು ಆಗಿ ಬಿಟ್ಟಿದೆ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿರುವ ಹೊರಟಿರುವ ಕೆಲ ಮನಸ್ಥಿತಿ ಗಳನ್ನು ಇಲ್ಲೇ ಕಡಿವಾಣ ಹಾಕಿ ನಿಲ್ಲಿಸಬೇಕೆಂದು. ಇದನ್ನು ರಾಜಕೀಯ ಗೊಳಿಸಲು ಬಿಡಬಾರದೆಂದು ಕನ್ನಡದ ಹಿರಿಯರಲ್ಲಿ ಮನವಿ. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ ಇನ್ನಷ್ಟು ಕೆಡುವುದು ಖಂಡಿತಾ . ಈಗಾಗಲೇ ಪ್ರವಾಹಕ್ಕೆ ಸಿಲುಕಿ ನರಳಿರುವ ಕರ್ನಾಟಕದ ನಮ್ಮ ಸಹೋದರರಿಗೆ ನಮ್ಮಆಸರೆ ಬೇಕು ಬನ್ನಿ ಅಲ್ಲಿ ಕೈ ಜೋಡಿಸೋಣ. ಅದನ್ನು ಬಿಟ್ಟು ಇಂತಹ ಸಂಘರ್ಷಕ್ಕಲ್ಲ. ಎಂದು ಸದಾನಂದಗೌಡರ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

ಇದಕ್ಕೆ “ನಿಮಗೆ fund ಮಾಡುವವರಿಗೆ ಇಷ್ಟು ಬಕೆಟ್ ಹಿಡಿಯದೇ ಹೋದರೆ ಹೇಗೆ ಅಲ್ವಾ? ಅದ್ಯಾವನ್ಗೋ ಅದೆಲ್ಲೋ ಹರ್ಟ್ ಆಯ್ತಂತೆ ನಿಮ್ಗೂ ಕೂಡ ಆಗೋಯ್ತು, ಕರ್ನಾಟಕ ನೆರೆಗೆ ನಿಮ್ಮ ಕೊಡುಗೆ ಏನಿದೆ ಅಂತ ಕನ್ನಡಿಗರಿಗೆ ಗೊತ್ತಿದೆ ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ.. ಕರ್ನಾಟಕದಲ್ಲಿ ಹುಟ್ಟಿ ಇಲ್ಲಿನ ಅನ್ನ ತಿಂತಿದ್ದೀರಿ ಸ್ವಾಭಿಮಾನದ ಬದುಕು ಬಾಳಿ” ಎಂದು ಸಂತೋಷ್ ಮಹದೇವಯ್ಯನವರು ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

“ಉತ್ತರ ಕನಾ೯ಟಕ ಪ್ರವಾಹ ಸಂತ್ರಸ್ತರಿಗೆ ನೆರವು ನಿಡುವ ವಿಚಾರ ಇಲ್ಲಿ ಮಾತನಾಡಬೇಡಿ. ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ ಪರಿಹಾರ ತರಲು ಸಾಧ್ಯವಾಗದ ನಿಮಗೆ ರಾಜಕೀಯ ಬೇಕಾ? ಸುಮ್ಮನೆ ರಾಜಿನಾಮೆ ಕೋಟ್ಟು ಮನೆಯಲ್ಲಿ ಇರಿ ಸಾರ್. ಎಲ್ಲ ಗುಳೆ ಹೋದ ಮೇಲೆ ಮೊಳೆ ಹೋಡೆಯೊಕೆ ಬರಬೇಡಿ, ರಾಜ್ಯಕ್ಕೆ ಗೊತ್ತು ನಿಮ್ಮ ಬಿಜೆಪಿಯವರ ಗೊಸುಂಬೆ ಆಟಗಳು” ಎಂದು ಪದ್ಮರಾಜ್ ರವರು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ನೆರೆ ಪರಿಹಾರಕ್ಕೆ ಒಂದು ನಯಾಪೈಸೆ ತರುವ ಯೋಗ್ಯತೆ ಇಲ್ಲ.. ಈಗ ಉತ್ತರ ಭಾರತೀಯ ಮಾರ್ವಾಡಿಗಳ ಪರವಾಗಿ ನಿಂತು ಕನ್ನಡಿಗರ ವಿಶಯವನ್ನ ರಾಜಕೀಯ ಮಾಡಿ ಬೇಳೆ ಬೇಯಿಸ್ಕೊಳ್ತೀರ!! ಎಂದು ಶೃತಿ ಎಚ್.ಎಂ ರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಬ್ಯಾನರ್ ಹರಿದ ಆರೋಪ: ಆರು ಕನ್ನಡ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...