Homeಕರ್ನಾಟಕಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ತಾಂತ್ರಿಕ ದೋಷದ ನಡುವೆಯೂ ಕನ್ನಡ ಎನ್‌ಇಟಿ ಬರೆದವರು ಕೀ ಆನ್ಸರ್‌ ನೋಡಿ ಆತಂಕಿತರಾಗಿದ್ದಾರೆ.

- Advertisement -
- Advertisement -

ಕನ್ನಡ ಇಚ್ಛಿಕ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಗೊಂದಲದ ಗೂಡಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ಕಾಣಿಸಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ನಂತರದಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ‘ಮರು ಪರೀಕ್ಷೆ’ ನಡೆಸುವುದಾಗಿಯೂ ಹೇಳಿತ್ತು. ಆದರೆ ಈಗ ಬಿಡುಗಡೆ ಮಾಡಿರುವ ‘ಕೀ ಆನ್ಸರ್‌‌ಗಳು’ ಪರೀಕ್ಷೆ ಬರೆದವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

2021, ಡಿಸೆಂಬರ್‌ 26ನೇ ತಾರೀಖಿನಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ನಡೆದಿತ್ತು. “ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದು ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವುದಾಗಿ ಅಂದು ಸಂಜೆಯೇ ಸ್ಪಷ್ಟನೆ ನೀಡಿತ್ತು.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿತ್ತು. ತಾಂತ್ರಿಕ ದೋಷದ ನಡುವೆಯೇ ಪರೀಕ್ಷೆ ಬರೆದ ಆಕಾಂಕ್ಷಿಗಳ ಸಂಬಂಧ ಯಾವುದೇ ಸ್ಪಷ್ಟನೆ ಇರಲಿಲ್ಲ.

“ಎಲ್ಲರಿಗೂ ಮತ್ತೆ ಪರೀಕ್ಷೆ ನಡೆಸುವುದು ಅಗತ್ಯ” ಎಂದು ಕನ್ನಡ ಪರೀಕ್ಷಾರ್ಥಿಗಳು ಆಗ್ರಹಿಸಿದ್ದರು. ಈ ನಡುವೆಯೇ ಕೀ ಅನ್ಸರ್‌ ಬಿಡುಗಡೆಗೊಳಿಸಲಾಗಿದೆ. ಪರೀಕ್ಷಾ ಬರೆದ ವಿದ್ಯಾರ್ಥಿಗಳು ತಮ್ಮ ‘ಕೀ ಆನ್ಸರ್‌’ಗಳನ್ನು ನೋಡಿ ಆತಂಕಕ್ಕೊಳಗಾಗಿದ್ದಾರೆ. ನೂರು ಪ್ರಶ್ನೆಗಳಲ್ಲಿ ಸುಮಾರು 30ರಿಂದ 60 ಪ್ರಶ್ನೆಗಳನ್ನು ಅಟೆಂಪ್ಟ್‌‌ ಮಾಡಿಯೇ ಇಲ್ಲ ಎಂದು ಕೀ ಆನ್ಸರ್‌ ತೋರಿಸುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ನಾನುಗೌರಿ.ಕಾಂಗೆ ಕರೆ ಮಾಡಿದ ಅನೇಕ ಪರೀಕ್ಷಾರ್ಥಿಗಳು ಆತಂಕವನ್ನು ತೋಡಿಕೊಂಡು ತಮ್ಮ ಭವಿಷ್ಯದ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ್ದಾರೆ.

ಮಂಡ್ಯದಿಂದ ಕರೆ ಮಾಡಿದ (ಮೈಸೂರು ವಿವಿ ವಿದ್ಯಾರ್ಥಿ) ಸಂದೀಪ್‌‌  ಅವರು, “ನನ್ನ ಕೀ ಆನ್ಸರ್‌ನಲ್ಲಿ ಶೇ. 60ರಷ್ಟು ಪ್ರಶ್ನೆಗಳು ‘not attempt’ ಎಂದು ಬಂದಿದೆ. ಪ್ರಶ್ನೆ ಪತ್ರಿಕೆಯೂ ಸುಲಭವಾಗಿತ್ತು. ಹೀಗಾಗಿ ಈ ಭಾರಿ ಎನ್‌ಇಟಿ ಪಾಸ್‌ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭ್ಯರ್ಥಿಗಳು ಕಾಯುತ್ತಿದ್ದೆವು. ಕೆಲವರಿಗೆ ಮೊದಲ ಪ್ರಶ್ನೆ ಪತ್ರಿಕೆ ಹೀಗೆ ಸಮಸ್ಯೆಯಾಗಿದೆ. ನನಗೆ ಎರಡನೇ ಪ್ರಶ್ನೆಪತ್ರಿಕೆ ಸಮಸ್ಯೆಯಾಗಿದೆ. submit ಕೊಟ್ಟು ಬಂದಿದ್ದೇನೆ. submit ಕೊಟ್ಟಿಲ್ಲದಿದ್ದರೂ ಅದು auto submit ಆಗಬೇಕಿತ್ತು. ಆದರೂ ಸಮಸ್ಯೆಯಾಗಿದೆ. ಪರೀಕ್ಷಾರ್ಥಿಳೆಲ್ಲ ಚಿಂತೆಗೊಳಗಾಗಿದ್ದೇವೆ. ಒಂದೋ ಎರಡೋ ಪ್ರಶ್ನೆಗಳು not attempt ಎಂದರೆ ಪರವಾಗಿಲ್ಲ. ಆದರೆ ಶೇ. 60 ಪ್ರಶ್ನೆಗಳು ಹೀಗೆಯೇ ಆದರೆ ನಾನು ಕೇವಲ ಶೇ. 40ರಷ್ಟು ಪ್ರಶ್ನೆಗಳನ್ನಷ್ಟೇ ಪ್ರಯತ್ನಿಸಿದ್ದೇನೆ ಎಂದಾಗುತ್ತದೆ. ಸಾಮಾನ್ಯ ಪ್ರಶ್ನೆಪತ್ರಿಕೆಯ ಕೀ ಆನ್ಸರ್‌ನಲ್ಲಿ ಕೆಲವರಿಗೆ ಈ ಸಮಸ್ಯೆಯಾಗಿದ್ದರೆ, ಕನ್ನಡ ಐಚ್ಛಿಕ ಪ್ರಶ್ನೆಪತ್ರಿಕೆಯಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಈ ತೊಂದರೆಯಾಗಿದೆ. ಕನಿಷ್ಠ 30 ಪ್ರಶ್ನೆಗಳಾದರೂ not Attempt ಎಂದು ಎಲ್ಲರಿಗೂ ತೋರಿಸುತ್ತಿದೆ” ಎಂದು ಆರೋಪಿಸಿದರು.

 

“ಪರೀಕ್ಷೆ ದಿನ ಹಿಂದಿ ಪ್ರಶ್ನೆಗಳೆಲ್ಲ ಕಾಣಿಸಿಕೊಂಡು ಆತಂಕಕ್ಕೊಳಗಾದೆವು. ಮತ್ತೆ ಲಾಗಿನ್‌ ಆಗಿ ಅನೇಕರು ಪರೀಕ್ಷೆ ಬರೆದಿದ್ದೇವೆ. ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ. ಕನ್ನಡ ವಿದ್ಯಾರ್ಥಿಗಳಿಗೆ ಮಾತ್ರ ಈ ಸಮಸ್ಯೆಯಾಗುತ್ತಿದೆ” ಎಂದು ಆತಂಕ ತೋಡಿಕೊಂಡರು.

ಮೈಸೂರು ವಿವಿ ವಿದ್ಯಾರ್ಥಿ ಶರತ್‌ ಮಾತನಾಡಿ, “ನೀವು ಸಬ್ಮಿಟ್‌ ಮಾಡಿದ್ದೀರಿ. ಸಬ್ಮಿಟ್ ಆದವರಿಗೆ ಮತ್ತೆ ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎನ್ನಲಾಗಿತ್ತು. ಸಬ್ಮಿಟ್ ಆದವರಿಗೆ ಸರಿಯಾಗಿ ಫಲಿತಾಂಶ ಕೊಡಬೇಕು ತಾನೇ? ಈಗ ನಾಟ್ ಅಟೆಂಪ್ಟ್‌ ಎಂದು ಬರುತ್ತಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನೇ ನೀಡಿ ಬಂದಿದ್ದೇವೆ. ಮೂರ್ನಾಲ್ಕು ಪ್ರಶ್ನೆಗಳನ್ನು ಬಿಟ್ಟು ಬಂದಿದ್ದೇವೆ ಎಂದರೆ ಒಪ್ಪಬಹುದು. ಆದರೆ ಮೂವತ್ತರಿಂದ ಅರವತ್ತು ಪ್ರಶ್ನೆಗಳನ್ನು ಬಿಟ್ಟು ಬರಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಕೀ ಆನ್ಸರ್‌ ಸಂಬಂಧ ನೋಟಿಫಿಕೇಷನ್‌ ಬಿಡುಗಡೆ ಮಾಡಿರುವ ಎನ್‌ಟಿಎ, ತೊಂದರೆಯಾಗಿರುವ ಕನ್ನಡ ಪರೀಕ್ಷಾರ್ಥಿಗಳ ಉತ್ತರ ಪತ್ರಿಕೆಯನ್ನೂ ಒಳಗೊಂಡಿರುವುದಾಗಿ ತಿಳಿಸಿದೆ. ಆದರೆ ತಾಂತ್ರಿಕ ದೋಷದ ನಡುವೆಯೂ ಪರೀಕ್ಷೆ ಬರೆದವರ ಕೀ ಆನ್ಸರ್‌ಗಳಲ್ಲಿ ತೊಂದರೆ ಕಾಣಿಸಿರುವುದು ಗೊಂದಲ ಸೃಷ್ಟಿಸಿದೆ. ಕನ್ನಡದ ಎಲ್ಲ ಪರೀಕ್ಷಾರ್ಥಿಗಳಿಗೂ ಇದೇ ಸಮಸ್ಯೆಯಾಗಿರುವಾಗ ಕೀ ಆನ್ಸರ್‌ ಬಿಟ್ಟು ಗೊಂದಲ ಸೃಷ್ಟಿಸಿರುವುದು ಏತಕ್ಕೆ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ.

 

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು, ಕೀ ಆನ್ಸರ್‌ಗಳನ್ನು ಜನವರಿ 21, 2022ರಂದು ಬಿಡುಗಡೆ ಮಾಡಿದೆ. UGC ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ugcnet.nta.nic.inನಲ್ಲಿ ಪರಿಶೀಲಿಸಬಹುದು. ಆಕ್ಷೇಪಣೆಗಳನ್ನು ಜನವರಿ 24, 2022ರವರೆಗೆ ಸಲ್ಲಿಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆ ಶುಲ್ಕವನ್ನು ಪಾವತಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಪ್ರತಿ ಸವಾಲಿನ ಉತ್ತರಕ್ಕೆ ₹1000 ಸಂಸ್ಕರಣಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆಕ್ಷೇಪಣೆ ಸರಿಯಾಗಿದ್ದರೆ ಕೀ ಆನ್ಸರ್‌ ಪರಿಷ್ಕರಿಸಲಾಗುತ್ತದೆ. ಪಾವತಿಸಿದ ಸಂಸ್ಕರಣಾ ಶುಲ್ಕವನ್ನೂ ಮರುಪಾವತಿಸಲಾಗುತ್ತದೆ.


ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...